ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ: ಸಂತ್ರಸ್ತರ ಕುಟುಂಬಕ್ಕೆ ₹ 15 ಲಕ್ಷ ಪರಿಹಾರ

ಚುನಾವಣಾ ಕರ್ತವ್ಯ ವೇಳೆ ಮೃತಪಟ್ಟಿದ್ದ ಇಬ್ಬರು ಗ್ರಾಮ ಸಹಾಯಕರು
Last Updated 9 ಮಾರ್ಚ್ 2021, 17:24 IST
ಅಕ್ಷರ ಗಾತ್ರ

ಹಾವೇರಿ: ಚುನಾವಣಾ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮರಣ ಹೊಂದಿದ ಹಾನಗಲ್‌ ತಾಲ್ಲೂಕಿನ ತುಮರಿಕೊಪ್ಪದ ಗ್ರಾಮ ಸಹಾಯಕ ಸುರೇಶ ತಳವಾರ ಮತ್ತು ಚಿಕ್ಕಹುಲ್ಲಾಳದ ಗ್ರಾಮ ಸಹಾಯಕ ಉಡಚಪ್ಪ ದೊಡ್ಡಮನಿ ಅವರ ಕುಟುಂಬಗಳಿಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ತಲಾ ಕುಟುಂಬಕ್ಕೆ ₹ 15 ಲಕ್ಷ ಪರಿಹಾರವನ್ನು ನೀಡಲಾಗಿದೆ.

ಸುರೇಶ ತಳವಾರ ಮತ್ತು ಉಡಚಪ್ಪ ದೊಡ್ಡಮನಿ ಈ ಇಬ್ಬರನ್ನು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅವಶ್ಯವಿರುವ ವಿದ್ಯುನ್ಮಾನ ಮತಯಂತ್ರಗಳನ್ನು ಹಾವೇರಿ ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಒದಗಿಸಲು ನಿಯೋಜಿಸಲಾಗಿತ್ತು. 2020ರ ನವೆಂಬರ್‌ 17ರಂದು ಕರ್ತವ್ಯ ನಿರ್ವಹಿಸಿ, ತಮ್ಮ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಇಬ್ಬರೂ ಮೃತಪಟ್ಟಿದ್ದರು.

ಈ ಕುರಿತು, ಚುನಾವಣಾ ಆಯೋಗಕ್ಕೆ ಜಿಲ್ಲಾಡಳಿತದಿಂದ ಪತ್ರ ಬರೆದು, ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಕೋರಲಾಗಿತ್ತು. ಅದರಂತೆ ಚುನಾವಣಾ ಆಯೋಗ ಪರಿಹಾರ ನೀಡಲು ನಿರ್ದೇಶನ ನೀಡಿತು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT