<p>ಶಿಗ್ಗಾವಿ: ರಾಷ್ಟೀಯ ಹೆದ್ದಾರಿ (ಎನ್ಎಚ್-4) ಬಂಕಾಪುರ ಟೋಲ್ ನಾಕಾದಿಂದ ಕುಂದೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರು ಸಂಚಾರಕ್ಕಾಗಿ ಪರದಾಡುವಂತಾಗಿದೆ. ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಕಳೆದ ಏಂಟು ತಿಂಗಳ ಹಿಂದೆ ಡಾಂಬರೀಕರಣ ಮಾಡಲಾಗಿದೆ. ರಸ್ತೆಯಲ್ಲಿ ಒಂದು ಕ್ರಾಸಿಂಗ್ ರಸ್ತೆ ಬಂದಿದ್ದು, ಬಂಕಾಪುರದಿಂದ ತವರಮೆಳ್ಳಳ್ಳಿ ಗ್ರಾಮಗಳಿಗೆ ಹೋಗಬಹುದು. ಈ ರಸ್ತೆ ಕ್ರಾಸಿಂಗ್ನಲ್ಲಿ ಒಂದು ಸೇತುವೆ ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ ಈ ವರೆಗೆ ರಸ್ತೆ ಪೂರ್ಣಗೊಂಡಿಲ್ಲ. ಸೇತುವೆ ನಿರ್ಮಾಣ ಕಾಮಗಾರಿ ಕೈಗೊಂಡಿಲ್ಲ. ಹೀಗಾಗಿ ಇಲ್ಲಿನ ಪ್ರಮಾಣಿಕರು ಪ್ರಯಾಣಕ್ಕಾಗಿ ಹರಸಾಹಸ ಪಡುವಂತಾಗಿದೆ ಎಂದು ಕುಂದೂರ ಗ್ರಾಮದ ಬಸವರಾಜ ಕುಂದೂರ ತಿಳಿಸಿದರು.</p>.<p>ಬಂಕಾಪುರ ಗ್ರಾಮದಿಂದ ತವರಮೆಳ್ಳಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯನ್ನು ಹಿಂದೆ ಡಾಂಬರೀಕರಣ ಮಾಡಲಾಗಿದೆ. ಆದರೆ ರಸ್ತೆ ಕಾಮಗಾರಿ ಕೈಗೊಂಡಿಲ್ಲ. ಈ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕಾಗಿ ಕಂದಕ ತೋಡಿ ಬಿಡಲಾಗಿದೆ. ಈ ಕಂದಕದಲ್ಲಿ ಸಾಕಷ್ಟು ಜನ ವಾಹನ ಸವಾರರು ಬಿದ್ದು, ತೀವ್ರತರನಾದ ಗಾಯಗಳಾಗಿವೆ. ರಾತ್ರಿ ವೇಳೆ ಈ ಕಂದಕ ಕಾಣದೆ ಅಪಘಾತಗಳು ನಡೆಯುತ್ತಿವೆ. ಅಪಘಾತದ ನಂತರ ಕೆಲವರು ಈ ಕಂದಕಕ್ಕೆ ಮುಳ್ಳು, ಕಲ್ಲುಗಳನ್ನು ಹಾಕಿದ್ದಾರೆ. ಅರ್ಧಕ್ಕೆ ನಿಂತ ಕಾಮಗಾರಿಯಲ್ಲಿ ಒಂದು ಸೂಚನಾ ಫಲಕವು ಹಾಕಿಲ್ಲ. ಅದರಿಂದ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು, ಪ್ರಯಾಣಿಕರು ತಮ್ಮ ಅಳಲು ತೋಡಿಕೊಂಡರು.</p>.<p>ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಲಾಗಿದೆ. ಆದರೂ ಈ ವರೆಗೆ ಕಾಮಗಾರಿ ಕೈಗೊಂಡಿಲ್ಲ. ಜಲಾನಯನ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ. ಹಾರಿಕೆ ಉತ್ತರ ನೀಡುತ್ತಿದ್ದಾರೆ. ಯಾವುದೇ ಇಲಾಖೆಯಗಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಬಸವರಾಜ ಕುಂದೂರ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ರಾಷ್ಟೀಯ ಹೆದ್ದಾರಿ (ಎನ್ಎಚ್-4) ಬಂಕಾಪುರ ಟೋಲ್ ನಾಕಾದಿಂದ ಕುಂದೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರು ಸಂಚಾರಕ್ಕಾಗಿ ಪರದಾಡುವಂತಾಗಿದೆ. ಅಪೂರ್ಣಗೊಂಡ ಕಾಮಗಾರಿ ಪೂರ್ಣಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<p>ಕಳೆದ ಏಂಟು ತಿಂಗಳ ಹಿಂದೆ ಡಾಂಬರೀಕರಣ ಮಾಡಲಾಗಿದೆ. ರಸ್ತೆಯಲ್ಲಿ ಒಂದು ಕ್ರಾಸಿಂಗ್ ರಸ್ತೆ ಬಂದಿದ್ದು, ಬಂಕಾಪುರದಿಂದ ತವರಮೆಳ್ಳಳ್ಳಿ ಗ್ರಾಮಗಳಿಗೆ ಹೋಗಬಹುದು. ಈ ರಸ್ತೆ ಕ್ರಾಸಿಂಗ್ನಲ್ಲಿ ಒಂದು ಸೇತುವೆ ನಿರ್ಮಾಣ ಮಾಡುವುದಾಗಿ ಅಧಿಕಾರಿಗಳು ಹೇಳುತ್ತಾರೆ. ಆದರೆ ಈ ವರೆಗೆ ರಸ್ತೆ ಪೂರ್ಣಗೊಂಡಿಲ್ಲ. ಸೇತುವೆ ನಿರ್ಮಾಣ ಕಾಮಗಾರಿ ಕೈಗೊಂಡಿಲ್ಲ. ಹೀಗಾಗಿ ಇಲ್ಲಿನ ಪ್ರಮಾಣಿಕರು ಪ್ರಯಾಣಕ್ಕಾಗಿ ಹರಸಾಹಸ ಪಡುವಂತಾಗಿದೆ ಎಂದು ಕುಂದೂರ ಗ್ರಾಮದ ಬಸವರಾಜ ಕುಂದೂರ ತಿಳಿಸಿದರು.</p>.<p>ಬಂಕಾಪುರ ಗ್ರಾಮದಿಂದ ತವರಮೆಳ್ಳಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯನ್ನು ಹಿಂದೆ ಡಾಂಬರೀಕರಣ ಮಾಡಲಾಗಿದೆ. ಆದರೆ ರಸ್ತೆ ಕಾಮಗಾರಿ ಕೈಗೊಂಡಿಲ್ಲ. ಈ ರಸ್ತೆಯಲ್ಲಿ ಸೇತುವೆ ನಿರ್ಮಾಣಕ್ಕಾಗಿ ಕಂದಕ ತೋಡಿ ಬಿಡಲಾಗಿದೆ. ಈ ಕಂದಕದಲ್ಲಿ ಸಾಕಷ್ಟು ಜನ ವಾಹನ ಸವಾರರು ಬಿದ್ದು, ತೀವ್ರತರನಾದ ಗಾಯಗಳಾಗಿವೆ. ರಾತ್ರಿ ವೇಳೆ ಈ ಕಂದಕ ಕಾಣದೆ ಅಪಘಾತಗಳು ನಡೆಯುತ್ತಿವೆ. ಅಪಘಾತದ ನಂತರ ಕೆಲವರು ಈ ಕಂದಕಕ್ಕೆ ಮುಳ್ಳು, ಕಲ್ಲುಗಳನ್ನು ಹಾಕಿದ್ದಾರೆ. ಅರ್ಧಕ್ಕೆ ನಿಂತ ಕಾಮಗಾರಿಯಲ್ಲಿ ಒಂದು ಸೂಚನಾ ಫಲಕವು ಹಾಕಿಲ್ಲ. ಅದರಿಂದ ಸಾರ್ವಜನಿಕರು ಪರದಾಡುವಂತಾಗಿದೆ ಎಂದು ಗ್ರಾಮಸ್ಥರು, ಪ್ರಯಾಣಿಕರು ತಮ್ಮ ಅಳಲು ತೋಡಿಕೊಂಡರು.</p>.<p>ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮೌಖಿಕವಾಗಿ ಮನವಿ ಮಾಡಲಾಗಿದೆ. ಆದರೂ ಈ ವರೆಗೆ ಕಾಮಗಾರಿ ಕೈಗೊಂಡಿಲ್ಲ. ಜಲಾನಯನ ಇಲಾಖೆ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಒಬ್ಬರ ಮೇಲೆ ಒಬ್ಬರು ಹೇಳುತ್ತಾರೆ. ಹಾರಿಕೆ ಉತ್ತರ ನೀಡುತ್ತಿದ್ದಾರೆ. ಯಾವುದೇ ಇಲಾಖೆಯಗಲಿ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ಪ್ರಯಾಣಕ್ಕೆ ಅವಕಾಶ ಕಲ್ಪಿಸಬೇಕು ಎಂದು ಬಸವರಾಜ ಕುಂದೂರ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>