ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾನಗಳಿಗೆ ಜಾತಿ–ಧರ್ಮದ ಹಂಗಿಲ್ಲ: ಸಂಜೀವಕುಮಾರ್ ನೀರಲಗಿ

ರೆಡ್‌ ಕ್ರಾಸ್ ದಿನಾಚರಣೆ
Last Updated 8 ಮೇ 2019, 13:34 IST
ಅಕ್ಷರ ಗಾತ್ರ

ಹಾವೇರಿ:ಜಾತಿ–ಧರ್ಮಗಳನ್ನು ರಾಜಕಾರಣದಲ್ಲಿ ಬಳಸಬಹುದೇ ಹೊರತು, ರಕ್ತ, ನೇತ್ರ, ಅಂಗ, ದೇಹ ದಾನಗಳಲ್ಲಿ ಸಾಧ್ಯವಿಲ್ಲ. ಯಾವುದೇ ಪವಿತ್ರ ಕಾರ್ಯಗಳಿಗೆ ಜಾತಿ– ಧರ್ಮಗಳ ಹಂಗಿಲ್ಲ ಎಂದು ರೆಡ್‌ಕ್ರಾಸ್‌ ಸಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವ ನೀರಲಗಿ ಹೇಳಿದರು.

ನಗರದ ಜಿಲ್ಲಾ ಆರೋಗ್ಯಭವನದಲ್ಲಿ ಬುಧವಾರ ‘ವಿಶ್ವ ರೆಡ್‌ಕ್ರಾಸ್‌ ದಿನ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ’ದಲ್ಲಿ ಅವರು ಮಾತನಾಡಿದರು.

ರೆಡ್‌ಕ್ರಾಸ್‌ ಸಂಸ್ಥೆಯು ವಿಶ್ವದಲ್ಲಿಯೇ ಅತ್ಯಂತ ದೊಡ್ಡ ಸರ್ಕಾರೇತರ ಸಂಸ್ಥೆಯಾಗಿದೆ. ಜಿಲ್ಲೆಯಲ್ಲಿ ಕೆಲವು ಕಾರಣಗಳಿಂದಾಗಿ 3 ವರ್ಷಗಳ ಕಾಲ ರೆಡ್‌ಕ್ರಾಸ್‌ ಸಂಸ್ಥೆ ಕಾರ್ಯವು ಸ್ಥಗಿತಗೊಂಡಿತ್ತು. ಹಿಂದಿನ ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಎಂ.ವಿ. ಮರುಜೀವ ನೀಡಿದರು ಎಂದ ಅವರು, ಈ ಸಂಸ್ಥೆ ಸಾಮಾಜಿಕ ಸೇವೆ, ಬಡವರಿಗೆ ಸಹಾಯ ಹಾಗೂ ಮಾನವಿಯತೆಯ ಕಾರ್ಯ ಮಾಡುತ್ತದೆ ಎಂದರು.

ವಿಶ್ವ ರೆಡ್‌ಕ್ರಾಸ್‌ ದಿನವು ಕೇವಲ ಆಚರಣೆಗೆ ಸೀಮಿತವಾಗದೇ, ಸಂಸ್ಥೆಯನ್ನು ಬೆಳೆಸುವ ಕೆಲಸವಾಗಬೇಕು. ರಕ್ತದಾನ, ಅಂಗದಾನ, ದೇಹದಾನಕ್ಕೆ ಸ್ವಯಂ ಪ್ರೇರಿತವಾಗಿ ಬರಲು ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ. ಲೀಲಾವತಿ ಮಾತನಾಡಿ, ಹಿಂದಿನ ಕಾಲದಲ್ಲಿ ಯುದ್ದ, ಭೂಕಂಪ, ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂದರ್ಭದಲ್ಲಿ ಜನ ಸರಿಯಾದ ಚಿಕಿತ್ಸೆ ಸಿಗದೇ ಸಾವಿಗೀಡಾಗುತ್ತಿದ್ದರು. ಅದಕ್ಕಾಗಿ ಸ್ವಿಜರ್‌ಲ್ಯಾಂಡ್‌ನ ವ್ಯಾಪಾರಿ ಹೆನ್ರಿ ಡುನೆಂಟ್‌ 1863ರಲ್ಲಿ ನೊಂದವರಿಗೆ ನೆರವಾಗಲು ‘ರೆಡ್‌ ಕ್ರಾಸ್‌’ ಸ್ಥಾಪಿಸಿದರು ಎಂದರು.

ರೆಡ್‌ಕ್ರಾಸ್‌ ಭಾರತದಲ್ಲಿ 1920ರಲ್ಲಿ ಸ್ಥಾಪನೆಯಾಗಿದ್ದು, ಉತ್ತಮ ಸೇವೆಯನ್ನು ನೀಡುತ್ತಿದೆ. ತುರ್ತು ಸಂದರ್ಭ ನಿರ್ವಹಿಸುವ ತರಬೇತಿ ಮತ್ತು ಜಾಗೃತಿಯನ್ನು ಜಿಲ್ಲೆಯ ಯುವಜನತೆಗೆ ನೀಡಬೇಕು ಎಂದರು.

ಸಾಹಿತಿ ಹನುಮಂತಗೌಡ ಗೊಲ್ಲರ ಮಾತನಾಡಿ, ಆಧುನಿಕ, ಜಾಗತೀಕರಣದ ಭರಾಟೆಯಲ್ಲಿ ಮಾನವೀಯತೆ ಮರೆಯಾಗುತ್ತಿದೆ. ಯುವ ಜನಾಂಗಕ್ಕೆ ಸೇವಾ ಮನೋಭಾವನೆ ಕುರಿತು ತಿಳಿವಳಿಕೆ ನೀಡಬೇಕು ಎಂದರು

ಜಿಲ್ಲಾ ಕ್ಷಯರೋಗದ ನಿಯಂತ್ರಣಾಧಿಕಾರಿ ಡಾ.ನಿಲೇಶ, ರಕ್ತನಿಧಿ ವೈದ್ಯಾಧಿಕಾರಿ ಡಾ.ಬಸವರಾಜ ತಳವಾರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ, ನಿವೃತ್ತ ತಹಶೀಲ್ದಾರ್ ಮಹ್ಮದ್‌ ಹನೀಫ್ ನದಾಫ್, ನಿವೃತ್ತ ಆರೋಗ್ಯ ನಿರೀಕ್ಷಕ ಎಫ್.ಆರ್.ನರಗುಂದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT