<p><strong>ಶಿಗ್ಗಾವಿ:</strong> ಪಟ್ಟಣದ ಸ್ವಚ್ಚತೆ ಮತ್ತು ಸುಂದರವಾಗಿ ಕಾಣಲು ಪೌರಕಾರ್ಮಿಕರ ಶ್ರಮ ಮುಖ್ಯವಾಗಿದೆ. ಅದರಿಂದ ಪಟ್ಟಣದ ಜನತೆಯ ಆರೋಗ್ಯ ಕಾಪಾಡಲು ಸಾಧ್ಯವಾಗಿದೆ ಎಂದು ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದ ಪುರಸಭೆ ಆವರಣದಲ್ಲಿ ಮಂಗಳವಾರ ಪೌರಾಡಳಿತ ಇಲಾಖೆ ಪುರಸಭೆ ಕಾರ್ಯಾಲಯದ ವತಿಯಿಂದ ನಡೆದ ಪುರಸಭೆ ಪೌರಕಾರ್ಮಿಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರಕಾರ್ಮಿಕರು ಪಟ್ಟಣದ ಸ್ವಚ್ಚತೆ ಜತೆಗೆ ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡುವ ಕಡೆ ಗಮನವಿರಲಿ. ದುಶ್ಚಟಗಳನ್ನು ಬಿಟ್ಟು ಮಕ್ಕಳು, ಕುಟುಂಬದ ಆರ್ಥಿಕ ಬೆಳವಣಿಗೆಗೆ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿರಿ ಎಂದರು.</p>.<p>ಪುರಸಭೆ ಸದಸ್ಯ ಪರಶುರಾಮ್ ಸೊನ್ನದ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕು ಎಂದರು.</p>.<p>ರಾಜ್ಯ ಕಾರ್ಮಿಕರ ಸಂಘದ ಅಧ್ಯಕ್ಷ ಫಕ್ಕಿರೇಶ ಶಿಗ್ಗಾವಿ ಮಾತನಾಡಿ, ಪೌರಕಾರ್ಮಿಕರ ಸಾಕಷ್ಟು ಸಮಸ್ಯೆಗಳಿಗೆ ಇದುವರೆಗೆ ಪರಿಹಾರ ಸಿಕ್ಕಿಲ್ಲ. ಕಾರ್ಮಿಕರ ಬಗ್ಗೆ ಅನುಕಂಪ ತೋರುವ ಬದಲು, ಅವರ ಬೇಡಿಕೆಗಳನ್ನು ಪೂರೈಸಬೇಕು ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಪೌರಕಾರ್ಮಿಕರಾಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಕೂಟಗಳನ್ನು ನಡೆಸಿ ಅದರಲ್ಲಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಪುರಸಭೆ ಸದಸ್ಯರಾದ ಮಂಜುನಾಥ ಬ್ಯಾಹಟ್ಟಿ, ಸುಲೇಮಾನ್ ತರ್ಲಗಟ್ಟ, ಜಾಫರ್ ಖಾನ್ ಪಠಾಣ್, ಲಕ್ಷ್ಮಿ ಮಾಳಗಿ, ಮೆಹಬೂಬಿ ನೀರಲಗಿ, ಸಮುದಾಯ ಸಂಘಟಕ ಬಿ.ಎಸ್. ಗಿಡ್ಡಣ್ಣವರ, ಲಕ್ಷ್ಮಣ ಪೂಜಾರ, ಕೆ.ಎಲ್.ಭೋವಿ, ಗೀರಿಜಮ್ಮ ಹಾದಿಮನಿ ಸೇರಿದಂತೆ ಪುರಸಭೆ ಸಿಬ್ಬಂದಿ ಹಾಗೂ ಎಲ್ಲ ಪೌರಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ಪಟ್ಟಣದ ಸ್ವಚ್ಚತೆ ಮತ್ತು ಸುಂದರವಾಗಿ ಕಾಣಲು ಪೌರಕಾರ್ಮಿಕರ ಶ್ರಮ ಮುಖ್ಯವಾಗಿದೆ. ಅದರಿಂದ ಪಟ್ಟಣದ ಜನತೆಯ ಆರೋಗ್ಯ ಕಾಪಾಡಲು ಸಾಧ್ಯವಾಗಿದೆ ಎಂದು ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಹೇಳಿದರು.</p>.<p>ಪಟ್ಟಣದ ಪುರಸಭೆ ಆವರಣದಲ್ಲಿ ಮಂಗಳವಾರ ಪೌರಾಡಳಿತ ಇಲಾಖೆ ಪುರಸಭೆ ಕಾರ್ಯಾಲಯದ ವತಿಯಿಂದ ನಡೆದ ಪುರಸಭೆ ಪೌರಕಾರ್ಮಿಕರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಪೌರಕಾರ್ಮಿಕರು ಪಟ್ಟಣದ ಸ್ವಚ್ಚತೆ ಜತೆಗೆ ತಮ್ಮ ವೈಯಕ್ತಿಕ ಆರೋಗ್ಯ ಕಾಪಾಡುವ ಕಡೆ ಗಮನವಿರಲಿ. ದುಶ್ಚಟಗಳನ್ನು ಬಿಟ್ಟು ಮಕ್ಕಳು, ಕುಟುಂಬದ ಆರ್ಥಿಕ ಬೆಳವಣಿಗೆಗೆ ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿರಿ ಎಂದರು.</p>.<p>ಪುರಸಭೆ ಸದಸ್ಯ ಪರಶುರಾಮ್ ಸೊನ್ನದ ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕು ಎಂದರು.</p>.<p>ರಾಜ್ಯ ಕಾರ್ಮಿಕರ ಸಂಘದ ಅಧ್ಯಕ್ಷ ಫಕ್ಕಿರೇಶ ಶಿಗ್ಗಾವಿ ಮಾತನಾಡಿ, ಪೌರಕಾರ್ಮಿಕರ ಸಾಕಷ್ಟು ಸಮಸ್ಯೆಗಳಿಗೆ ಇದುವರೆಗೆ ಪರಿಹಾರ ಸಿಕ್ಕಿಲ್ಲ. ಕಾರ್ಮಿಕರ ಬಗ್ಗೆ ಅನುಕಂಪ ತೋರುವ ಬದಲು, ಅವರ ಬೇಡಿಕೆಗಳನ್ನು ಪೂರೈಸಬೇಕು ಎಂದರು.</p>.<p>ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ ಆರ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಪೌರಕಾರ್ಮಿಕರಾಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ವಿವಿಧ ಕ್ರೀಡಾಕೂಟಗಳನ್ನು ನಡೆಸಿ ಅದರಲ್ಲಿ ವಿಜೇತ ತಂಡಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.</p>.<p>ಪುರಸಭೆ ಸದಸ್ಯರಾದ ಮಂಜುನಾಥ ಬ್ಯಾಹಟ್ಟಿ, ಸುಲೇಮಾನ್ ತರ್ಲಗಟ್ಟ, ಜಾಫರ್ ಖಾನ್ ಪಠಾಣ್, ಲಕ್ಷ್ಮಿ ಮಾಳಗಿ, ಮೆಹಬೂಬಿ ನೀರಲಗಿ, ಸಮುದಾಯ ಸಂಘಟಕ ಬಿ.ಎಸ್. ಗಿಡ್ಡಣ್ಣವರ, ಲಕ್ಷ್ಮಣ ಪೂಜಾರ, ಕೆ.ಎಲ್.ಭೋವಿ, ಗೀರಿಜಮ್ಮ ಹಾದಿಮನಿ ಸೇರಿದಂತೆ ಪುರಸಭೆ ಸಿಬ್ಬಂದಿ ಹಾಗೂ ಎಲ್ಲ ಪೌರಕಾರ್ಮಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>