<p><strong>ಹಾವೇರಿ: </strong>ಇಲ್ಲಿಯ ಪ್ರಮುಖ ಬೆಳೆಯಾದ ಮೆಕ್ಕೆಜೋಳವನ್ನು ಅತಿ ಹೆಚ್ಚು ರೈತರು ಬೆಳೆಯುತ್ತಾರೆ. ಹೀಗಾಗಿತಾಲ್ಲೂಕು ಮೆಕ್ಕೆಜೋಳ ಕಣಜ ಎನಿಸಿದೆ. ಕೂಡಲೇ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕದ ಮುಖಂಡರು ಒತ್ತಾಯಿಸಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೆಕ್ಕೆಜೋಳವನ್ನು ₹1860ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕೆಂದು ಹೇಳುತ್ತವೆ. ಅಕಾಲಿಕ ಮಳೆಯಿಂದಾಗಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಕ್ವಿಂಟಲ್ಗೆ ಸಾವಿರದಿಮದ 1,500ರವರೆಗೆ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಪ್ರತಿ ಕ್ವಿಂಟಲ್ಗೆ ₹800ವರೆಗೆ ನಷ್ಟವಾಗುತ್ತಿದೆ. ರೈತರಿಗೆ ಸಿಗಬೇಕಾದ ಲಾಭ ದಲ್ಲಾಳಿಗಳಿಗೆ ಸಿಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬಿತ್ತನೆ ಬೀಜ, ರಸಗೊಬ್ಬರ, ಬೆಳೆಗೆ ಸಿಂಪಡಿಸುವ ಔಷಧ, ಡೀಸೆಲ್ ದರ ಹೆಚ್ಚಳ, ಕೂಲಿ ಕಾರ್ಮಿಕರ ಕೂಲಿ ಹೆಚ್ಚಳ ಈ ಎಲ್ಲ ಕಾರಣಗಳಿಂದ ರೈತರು ನಷ್ಟ ಅನುಭವಿಸುವಂತಾಗಿದೆ. ಅಕಾಲಿಕ ಮಳೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆದ ಮೆಕ್ಕೆಜೋಳವನ್ನು ಸಂರಕ್ಷಣೆ ಮಾಡಿಕೊಳ್ಳಲು ಆಗದೇ ರೈತರು ಕಂಗೆಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು 8 ದಿನದೊಳಗಾಗಿ ಖರೀದಿ ಕೇಂದ್ರವನ್ನು ಆರಂಭಿಸಬೇಕು ಇಲ್ಲದೇ ಹೋದರೆ ರೈತರೊಂದಿಗೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಹಾವೇರಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ಸುಂಕದ, ಮಲ್ಲಿಕಾರ್ಜುನ ಅರಳಿ, ಸಿದ್ದಬಸಪ್ಪ ಯಾದವ, ಮಹಾಂತೇಶ ಬೇವಿನಹಿಂಡಿ, ರಾಜೇಸಾಬ್ ತರ್ಲಘಟ್ಟ, ರವಿ ಗಂಗಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಇಲ್ಲಿಯ ಪ್ರಮುಖ ಬೆಳೆಯಾದ ಮೆಕ್ಕೆಜೋಳವನ್ನು ಅತಿ ಹೆಚ್ಚು ರೈತರು ಬೆಳೆಯುತ್ತಾರೆ. ಹೀಗಾಗಿತಾಲ್ಲೂಕು ಮೆಕ್ಕೆಜೋಳ ಕಣಜ ಎನಿಸಿದೆ. ಕೂಡಲೇ ತಾಲ್ಲೂಕಿನಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಎಂದು ಜೆಡಿಎಸ್ ತಾಲ್ಲೂಕು ಘಟಕದ ಮುಖಂಡರು ಒತ್ತಾಯಿಸಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೆಕ್ಕೆಜೋಳವನ್ನು ₹1860ರ ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಬೇಕೆಂದು ಹೇಳುತ್ತವೆ. ಅಕಾಲಿಕ ಮಳೆಯಿಂದಾಗಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಕ್ವಿಂಟಲ್ಗೆ ಸಾವಿರದಿಮದ 1,500ರವರೆಗೆ ಖರೀದಿ ಆಗುತ್ತಿದೆ. ಇದರಿಂದ ರೈತರಿಗೆ ಪ್ರತಿ ಕ್ವಿಂಟಲ್ಗೆ ₹800ವರೆಗೆ ನಷ್ಟವಾಗುತ್ತಿದೆ. ರೈತರಿಗೆ ಸಿಗಬೇಕಾದ ಲಾಭ ದಲ್ಲಾಳಿಗಳಿಗೆ ಸಿಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಬಿತ್ತನೆ ಬೀಜ, ರಸಗೊಬ್ಬರ, ಬೆಳೆಗೆ ಸಿಂಪಡಿಸುವ ಔಷಧ, ಡೀಸೆಲ್ ದರ ಹೆಚ್ಚಳ, ಕೂಲಿ ಕಾರ್ಮಿಕರ ಕೂಲಿ ಹೆಚ್ಚಳ ಈ ಎಲ್ಲ ಕಾರಣಗಳಿಂದ ರೈತರು ನಷ್ಟ ಅನುಭವಿಸುವಂತಾಗಿದೆ. ಅಕಾಲಿಕ ಮಳೆ, ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ಬೆಳೆದ ಮೆಕ್ಕೆಜೋಳವನ್ನು ಸಂರಕ್ಷಣೆ ಮಾಡಿಕೊಳ್ಳಲು ಆಗದೇ ರೈತರು ಕಂಗೆಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರವು 8 ದಿನದೊಳಗಾಗಿ ಖರೀದಿ ಕೇಂದ್ರವನ್ನು ಆರಂಭಿಸಬೇಕು ಇಲ್ಲದೇ ಹೋದರೆ ರೈತರೊಂದಿಗೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.</p>.<p>ಹಾವೇರಿ ಉಪವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ಸುಂಕದ, ಮಲ್ಲಿಕಾರ್ಜುನ ಅರಳಿ, ಸಿದ್ದಬಸಪ್ಪ ಯಾದವ, ಮಹಾಂತೇಶ ಬೇವಿನಹಿಂಡಿ, ರಾಜೇಸಾಬ್ ತರ್ಲಘಟ್ಟ, ರವಿ ಗಂಗಮ್ಮನವರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>