<p>ಹಾವೇರಿ: ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ ಯುವತಿಯನ್ನು ಕಾರಿನಲ್ಲಿ ಬಂದು ಹಾವೇರಿಯಲ್ಲಿ ಅಪಹರಣ ಮಾಡಿಕೊಂಡು ಹೋಗಿ ಮೊಟೆಬೆನ್ನೂರ ಬಳಿ ಬಿಟ್ಟು ಹೋದ ಘಟನೆ ಭಾನುವಾರ ನಡೆದಿದೆ.</p>.<p>ನಗರದ ವಿಷ್ಣು (25) ಹಾಗೂ ಈತನ ಇಬ್ಬರು ಸ್ನೇಹಿತರು ಅಪರಹರಣ ಮಾಡಿದ ಆರೋಪಿಗಳು.</p>.<p>ವಿಷ್ಣು ಯುವತಿಯನ್ನು ಮದುವೆ ಮಾಡಿಕೊಳ್ಳುವಂತೆ ಕಳೆದ ಹಲವು ದಿನಗಳಿಂದ ಪೀಡಿಸುತ್ತಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದಾಗಿ ಕೋಪಕೊಂಡ ವಿಷ್ಣು ಭಾನುವಾರ ಬೆಳಿಗ್ಗೆ ಯುವತಿ ತನ್ನ ಸ್ನೇಹಿತೆಯರೊಂದಿಗೆ ತೆರಳುತ್ತಿದ್ದ ಸಮಯದಲ್ಲಿ ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾರೆ.</p>.<p>ಘಟನೆಯನ್ನು ಯುವತಿಯ ಸ್ನೇಹಿತೆಯರು ಮೊಬೈಲ್ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಆರೋಪಿ ವಿಷ್ಣು ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು, ಕಾರನ್ನು ತನ್ನ ಮನೆ ಬಳಿ ಬಿಟ್ಟು ನಾಪತ್ತೆಯಾಗಿದ್ದಾನೆ.</p>.<p>ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಮದುವೆ ಮಾಡಿಕೊಳ್ಳಲು ನಿರಾಕರಿಸಿದ್ದ ಯುವತಿಯನ್ನು ಕಾರಿನಲ್ಲಿ ಬಂದು ಹಾವೇರಿಯಲ್ಲಿ ಅಪಹರಣ ಮಾಡಿಕೊಂಡು ಹೋಗಿ ಮೊಟೆಬೆನ್ನೂರ ಬಳಿ ಬಿಟ್ಟು ಹೋದ ಘಟನೆ ಭಾನುವಾರ ನಡೆದಿದೆ.</p>.<p>ನಗರದ ವಿಷ್ಣು (25) ಹಾಗೂ ಈತನ ಇಬ್ಬರು ಸ್ನೇಹಿತರು ಅಪರಹರಣ ಮಾಡಿದ ಆರೋಪಿಗಳು.</p>.<p>ವಿಷ್ಣು ಯುವತಿಯನ್ನು ಮದುವೆ ಮಾಡಿಕೊಳ್ಳುವಂತೆ ಕಳೆದ ಹಲವು ದಿನಗಳಿಂದ ಪೀಡಿಸುತ್ತಿದ್ದ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಳು. ಇದರಿಂದಾಗಿ ಕೋಪಕೊಂಡ ವಿಷ್ಣು ಭಾನುವಾರ ಬೆಳಿಗ್ಗೆ ಯುವತಿ ತನ್ನ ಸ್ನೇಹಿತೆಯರೊಂದಿಗೆ ತೆರಳುತ್ತಿದ್ದ ಸಮಯದಲ್ಲಿ ಕಾರಿನಲ್ಲಿ ಬಂದು ಅಪಹರಣ ಮಾಡಿದ್ದಾರೆ.</p>.<p>ಘಟನೆಯನ್ನು ಯುವತಿಯ ಸ್ನೇಹಿತೆಯರು ಮೊಬೈಲ್ನಲ್ಲಿ ಸೆರೆ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಆರೋಪಿ ವಿಷ್ಣು ಬ್ಯಾಡಗಿ ತಾಲ್ಲೂಕಿನ ಮೊಟೆಬೆನ್ನೂರ ಬಸ್ ನಿಲ್ದಾಣದಲ್ಲಿ ಯುವತಿಯನ್ನು ಬಿಟ್ಟು, ಕಾರನ್ನು ತನ್ನ ಮನೆ ಬಳಿ ಬಿಟ್ಟು ನಾಪತ್ತೆಯಾಗಿದ್ದಾನೆ.</p>.<p>ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>