<p><strong>ಹಿರೇಕೆರೂರ</strong>: ತಾಲ್ಲೂಕಿನ ಚನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೂದಿಹಳ್ಳಿ ಗ್ರಾಮದಲ್ಲಿನ ಮಿನಿ ಅಂಬೇಡ್ಕರ್ ಭವನ ಪಾಳುಬಿದ್ದಿದೆ.</p>.<p>2005–06ನೇ ಸಾಲಿನಲ್ಲಿ ಈ ಭವನವನ್ನು ನಿರ್ಮಿಸಲಾಗಿತ್ತು. ಸಾರ್ವಜನಿಕರ ಹಣದಿಂದ ನಿರ್ಮಿಸಿದ ಭವನದ ರಕ್ಷಣೆಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿಲ್ಲ. ಇದರಿಂದಾಗಿ, ಸ್ವಚ್ಛತೆ ಇಲ್ಲದೆ, ಬಣ್ಣ ಕಾಣದೆ ಭವನ ಸೊರಗಿದೆ. ಕಿಟಕಿಯ ಗಾಜುಗಳು ಒಡೆದಿದ್ದು, ಭದ್ರತೆಯೇ ಇಲ್ಲದಂತಾಗಿದೆ.</p>.<p>ಮಿನಿ ಅಂಬೇಡ್ಕರ್ ಭವನವು ಯಾವುದೇ ಉಪಯುಕ್ತ ಕೆಲಸಗಳಿಗೆ ಬಳಕೆಯಾಗುತ್ತಿಲ್ಲ. ಇದು ಗೋದಾಮಿನಂತಾಗಿದೆ. ದನ–ಕರುಗಳನ್ನು ಇಲ್ಲಿಯೇ ಕಟ್ಟಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಭವನವನ್ನು ಅಭಿವೃದ್ಧಿ ಮಾಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.</p>.<p>‘ಮಿನಿ ಅಂಬೇಡ್ಕರ್ ಭವನದ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ, ಅನುದಾನವಿಲ್ಲವೆಂದು ಕಾರಣ ಹೇಳುತ್ತಾರೆ. ಭವನವನ್ನು ಅಭಿವೃದ್ಧಿಪಡಿಸಿದರೆ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಗಂಗಾಧರ ಬೋಗೆರ ಹೇಳಿದರು.</p>.<div><blockquote>ಸಮಾಜ ಕಲ್ಯಾಣ ಇಲಾಖೆಯಿಂದ ಮಿನಿ ಅಂಬೇಡ್ಕರ್ ಭವನ ನಿರ್ಮಿಸಿದ್ದು ಅದರ ನಿರ್ವಹಣೆಯು ಗ್ರಾಮ ಪಂಚಾಯಿತಿಯ ಹೊಣೆ.</blockquote><span class="attribution">ಮಹಬೂಬ್ ಸಾಬ್ ನದಾಫ್, ಗ್ರೇಡ್ 2 ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ</strong>: ತಾಲ್ಲೂಕಿನ ಚನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೂದಿಹಳ್ಳಿ ಗ್ರಾಮದಲ್ಲಿನ ಮಿನಿ ಅಂಬೇಡ್ಕರ್ ಭವನ ಪಾಳುಬಿದ್ದಿದೆ.</p>.<p>2005–06ನೇ ಸಾಲಿನಲ್ಲಿ ಈ ಭವನವನ್ನು ನಿರ್ಮಿಸಲಾಗಿತ್ತು. ಸಾರ್ವಜನಿಕರ ಹಣದಿಂದ ನಿರ್ಮಿಸಿದ ಭವನದ ರಕ್ಷಣೆಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಿಲ್ಲ. ಇದರಿಂದಾಗಿ, ಸ್ವಚ್ಛತೆ ಇಲ್ಲದೆ, ಬಣ್ಣ ಕಾಣದೆ ಭವನ ಸೊರಗಿದೆ. ಕಿಟಕಿಯ ಗಾಜುಗಳು ಒಡೆದಿದ್ದು, ಭದ್ರತೆಯೇ ಇಲ್ಲದಂತಾಗಿದೆ.</p>.<p>ಮಿನಿ ಅಂಬೇಡ್ಕರ್ ಭವನವು ಯಾವುದೇ ಉಪಯುಕ್ತ ಕೆಲಸಗಳಿಗೆ ಬಳಕೆಯಾಗುತ್ತಿಲ್ಲ. ಇದು ಗೋದಾಮಿನಂತಾಗಿದೆ. ದನ–ಕರುಗಳನ್ನು ಇಲ್ಲಿಯೇ ಕಟ್ಟಲಾಗುತ್ತಿದೆ. ಶಿಥಿಲಾವಸ್ಥೆಯಲ್ಲಿರುವ ಭವನವನ್ನು ಅಭಿವೃದ್ಧಿ ಮಾಡಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.</p>.<p>‘ಮಿನಿ ಅಂಬೇಡ್ಕರ್ ಭವನದ ಅಭಿವೃದ್ಧಿ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಕೇಳಿದರೆ, ಅನುದಾನವಿಲ್ಲವೆಂದು ಕಾರಣ ಹೇಳುತ್ತಾರೆ. ಭವನವನ್ನು ಅಭಿವೃದ್ಧಿಪಡಿಸಿದರೆ ಸಾರ್ವಜನಿಕರಿಗೆ ಉಪಯೋಗವಾಗುತ್ತದೆ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಚಾಲಕ ಗಂಗಾಧರ ಬೋಗೆರ ಹೇಳಿದರು.</p>.<div><blockquote>ಸಮಾಜ ಕಲ್ಯಾಣ ಇಲಾಖೆಯಿಂದ ಮಿನಿ ಅಂಬೇಡ್ಕರ್ ಭವನ ನಿರ್ಮಿಸಿದ್ದು ಅದರ ನಿರ್ವಹಣೆಯು ಗ್ರಾಮ ಪಂಚಾಯಿತಿಯ ಹೊಣೆ.</blockquote><span class="attribution">ಮಹಬೂಬ್ ಸಾಬ್ ನದಾಫ್, ಗ್ರೇಡ್ 2 ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>