<p><strong>ಹಾವೇರಿ: </strong>ತಾಲ್ಲೂಕಿನಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>ಪ್ರತಿದಿನ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಂದ ಈ ಕಾಲೇಜಿಗೆ ಬರುತ್ತಾರೆ. ಅವರಿಗೆ ಕಾಲೇಜಿಗೆ ಬರಲು ಮತ್ತು ಹೋಗಲು ಸರಿಯಾದ ಸಮಯದಲ್ಲಿ ಬಸ್ಸಿನ ವ್ಯವಸ್ಥೆ ಇಲ್ಲ. ಹಾವೇರಿ–ಗಾಂಧಿಪುರ ಮಾರ್ಗಕ್ಕೆ ಹೆಚ್ಚಿನ ಬಸ್ಸುಗಳನ್ನು ಬಿಡಬೇಕು ಎಂದು ಮನವಿ ಮಾಡಿದರು.</p>.<p>ಹೂವಿನಹಡಗಲಿಯಿಂದ ಹಾವೇರಿ ಮಾರ್ಗವಾಗಿ ತೆರಳುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ಬಸ್ಸುಗಳನ್ನು ಗಾಂಧಿಪುರ ಕಾಲೇಜು ಬಳಿ ನಿಲುಗಡೆ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಹತ್ತಲು ಅವಕಾಶ ಕಲ್ಪಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಜಿಲ್ಲಾ ಸಂಚಾಲಕರಾದ ಗಂಗಾಧರ ಕುಲಕರ್ಣಿ, ತಾಲ್ಲೂಕು ಸಂಚಾಲಕ ವಿಶ್ವನಾಥ್, ತಾಲ್ಲೂಕು ಸಹಸಂಚಾಲಕ ಮೇಘನಾಥ, ನಗರ ಕಾರ್ಯದರ್ಶಿ ಸಂತೋಷ್, ವರುಣ, ರೋಹನ್, ಕಾರ್ತಿಕ್, ಸಿದ್ದು, ಪ್ರಸನ್ನ ಕೋರಿ, ಲಿಂಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ತಾಲ್ಲೂಕಿನಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.</p>.<p>ಪ್ರತಿದಿನ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಂದ ಈ ಕಾಲೇಜಿಗೆ ಬರುತ್ತಾರೆ. ಅವರಿಗೆ ಕಾಲೇಜಿಗೆ ಬರಲು ಮತ್ತು ಹೋಗಲು ಸರಿಯಾದ ಸಮಯದಲ್ಲಿ ಬಸ್ಸಿನ ವ್ಯವಸ್ಥೆ ಇಲ್ಲ. ಹಾವೇರಿ–ಗಾಂಧಿಪುರ ಮಾರ್ಗಕ್ಕೆ ಹೆಚ್ಚಿನ ಬಸ್ಸುಗಳನ್ನು ಬಿಡಬೇಕು ಎಂದು ಮನವಿ ಮಾಡಿದರು.</p>.<p>ಹೂವಿನಹಡಗಲಿಯಿಂದ ಹಾವೇರಿ ಮಾರ್ಗವಾಗಿ ತೆರಳುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ಬಸ್ಸುಗಳನ್ನು ಗಾಂಧಿಪುರ ಕಾಲೇಜು ಬಳಿ ನಿಲುಗಡೆ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಹತ್ತಲು ಅವಕಾಶ ಕಲ್ಪಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು.</p>.<p>ಜಿಲ್ಲಾ ಸಂಚಾಲಕರಾದ ಗಂಗಾಧರ ಕುಲಕರ್ಣಿ, ತಾಲ್ಲೂಕು ಸಂಚಾಲಕ ವಿಶ್ವನಾಥ್, ತಾಲ್ಲೂಕು ಸಹಸಂಚಾಲಕ ಮೇಘನಾಥ, ನಗರ ಕಾರ್ಯದರ್ಶಿ ಸಂತೋಷ್, ವರುಣ, ರೋಹನ್, ಕಾರ್ತಿಕ್, ಸಿದ್ದು, ಪ್ರಸನ್ನ ಕೋರಿ, ಲಿಂಗರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>