ಸದಾಶಿವ ಸ್ವಾಮೀಜಿ, ಪಟ್ಟಾಭಿಷೇಕವಾದ ನಂತರ 10 ವರ್ಷಗಳಿಂದ ಪ್ರತಿವರ್ಷ ಒಂದು ತಿಂಗಳು ಮೌನಾನುಷ್ಠಾನವನ್ನು ಕೈಗೊಂಡು ಆಧ್ಯಾತ್ಮಿಕ ಸಾಧನೆಯಲ್ಲಿ ನಿರತರಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಭಕ್ತರ ದರ್ಶನಾಶೀರ್ವಾದದಿಂದ ದೂರ ಉಳಿಯುವ ಸ್ವಾಮೀಜಿ ಸಂಪೂರ್ಣ ಘನ ಆಹಾರ ತ್ಯಜಿಸಿ, ಕೇವಲ ಇಷ್ಟಲಿಂಗ ಪೂಜೆ ಹಾಗೂ ಮೌನ ಅನುಷ್ಠಾನದಲ್ಲಿ ತೊಡಗಿದ್ದರು.