<p>ಹಾವೇರಿ: ‘ಸಫಾಯಿ ಕರ್ಮಚಾರಿಗಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಖರ ಅಂಕಿ-ಸoಖ್ಯೆ ಗುರುತಿಸಬೇಕಿದೆ. ಹೀಗಾಗಿ ಸಫಾಯಿ ಕರ್ಮಚಾರಿಗಳ ಪುನರ್ ಸಮೀಕ್ಷೆಯನ್ನು ಶೀಘ್ರದಲ್ಲೇ ನಡೆಸಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,‘ಈ ಹಿಂದೆ ನಡೆಸಿದ ಸಮೀಕ್ಷೆ ಅನುಸಾರ ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳ ಸಂಖ್ಯೆಯು 1,42,291 ಹಾಗೂ ಅವಲಂಬಿತರು ಸೇರಿ 18 ಲಕ್ಷ. ಆದರೆ ಈ ಸಂಖ್ಯೆಯು ತುಂಬಾ ಹಳೆಯದಾಗಿದೆ. ಈ ಸಮೀಕ್ಷೆಯಲ್ಲಿ ಕೇವಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ಮಾತ್ರ ಪರಿಗಣಿಸಲಾಗಿದೆ. ಆದರೆ ಖಾಸಗಿ/ ಸರ್ಕಾರಿ, ಅರೆ ಸರ್ಕಾರಿ, ಆಸ್ಪತ್ರೆ ಮುಂತಾದ ಕಚೇರಿಗಳಲ್ಲಿ ಕೆಲಸ ಮಾಡುವವರನ್ನು ಪರಿಗಣಿಸಿಲ್ಲ ಎಂದು ಹೇಳಿದರು.</p>.<p>ಪುನರ್ ಸಮೀಕ್ಷಾ ಕಾರ್ಯವನ್ನು ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ನಡೆಸಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರು ಸೇರಿದಂತೆ ಅವರ ಕುಟುಂಬ ವರ್ಗದವರನ್ನು ಪರಿಗಣಿಸಲು ಉದ್ದೇಶಿಸಲಾಗಿದ್ದು, ಸಫಾಯಿ ಕರ್ಮಚಾರಿಗಳ ನಿಖರ ಅಂಕಿ-ಸಂಖ್ಯೆಯ ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದು ಅಭಿಪ್ರಾಯಪಟ್ಟರು.</p>.<p>ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ, ನೇರಸಾಲ, ಸ್ವಯಂ ಉದ್ಯೋಗ, ಐರಾವತ, ಭೂ ಒಡೆತನದಂತ ಯೋಜನೆಗಳಿವೆ. ಈ ಯೋಜನೆಗಳ ಜೊತೆಗೆ ಸಫಾಯಿ ಕರ್ಮಚಾರಿಗಳ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಘೋಷಿಸಲು ಹಾಗೂ ನಿವೇಶನ ಮತ್ತು ವಸತಿ ಇರದ ಸಫಾಯಿ ಕರ್ಮಚಾರಿಗಳಿಗೆ ಸಕಲ ಸೌಕರ್ಯ ಒಳಗೊಂಡ ಸೂರು ಒದಗಿಸಲು ನಿಗಮ ಚಿಂತನೆ ನಡೆಸಿದೆ ಎಂದು ಹೇಳಿದರು.</p>.<p>ಸಫಾಯಿ ಕರ್ಮಚಾರಿಗಳು ಹಾಗೂ ಅವರ ಅವಲಂಬಿತರ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 1 ಸಾವಿರ ಕೋಟಿಯನ್ನು ನಿಗಮಕ್ಕೆ ನೀಡಬೇಕು. ಇದರ ಜತೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಮಗದಿಂದ ₹500 ಕೋಟಿ ನೀಡುವಂತೆ ಕೋರಲಾಗಿದೆ. ₹1500 ಕೋಟಿ ಅನುದಾನ ನೀಡಿದರೆ ಇನ್ನು 2 ವರ್ಷಗಳಲ್ಲಿ ಈ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಮಾಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜಯಗಾಂಧಿ ಸಂಜೀವಣ್ಣನವರ, ಗೌರವ ಅಧ್ಯಕ್ಷ ಬಸವರಾಜ ಹೆಡಿಗೊಂಡ, ಕಾನೂನು ಸಲಹೆಗಾರರಾದ ಎಸ್. ಜಿ. ಹೊನಪ್ಪನವರ ಹಾಗೂ ಉಡಚಪ್ಪ ಮಾಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಸಫಾಯಿ ಕರ್ಮಚಾರಿಗಳನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ನಿಖರ ಅಂಕಿ-ಸoಖ್ಯೆ ಗುರುತಿಸಬೇಕಿದೆ. ಹೀಗಾಗಿ ಸಫಾಯಿ ಕರ್ಮಚಾರಿಗಳ ಪುನರ್ ಸಮೀಕ್ಷೆಯನ್ನು ಶೀಘ್ರದಲ್ಲೇ ನಡೆಸಲು ನಿರ್ಧರಿಸಲಾಗಿದೆ’ ಎಂದು ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್. ಹನುಮಂತಪ್ಪ ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,‘ಈ ಹಿಂದೆ ನಡೆಸಿದ ಸಮೀಕ್ಷೆ ಅನುಸಾರ ರಾಜ್ಯದಲ್ಲಿ ಸಫಾಯಿ ಕರ್ಮಚಾರಿಗಳ ಸಂಖ್ಯೆಯು 1,42,291 ಹಾಗೂ ಅವಲಂಬಿತರು ಸೇರಿ 18 ಲಕ್ಷ. ಆದರೆ ಈ ಸಂಖ್ಯೆಯು ತುಂಬಾ ಹಳೆಯದಾಗಿದೆ. ಈ ಸಮೀಕ್ಷೆಯಲ್ಲಿ ಕೇವಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರನ್ನು ಮಾತ್ರ ಪರಿಗಣಿಸಲಾಗಿದೆ. ಆದರೆ ಖಾಸಗಿ/ ಸರ್ಕಾರಿ, ಅರೆ ಸರ್ಕಾರಿ, ಆಸ್ಪತ್ರೆ ಮುಂತಾದ ಕಚೇರಿಗಳಲ್ಲಿ ಕೆಲಸ ಮಾಡುವವರನ್ನು ಪರಿಗಣಿಸಿಲ್ಲ ಎಂದು ಹೇಳಿದರು.</p>.<p>ಪುನರ್ ಸಮೀಕ್ಷಾ ಕಾರ್ಯವನ್ನು ಬೆಂಗಳೂರಿನ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ನಡೆಸಲಿದ್ದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವವರು ಸೇರಿದಂತೆ ಅವರ ಕುಟುಂಬ ವರ್ಗದವರನ್ನು ಪರಿಗಣಿಸಲು ಉದ್ದೇಶಿಸಲಾಗಿದ್ದು, ಸಫಾಯಿ ಕರ್ಮಚಾರಿಗಳ ನಿಖರ ಅಂಕಿ-ಸಂಖ್ಯೆಯ ಮಾಹಿತಿ ಸಿಗುವ ನಿರೀಕ್ಷೆ ಇದೆ ಎಂದು ಅಭಿಪ್ರಾಯಪಟ್ಟರು.</p>.<p>ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಲ್ಲಿ ಗಂಗಾ ಕಲ್ಯಾಣ, ನೇರಸಾಲ, ಸ್ವಯಂ ಉದ್ಯೋಗ, ಐರಾವತ, ಭೂ ಒಡೆತನದಂತ ಯೋಜನೆಗಳಿವೆ. ಈ ಯೋಜನೆಗಳ ಜೊತೆಗೆ ಸಫಾಯಿ ಕರ್ಮಚಾರಿಗಳ ಸಮಗ್ರ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಘೋಷಿಸಲು ಹಾಗೂ ನಿವೇಶನ ಮತ್ತು ವಸತಿ ಇರದ ಸಫಾಯಿ ಕರ್ಮಚಾರಿಗಳಿಗೆ ಸಕಲ ಸೌಕರ್ಯ ಒಳಗೊಂಡ ಸೂರು ಒದಗಿಸಲು ನಿಗಮ ಚಿಂತನೆ ನಡೆಸಿದೆ ಎಂದು ಹೇಳಿದರು.</p>.<p>ಸಫಾಯಿ ಕರ್ಮಚಾರಿಗಳು ಹಾಗೂ ಅವರ ಅವಲಂಬಿತರ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 1 ಸಾವಿರ ಕೋಟಿಯನ್ನು ನಿಗಮಕ್ಕೆ ನೀಡಬೇಕು. ಇದರ ಜತೆಗೆ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಮಗದಿಂದ ₹500 ಕೋಟಿ ನೀಡುವಂತೆ ಕೋರಲಾಗಿದೆ. ₹1500 ಕೋಟಿ ಅನುದಾನ ನೀಡಿದರೆ ಇನ್ನು 2 ವರ್ಷಗಳಲ್ಲಿ ಈ ಸಮುದಾಯದ ಸರ್ವತೋಮುಖ ಬೆಳವಣಿಗೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವೆ ಎಂದು ತಿಳಿಸಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮೇಶ್ವರಪ್ಪ ಮೇಗಳಮನಿ, ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಮಾಳಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜಯಗಾಂಧಿ ಸಂಜೀವಣ್ಣನವರ, ಗೌರವ ಅಧ್ಯಕ್ಷ ಬಸವರಾಜ ಹೆಡಿಗೊಂಡ, ಕಾನೂನು ಸಲಹೆಗಾರರಾದ ಎಸ್. ಜಿ. ಹೊನಪ್ಪನವರ ಹಾಗೂ ಉಡಚಪ್ಪ ಮಾಳಗಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>