<p><strong>ಹಾವೇರಿ: </strong>ಚುನಾವಣಾ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮರಣ ಹೊಂದಿದ ಹಾನಗಲ್ ತಾಲ್ಲೂಕಿನ ತುಮರಿಕೊಪ್ಪದ ಗ್ರಾಮ ಸಹಾಯಕ ಸುರೇಶ ತಳವಾರ ಮತ್ತು ಚಿಕ್ಕಹುಲ್ಲಾಳದ ಗ್ರಾಮ ಸಹಾಯಕ ಉಡಚಪ್ಪ ದೊಡ್ಡಮನಿ ಅವರ ಕುಟುಂಬಗಳಿಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ತಲಾ ಕುಟುಂಬಕ್ಕೆ ₹ 15 ಲಕ್ಷ ಪರಿಹಾರವನ್ನು ನೀಡಲಾಗಿದೆ.</p>.<p>ಸುರೇಶ ತಳವಾರ ಮತ್ತು ಉಡಚಪ್ಪ ದೊಡ್ಡಮನಿ ಈ ಇಬ್ಬರನ್ನು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅವಶ್ಯವಿರುವ ವಿದ್ಯುನ್ಮಾನ ಮತಯಂತ್ರಗಳನ್ನು ಹಾವೇರಿ ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಒದಗಿಸಲು ನಿಯೋಜಿಸಲಾಗಿತ್ತು. 2020ರ ನವೆಂಬರ್ 17ರಂದು ಕರ್ತವ್ಯ ನಿರ್ವಹಿಸಿ, ತಮ್ಮ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಇಬ್ಬರೂ ಮೃತಪಟ್ಟಿದ್ದರು.</p>.<p>ಈ ಕುರಿತು, ಚುನಾವಣಾ ಆಯೋಗಕ್ಕೆ ಜಿಲ್ಲಾಡಳಿತದಿಂದ ಪತ್ರ ಬರೆದು, ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಕೋರಲಾಗಿತ್ತು. ಅದರಂತೆ ಚುನಾವಣಾ ಆಯೋಗ ಪರಿಹಾರ ನೀಡಲು ನಿರ್ದೇಶನ ನೀಡಿತು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಚುನಾವಣಾ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಮರಣ ಹೊಂದಿದ ಹಾನಗಲ್ ತಾಲ್ಲೂಕಿನ ತುಮರಿಕೊಪ್ಪದ ಗ್ರಾಮ ಸಹಾಯಕ ಸುರೇಶ ತಳವಾರ ಮತ್ತು ಚಿಕ್ಕಹುಲ್ಲಾಳದ ಗ್ರಾಮ ಸಹಾಯಕ ಉಡಚಪ್ಪ ದೊಡ್ಡಮನಿ ಅವರ ಕುಟುಂಬಗಳಿಗೆ ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ತಲಾ ಕುಟುಂಬಕ್ಕೆ ₹ 15 ಲಕ್ಷ ಪರಿಹಾರವನ್ನು ನೀಡಲಾಗಿದೆ.</p>.<p>ಸುರೇಶ ತಳವಾರ ಮತ್ತು ಉಡಚಪ್ಪ ದೊಡ್ಡಮನಿ ಈ ಇಬ್ಬರನ್ನು ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಅವಶ್ಯವಿರುವ ವಿದ್ಯುನ್ಮಾನ ಮತಯಂತ್ರಗಳನ್ನು ಹಾವೇರಿ ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಒದಗಿಸಲು ನಿಯೋಜಿಸಲಾಗಿತ್ತು. 2020ರ ನವೆಂಬರ್ 17ರಂದು ಕರ್ತವ್ಯ ನಿರ್ವಹಿಸಿ, ತಮ್ಮ ಗ್ರಾಮಕ್ಕೆ ತೆರಳುವ ಸಂದರ್ಭದಲ್ಲಿ ರಸ್ತೆ ಅಪಘಾತಕ್ಕೀಡಾಗಿ ಇಬ್ಬರೂ ಮೃತಪಟ್ಟಿದ್ದರು.</p>.<p>ಈ ಕುರಿತು, ಚುನಾವಣಾ ಆಯೋಗಕ್ಕೆ ಜಿಲ್ಲಾಡಳಿತದಿಂದ ಪತ್ರ ಬರೆದು, ಮೃತರ ಕುಟುಂಬದವರಿಗೆ ಪರಿಹಾರ ನೀಡಲು ಕೋರಲಾಗಿತ್ತು. ಅದರಂತೆ ಚುನಾವಣಾ ಆಯೋಗ ಪರಿಹಾರ ನೀಡಲು ನಿರ್ದೇಶನ ನೀಡಿತು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>