<p><strong>ರಟ್ಟೀಹಳ್ಳಿ:</strong> ‘ಪಟ್ಟಣದ ಕಂದಾಯ ಇಲಾಖೆಯ ಜಾಗದಲ್ಲಿ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಜ.19ರಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೂಮಿಪೂಜೆ ನೆರವೇರಿಸುವರು’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ರಾಜಕೀಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2018ರಲ್ಲಿ ರಟ್ಟೀಹಳ್ಳಿ ನೂತನ ತಾಲ್ಲೂಕು ಎಂದು ಘೋಷಣೆಯಾಯಿತು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭರವಸೆ ನೀಡಿದಂತೆ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ₹8.69 ಕೋಟಿ ಅನುದಾನ ನೀಡಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಭೂಮಿಪೂಜೆ ನೆರವೇರಲಿದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವರು. ಈ ವೇಳೆ ಅಗ್ನಿಶಾಮಕ ಠಾಣೆ, ಕಾರ್ಮಿಕ ಭವನ ಉದ್ಘಾಟನೆ ಜರುಗಲಿವೆ ಎಂದು ತಿಳಿಸಿದರು.</p>.<p>ಈ ವೇಳೆ ಮುಖಂಡರಾದ ವೀರನಗೌಡ ಪ್ಯಾಟೀಗೌಡ್ರ, ಪಿ.ಡಿ. ಬಸನಗೌಡ್ರ, ಪರಮೇಶಪ್ಪ ಕಟ್ಟೇಕಾರ, ವಸಂತ ದ್ಯಾವಕ್ಕಳವರ, ವಿನಯ ಪಾಟೀಲ, ಹೇಮಣ್ಣ ಮುದಿರೆಡ್ಡೇರ, ಮನೋಜ ಗೊಣೆಪ್ಪನವರ, ಶಂಕರ ಚನ್ನಗೌಡ್ರ, ಮಂಜುನಾಥ ಅಸ್ವಾಲಿ, ವಿಜಯ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ‘ಪಟ್ಟಣದ ಕಂದಾಯ ಇಲಾಖೆಯ ಜಾಗದಲ್ಲಿ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಜ.19ರಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೂಮಿಪೂಜೆ ನೆರವೇರಿಸುವರು’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ರಾಜಕೀಯ ಮುಖಂಡರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2018ರಲ್ಲಿ ರಟ್ಟೀಹಳ್ಳಿ ನೂತನ ತಾಲ್ಲೂಕು ಎಂದು ಘೋಷಣೆಯಾಯಿತು. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಭರವಸೆ ನೀಡಿದಂತೆ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ₹8.69 ಕೋಟಿ ಅನುದಾನ ನೀಡಿದ್ದು, ಇದೀಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಭೂಮಿಪೂಜೆ ನೆರವೇರಲಿದೆ’ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸುವರು. ಈ ವೇಳೆ ಅಗ್ನಿಶಾಮಕ ಠಾಣೆ, ಕಾರ್ಮಿಕ ಭವನ ಉದ್ಘಾಟನೆ ಜರುಗಲಿವೆ ಎಂದು ತಿಳಿಸಿದರು.</p>.<p>ಈ ವೇಳೆ ಮುಖಂಡರಾದ ವೀರನಗೌಡ ಪ್ಯಾಟೀಗೌಡ್ರ, ಪಿ.ಡಿ. ಬಸನಗೌಡ್ರ, ಪರಮೇಶಪ್ಪ ಕಟ್ಟೇಕಾರ, ವಸಂತ ದ್ಯಾವಕ್ಕಳವರ, ವಿನಯ ಪಾಟೀಲ, ಹೇಮಣ್ಣ ಮುದಿರೆಡ್ಡೇರ, ಮನೋಜ ಗೊಣೆಪ್ಪನವರ, ಶಂಕರ ಚನ್ನಗೌಡ್ರ, ಮಂಜುನಾಥ ಅಸ್ವಾಲಿ, ವಿಜಯ ಅಂಗಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>