<p><strong>ಶಿಗ್ಗಾವಿ:</strong> ಕಾಂಗ್ರೆಸ್ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಹಿಂದುಳಿದ ಜನರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ರೇಣುಕಾ ಪ್ಯಾಲೇಸ್ ಸಭಾ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಮನಕ್ಕೆ ಮುಟ್ಟಿದ್ದು, ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಅವುಗಳನ್ನು ಮತ್ತೆ ನೆನಪಿಸುವ ಮೂಲಕ ಮತಯಾಚಿಸಬೇಕು. ಬಿಜೆಪಿಯು ಕಾಂಗ್ರೆಸ್ ಅಭಿವೃದ್ಧಿ ಸಹಿಸಲಾಗದೆ ಸುಳ್ಳು ಭರವಸೆ ನೀಡುತ್ತಿದೆ. ಹೀಗಾಗಿ ನಾವೇ ಕಾಂಗ್ರೆಸ್ ಅಭ್ಯರ್ಥಿ ಎಂದು ಭಾವಿಸಿ ಮತಯಾಚನೆ ಮಾಡಬೇಕು ಎಂದರು.</p>.<p>ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಮಾತನಾಡಿ, ಚುನಾವಣೆ ಪ್ರಚಾರದಲ್ಲಿ ಯುವ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಂತೆ ಮನೆ, ಮನೆಗಳಿಗೆ ಹೋಗಿ ಪ್ರಚಾರ ಮಾಡಬೇಕು ಎಂದು ಹೇಳಿದರು.</p>.<p>ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಬಿ.ಸಿ.ಪಾಟೀಲ, ಸವಣೂರ ತಾಲ್ಲೂಕಿನ ಅಧ್ಯಕ್ಷ ಜೆ.ಎಂ.ಮುಲ್ಲಾ, ಅಂಜುನ್ ಸಂಸ್ಥೆ ಅಧ್ಯಕ್ಷ ಮಹ್ಮದ ಖತೀಬ, ಮುಖಂಡರಾದ ರಾಜೇಶ್ವರಿ ಪಾಟೀಲ, ಶಿವಾನಂದ ರಾಮಗೇರಿ, ಶಂಭಣ್ಣ ಆಜೂರ, ಎಂ.ಎನ್.ಹೊನ್ನಕೇರಿ, ಪುರಸಭೆ ಸದಸ್ಯರಾದ ಎಂ.ಎಂ.ಖಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಕಾಂಗ್ರೆಸ್ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಹಿಂದುಳಿದ ಜನರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ರೇಣುಕಾ ಪ್ಯಾಲೇಸ್ ಸಭಾ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.</p>.<p>ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಮನಕ್ಕೆ ಮುಟ್ಟಿದ್ದು, ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಅವುಗಳನ್ನು ಮತ್ತೆ ನೆನಪಿಸುವ ಮೂಲಕ ಮತಯಾಚಿಸಬೇಕು. ಬಿಜೆಪಿಯು ಕಾಂಗ್ರೆಸ್ ಅಭಿವೃದ್ಧಿ ಸಹಿಸಲಾಗದೆ ಸುಳ್ಳು ಭರವಸೆ ನೀಡುತ್ತಿದೆ. ಹೀಗಾಗಿ ನಾವೇ ಕಾಂಗ್ರೆಸ್ ಅಭ್ಯರ್ಥಿ ಎಂದು ಭಾವಿಸಿ ಮತಯಾಚನೆ ಮಾಡಬೇಕು ಎಂದರು.</p>.<p>ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಮಾತನಾಡಿ, ಚುನಾವಣೆ ಪ್ರಚಾರದಲ್ಲಿ ಯುವ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಂತೆ ಮನೆ, ಮನೆಗಳಿಗೆ ಹೋಗಿ ಪ್ರಚಾರ ಮಾಡಬೇಕು ಎಂದು ಹೇಳಿದರು.</p>.<p>ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಬಿ.ಸಿ.ಪಾಟೀಲ, ಸವಣೂರ ತಾಲ್ಲೂಕಿನ ಅಧ್ಯಕ್ಷ ಜೆ.ಎಂ.ಮುಲ್ಲಾ, ಅಂಜುನ್ ಸಂಸ್ಥೆ ಅಧ್ಯಕ್ಷ ಮಹ್ಮದ ಖತೀಬ, ಮುಖಂಡರಾದ ರಾಜೇಶ್ವರಿ ಪಾಟೀಲ, ಶಿವಾನಂದ ರಾಮಗೇರಿ, ಶಂಭಣ್ಣ ಆಜೂರ, ಎಂ.ಎನ್.ಹೊನ್ನಕೇರಿ, ಪುರಸಭೆ ಸದಸ್ಯರಾದ ಎಂ.ಎಂ.ಖಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>