<p><strong>ಹಾವೇರಿ</strong>: ‘ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜುಲೈ 29ರಿಂದ ಆಗಸ್ಟ್ 20ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜರುಗಿದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣಾ ನೀತಿ ಸಂಹಿತೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣೆ ಸುಗಮ ರೀತಿಯಲ್ಲಿ ನಡೆಸಲು ಸಹಕಾರ ನೀಡಬೇಕು’ ಎಂದರು.</p>.<p>‘ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5,869 ಪುರುಷರು, 5,842 ಮಹಿಳೆಯರು ಹಾಗೂ ಇತರೆ ಒಬ್ಬರು ಸೇರಿ 11,712 ಮತದಾರರಿದ್ದಾರೆ. ಈ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಮತಯಂತ್ರಗಳನ್ನು ಪ್ರಥಮ ಹಂತದ ತಪಾಸಣೆ ನಡೆಸಿ ತಹಶೀಲ್ದಾರ್ ಸುಪರ್ದಿಗೆ ಕಳುಹಿಸಲಾಗುವುದು. ಈ ಚುನಾವಣೆಯಲ್ಲಿ ವಿ.ವಿ.ಪ್ಯಾಟ್ ಇರುವುದಿಲ್ಲ. ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್ ಮಾತ್ರ ಬಳಸಲಾಗುವುದು’ ಎಂದರು.</p>.<p>‘ಜುಲೈ 29ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಂತರ, ಆಗಸ್ಟ್ 5ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಚುನಾವಣೆಗೆ ಸ್ಪರ್ಧಿಸುವ ಸಾಮಾನ್ಯ ಅಭ್ಯರ್ಥಿಯು ₹ 1 ಸಾವಿರ ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಸಮುದಾಯ, ಮಹಿಳಾ ಅಭ್ಯರ್ಥಿಯು ₹ 500 ಮೊತ್ತದ ಠೇವಣಿ ಸಲ್ಲಿಸಬೇಕು’ ಎಂದರು.</p>.<p>‘ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಗರಿಷ್ಠ ₹ 1 ಲಕ್ಷ ವೆಚ್ಚಕ್ಕೆ ಅವಕಾಶವಿದೆ. ರಟ್ಟಿಹಳ್ಳಿ ಕೃಷಿ ಇಲಾಖೆ ಕಟ್ಟಡದಲ್ಲಿ ಚುನಾವಣಾ ಕಚೇರಿ ಆರಂಭಿಸಲಾಗಿದ್ದು, ಅಭ್ಯರ್ಥಿಗಳು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಮಸ್ಟರಿಂಗ್–ಡಿಮಸ್ಟರಿಂಗ್, ಮತ ಎಣಿಕೆ: ‘ರಟ್ಟೀಹಳ್ಳಿಯ ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯ ಜರುಗಲಿದೆ’ ಎಂದರು.</p>.<p>‘ಆಗಸ್ಟ್ 17ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನವಿದೆ. ಆಗಸ್ಟ್ 20ರಂದು ಮತ ಎಣಿಕೆ ನಡೆಯಲಿದೆ. 92 ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಅವರಿಗೆ ತರಬೇತಿ ನೀಡಲಾಗುತ್ತಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಎಲ್ಲ ಕಡೆಯೂ ಪೊಲೀಸರ ಬಿಗಿ ಭದ್ರತೆ ಇರಲಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್., ಚುನಾವಣಾ ತಹಶೀಲ್ದಾರ್ ಅಮೃತಗೌಡ ಪಾಟೀಲ ಇದ್ದರು.</p>.<p><strong>ಚುನಾವಣಾ ವೇಳಾಪಟ್ಟಿ ಅಧಿಸೂಚನೆ ಪ್ರಕಟ</strong>; ಜುಲೈ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಆಗಸ್ಟ್ 5 ನಾಮಪತ್ರ ಪರಿಶೀಲನೆ: ಆಗಸ್ಟ್ 6 ನಾಪಪತ್ರ ವಾಪಸ್ಗೆ ಕೊನೆ ದಿನ: ಆಗಸ್ಟ್ 8 ಮತದಾನ ದಿನ; ಆಗಸ್ಟ್ 17 (ಬೆಳಿಗ್ಗೆ 7ರಿಂದ ಸಂಜೆ 5) ಮರುಮತದಾನ (ಅವಶ್ಯವಿದ್ದಲ್ಲಿ); ಆಗಸ್ಟ್ 19 ಮತ ಎಣಿಕೆ: ಆಗಸ್ಟ್ 20 (ಬೆಳಿಗ್ಗೆ 8 ಗಂಟೆಯಿಂದ)</p>.<p><strong>ಚುನಾವಣಾಧಿಕಾರಿಗಳ ನೇಮಕ</strong> </p><p>ವಾರ್ಡ್ ನಂ. 1ರಿಂದ 8: ಹಿರೇಕೆರೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಮಹಾದೇವ (99019 12980) ವಾರ್ಡ್ ನಂ. 9ರಿಂದ 15: ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗರಾಜು (78928 14438)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಜುಲೈ 29ರಿಂದ ಆಗಸ್ಟ್ 20ರವರೆಗೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಯಾರಾದರೂ ನೀತಿ ಸಂಹಿತೆ ಉಲ್ಲಂಘಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜರುಗಿದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣಾ ನೀತಿ ಸಂಹಿತೆಯನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಚುನಾವಣೆ ಸುಗಮ ರೀತಿಯಲ್ಲಿ ನಡೆಸಲು ಸಹಕಾರ ನೀಡಬೇಕು’ ಎಂದರು.</p>.<p>‘ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 5,869 ಪುರುಷರು, 5,842 ಮಹಿಳೆಯರು ಹಾಗೂ ಇತರೆ ಒಬ್ಬರು ಸೇರಿ 11,712 ಮತದಾರರಿದ್ದಾರೆ. ಈ ಚುನಾವಣೆಯಲ್ಲಿ ಇವಿಎಂ ಮತಯಂತ್ರಗಳನ್ನು ಬಳಸಲಾಗುತ್ತಿದೆ. ಮತಯಂತ್ರಗಳನ್ನು ಪ್ರಥಮ ಹಂತದ ತಪಾಸಣೆ ನಡೆಸಿ ತಹಶೀಲ್ದಾರ್ ಸುಪರ್ದಿಗೆ ಕಳುಹಿಸಲಾಗುವುದು. ಈ ಚುನಾವಣೆಯಲ್ಲಿ ವಿ.ವಿ.ಪ್ಯಾಟ್ ಇರುವುದಿಲ್ಲ. ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್ ಮಾತ್ರ ಬಳಸಲಾಗುವುದು’ ಎಂದರು.</p>.<p>‘ಜುಲೈ 29ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನಂತರ, ಆಗಸ್ಟ್ 5ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದೆ. ಚುನಾವಣೆಗೆ ಸ್ಪರ್ಧಿಸುವ ಸಾಮಾನ್ಯ ಅಭ್ಯರ್ಥಿಯು ₹ 1 ಸಾವಿರ ಹಾಗೂ ಹಿಂದುಳಿದ ವರ್ಗ, ಪರಿಶಿಷ್ಟ ಸಮುದಾಯ, ಮಹಿಳಾ ಅಭ್ಯರ್ಥಿಯು ₹ 500 ಮೊತ್ತದ ಠೇವಣಿ ಸಲ್ಲಿಸಬೇಕು’ ಎಂದರು.</p>.<p>‘ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಗರಿಷ್ಠ ₹ 1 ಲಕ್ಷ ವೆಚ್ಚಕ್ಕೆ ಅವಕಾಶವಿದೆ. ರಟ್ಟಿಹಳ್ಳಿ ಕೃಷಿ ಇಲಾಖೆ ಕಟ್ಟಡದಲ್ಲಿ ಚುನಾವಣಾ ಕಚೇರಿ ಆರಂಭಿಸಲಾಗಿದ್ದು, ಅಭ್ಯರ್ಥಿಗಳು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು’ ಎಂದು ಹೇಳಿದರು.</p>.<p>ಮಸ್ಟರಿಂಗ್–ಡಿಮಸ್ಟರಿಂಗ್, ಮತ ಎಣಿಕೆ: ‘ರಟ್ಟೀಹಳ್ಳಿಯ ತರಳಬಾಳು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮಸ್ಟರಿಂಗ್, ಡಿ-ಮಸ್ಟರಿಂಗ್ ಹಾಗೂ ಮತ ಎಣಿಕೆ ಕಾರ್ಯ ಜರುಗಲಿದೆ’ ಎಂದರು.</p>.<p>‘ಆಗಸ್ಟ್ 17ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನವಿದೆ. ಆಗಸ್ಟ್ 20ರಂದು ಮತ ಎಣಿಕೆ ನಡೆಯಲಿದೆ. 92 ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಅವರಿಗೆ ತರಬೇತಿ ನೀಡಲಾಗುತ್ತಿದೆ. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಎಲ್ಲ ಕಡೆಯೂ ಪೊಲೀಸರ ಬಿಗಿ ಭದ್ರತೆ ಇರಲಿದೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್., ಚುನಾವಣಾ ತಹಶೀಲ್ದಾರ್ ಅಮೃತಗೌಡ ಪಾಟೀಲ ಇದ್ದರು.</p>.<p><strong>ಚುನಾವಣಾ ವೇಳಾಪಟ್ಟಿ ಅಧಿಸೂಚನೆ ಪ್ರಕಟ</strong>; ಜುಲೈ 29 ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಆಗಸ್ಟ್ 5 ನಾಮಪತ್ರ ಪರಿಶೀಲನೆ: ಆಗಸ್ಟ್ 6 ನಾಪಪತ್ರ ವಾಪಸ್ಗೆ ಕೊನೆ ದಿನ: ಆಗಸ್ಟ್ 8 ಮತದಾನ ದಿನ; ಆಗಸ್ಟ್ 17 (ಬೆಳಿಗ್ಗೆ 7ರಿಂದ ಸಂಜೆ 5) ಮರುಮತದಾನ (ಅವಶ್ಯವಿದ್ದಲ್ಲಿ); ಆಗಸ್ಟ್ 19 ಮತ ಎಣಿಕೆ: ಆಗಸ್ಟ್ 20 (ಬೆಳಿಗ್ಗೆ 8 ಗಂಟೆಯಿಂದ)</p>.<p><strong>ಚುನಾವಣಾಧಿಕಾರಿಗಳ ನೇಮಕ</strong> </p><p>ವಾರ್ಡ್ ನಂ. 1ರಿಂದ 8: ಹಿರೇಕೆರೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಮಹಾದೇವ (99019 12980) ವಾರ್ಡ್ ನಂ. 9ರಿಂದ 15: ಹಿರೇಕೆರೂರ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಗಂಗರಾಜು (78928 14438)</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>