ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಕಿ ವೇತನ ಪಾವತಿಗಾಗಿ ಆಗ್ರಹ

Last Updated 21 ಸೆಪ್ಟೆಂಬರ್ 2020, 15:54 IST
ಅಕ್ಷರ ಗಾತ್ರ

ಹಾವೇರಿ: ಗ್ರಾಮ ಪಂಚಾಯಿತಿ ನೌಕರರಿಗೆ ನಾಲ್ಕು ವರ್ಷಗಳಲ್ಲಿ ಬಾಕಿ ಉಳಿದಿರುವ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಲು ಆಗ್ರಹಿಸಿ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಸಮಿತಿ ವತಿಯಿಂದ ದೇವಗಿರಿಯ ಜಿಲ್ಲಾಡಳಿತ ಭವನದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

ಕೋವಿಡ್‌ ಸಂದರ್ಭದಲ್ಲಿ ಗ್ರಾ.ಪಂ. ನೌಕರರು ಹಗಲಿರುಳು ದುಡಿದಿದ್ದಾರೆ.ಕುಡಿಯುವ ನೀರು ಪೂರೈಕೆ, ಸ್ವಚ್ಛತೆ, ಸೀಲ್‍ಡೌನ್‌‌ ಮುಂತಾದ ಕೆಲಸಗಳಲ್ಲಿ ಹಾಗೂ ಕ್ವಾರೆಂಟೈನ್ ಕ್ಯಾಂಪ್‌ಗಳಲ್ಲಿಶ್ರಮಿಸಿದ್ದಾರೆ. ಬಾಕಿ ಉಳಿದ ಸಂಬಳ ಕೊಡಿಸಲು ಸರ್ಕಾರ ತೆರಿಗೆ ಸಂಗ್ರಹದಲ್ಲಿ 14, 15ನೇ ಹಣಕಾಸಿನ ಯೋಜನೆಯಲ್ಲಿ ಸಂಬಳ ಕೊಡಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರ್ಕಾರ ನಿಗದಿಪಡಿಸಿದ ಕನಿಷ್ಠ ವೇತನ ಜಾರಿ ಮಾಡದೇ ಬಾಕಿ ಉಳಿಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಮಿಕ ಇಲಾಖೆ ನಿಗದಿಪಡಿಸಿದ ಕನಿಷ್ಟ ವೇತನ ಜಾರಿಗೊಳಿಸಬೇಕು,ನಿವೃತ್ತಿಯಾದವರಿಗೆ 15 ತಿಂಗಳು ಗ್ರಾಚ್ಯುಟಿ ಕೊಡಬೇಕು. ಇಎಫ್‌ಎಂಎಸ್‌ಗೆ ಬಾಕಿ ಉಳಿದ ಕಸಗುಡಿಸುವ ಮತ್ತು ಪಂಪ್ ಆಪರೇಟರ್ ಹಾಗೂ ಇತರೆ ಸಿಬ್ಬಂದಿಯನ್ನು ಸೇರ್ಪಡೆ ಮಾಡಬೇಕು, ಸೇವಾ ಪುಸ್ತಕ ತೆರೆಯಬೇಕು. ಪಂಪ್‌ ಆಪರೇಟರ್‌ಗಳಿಂದ ಕರ ವಸೂಲಿಗಾರರ ಹುದ್ದೆಗೆ ಬಡ್ತಿ ನೀಡಬೇಕು,ಅನುಕಂಪದ ನೇಮಕಾತಿ ಮಾಡಲು ನಿರ್ದೇಶನ ನೀಡಬೇಕು, ಸರ್ಕಾರಿ ಆದೇಶಗಳನ್ನು ಜಾರಿ ಮಾಡಿದ ಪಿ.ಡಿ.ಒ.ಗಳ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ ಕೋಟಿ, ರಾಜ್ಯ ಉಪಾಧ್ಯಕ್ಷ ಬಿ.ಐ.ಈಳಗೇರ, ಅಧ್ಯಕ್ಷ ಅಂದಾನಪ್ಪ ಹೆಬಸೂರ, ಸಿಐಟಿಯು ಜಿಲ್ಲಾ ಸಂಚಾಲಕ ವಿನಾಯಕ ಕುರುಬರ ಹಾಗೂ ಗ್ರಾಮ ಪಂಚಾಯಿತಿ ನೌಕರರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT