ರೈತ ಸೇನಾ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ಧಲಿಂಗೇಶ (ವರುಣಗೌಡ) ಪಾಟೀಲ ನೇತೃತ್ವ ವಹಿಸಿ ಮಾತನಾಡಿ, ‘ಮುಂಗಾರು ,ಹಿಂಗಾರು ಬೆಳೆಗಳಾದ ಗೋವಿನಜೋಳ, ಹತ್ತಿ, ಭತ್ತ, ಶೇಂಗಾ, ಕಡಲೆ, ತೊಗರಿ ಸೇರಿದಂತೆ ಹಲವು ಬೆಳೆಗಳು ಅತಿಯಾದ ಮಳೆಯಿಂದ ಇಳುವರಿ ಕಡಿಮೆಯಾಗಲಿವೆ. ಹೀಗಾಗಿ ಸರ್ಕಾರಗಳು ಇಂತಹ ಸಮಸ್ಯೆಗಳಿಗೆ ಸ್ಪಂದಿಸಿ ತಕ್ಷಣ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಸ್ಥಾಪಿಸುವುದು ಅಗತ್ಯವಾಗಿದೆ ಎಂದರು.