ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಣ್ಣ ಪ್ರತಿಮೆ ತೆರವಿಗೆ ಹಾವೇರಿ ಕುರುಬರ ಸಂಘದಿಂದ ಖಂಡನೆ

Last Updated 18 ಆಗಸ್ಟ್ 2020, 12:11 IST
ಅಕ್ಷರ ಗಾತ್ರ

ಹಾವೇರಿ: ಬೆಳಗಾವಿಯ ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವುಗೊಳಿಸಿರುವುದು ಖಂಡನಾರ್ಹ. ಪುನಃ ಅಲ್ಲಿಯೇ ಪ್ರತಿಮೆ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಹಾವೇರಿ ಜಿಲ್ಲಾ ಕುರುಬರ ಸಂಘದ ಪದಾಧಿಕಾರಿಗಳು ಮಂಗಳವಾರ ದೇವಗಿರಿಯ ಜಿಲ್ಲಾಡಳಿತ ಭವನದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನ ಪ್ರತಿಮೆ ತೆರವುಗೊಳಿಸಿ ಅಪಮಾನ ಮಾಡಲಾಗಿದೆ. ಪೀರನವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಶತಮಾನಗಳಿಂದ ಇದೆ. ರಸ್ತೆ ವಿಸ್ತರಣೆ ಹಾಗೂ ಅಭಿವೃದ್ಧಿ ಮಾಡುವ ಸಂದರ್ಭದಲ್ಲಿ ತಾತ್ಕಾಲಿಕವಾಗಿ ತೆರವುಗೊಳಿಸಿರಬಹುದು. ಆದರೆ ಕ್ಷುಲ್ಲಕ ಕಾರಣ ನೀಡಿ ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಜಿಲ್ಲಾಡಳಿತ ಕುಂಟು ನೆಪ ಹೇಳುತ್ತಿರುವುದು ಖಂಡನೀಯ ಎಂದು ಮನವಿಯಲ್ಲಿ ಒತ್ತಾಯಿಸಿದೆ.

ಮುಖಂಡರಾದ ಎಚ್.ಬಿ.ಗಾಜಿಗೌಡ್ರ, ಬಸಣ್ಣ ಕಂಬಳಿ, ಈರಪ್ಪ ಲಮಾಣಿ, ರಮೇಶ ಶಿವಣ್ಣನವರ, ಫಕ್ಕೀರಪ್ಪ ಕುಂದೂರ, ಪಿ.ಎಸ್.ಮಜ್ಜಗಿ. ನಿಂಗಪ್ಪ ಗಾಜಿಯವರ, ಮಾಲತೇಶ ಬಣಕಾರ, ಕೆ.ಡಿ.ತೋಟಗೇರ,ನಿಂಗಪ್ಪ ಸಣ್ಣಕ್ಕಿ, ಫಕ್ಕೀರಪ್ಪ ಬರಡಿ, ಶಿವಾನಂದ ಮಾಳಿ, ಶಿವಾನಂದ ಕರಿಗಾರ, ಪೂರ್ಣೇಶ ಪೂಜಾರ, ಎಮ್.ಸಿ.ಆಲದಕಟ್ಟಿ, ವಿನಾಯಕ ಕುರುಬರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT