ತಂದೆ ಶೇಖರಪ್ಪ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ₹25 ಲಕ್ಷದ ಚೆಕ್ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪಾರ್ಥಿವ ಶರೀರ ತರಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಬೇಗ ನಿಮ್ಮ ಬೇಡಿಕೆ ಈಡೇರಿಸುತ್ತೇವೆ. ದೊಡ್ಡ ಮಗ ಹರ್ಷ ಅವರ ಪಿಎಚ್ಡಿ ಮುಗಿದ ನಂತರ ಉತ್ತಮ ಉದ್ಯೋಗ ದೊರಕಿಸಿಕೊಡುತ್ತೇವೆ’ ಎಂದು ಸಿಎಂ ಸಾಂತ್ವನದ ನುಡಿಗಳನ್ನಾಡಿದರು.