<p><strong>ಬ್ಯಾಡಗಿ:</strong> ತಾಲ್ಲೂಕಿನ ಚಿಕ್ಕಣಜಿ ಗ್ರಾಮದ ಬಳಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಲ್ಲಿ ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ಸಸಿ ನೆಡುವ ಮೂಲಕ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆಯ ಕಾರ್ಯವೈಖರಿಗೆ ಆಕ್ರೋಶ ಹೊರಹಾಕಿದರು.</p>.<p>ಈ ವೇಳೆ ರೈತ ಸಂಘದ ಮುಖಂಡ ಮಲ್ಲೇಶಪ್ಪ ಡಂಬಳ ಮಾತನಾಡಿ, ‘ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ದುರಸ್ತಿ ಕಾಣದೇ ಗ್ರಾಮೀಣ ರಸ್ತೆಗಳಿಗಿಂತ ಕಡೆಯಾಗಿದೆ. ರಸ್ತೆ ತುಂಬಾ ಗುಂಡಿಗಳು ಬಿದ್ದಿದ್ದರೂ ಅವುಗಳನ್ನು ಮುಚ್ಚಲು ಮುಂದಾಗಿಲ್ಲ’ ಎಂದು ದೂರಿದರು.</p>.<p>ರಸ್ತೆಯಲ್ಲಿನ ಗುಂಡಿಗಳಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಅಂಗನವಾಡಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಎದುರು ರಸ್ತೆ ಹಾದು ಹೋಗಿರುವುದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟವಾಗಿದೆ. ಕೂಡಲೇ ಹಾಳಾಗಿರುವ ರಸ್ತೆ ದುರಸ್ತಿಗೆ ಮುಂದಾಗಬೇಕು. ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ತಾಲ್ಲೂಕಿನ ಚಿಕ್ಕಣಜಿ ಗ್ರಾಮದ ಬಳಿ ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ಹಾದು ಹೋಗಿದ್ದು, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳಲ್ಲಿ ರೈತ ಸಂಘದ ನೇತೃತ್ವದಲ್ಲಿ ಮಂಗಳವಾರ ಸಸಿ ನೆಡುವ ಮೂಲಕ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆಯ ಕಾರ್ಯವೈಖರಿಗೆ ಆಕ್ರೋಶ ಹೊರಹಾಕಿದರು.</p>.<p>ಈ ವೇಳೆ ರೈತ ಸಂಘದ ಮುಖಂಡ ಮಲ್ಲೇಶಪ್ಪ ಡಂಬಳ ಮಾತನಾಡಿ, ‘ಬೀರೂರು-ಸಮ್ಮಸಗಿ ರಾಜ್ಯ ಹೆದ್ದಾರಿ ದುರಸ್ತಿ ಕಾಣದೇ ಗ್ರಾಮೀಣ ರಸ್ತೆಗಳಿಗಿಂತ ಕಡೆಯಾಗಿದೆ. ರಸ್ತೆ ತುಂಬಾ ಗುಂಡಿಗಳು ಬಿದ್ದಿದ್ದರೂ ಅವುಗಳನ್ನು ಮುಚ್ಚಲು ಮುಂದಾಗಿಲ್ಲ’ ಎಂದು ದೂರಿದರು.</p>.<p>ರಸ್ತೆಯಲ್ಲಿನ ಗುಂಡಿಗಳಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.</p>.<p>ಅಂಗನವಾಡಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಎದುರು ರಸ್ತೆ ಹಾದು ಹೋಗಿರುವುದರಿಂದ ಮಕ್ಕಳು ರಸ್ತೆ ದಾಟಿ ಹೋಗುವುದು ಕಷ್ಟವಾಗಿದೆ. ಕೂಡಲೇ ಹಾಳಾಗಿರುವ ರಸ್ತೆ ದುರಸ್ತಿಗೆ ಮುಂದಾಗಬೇಕು. ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>