ಸುಪ್ರಿಯಾ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಉತ್ತಮ ಪರಿಸರದಿಂದ ಆರೋಗ್ಯಯುತ ನಾಡು ನಿರ್ಮಾಣವಾಗಲು ಸಾಧ್ಯವಿದೆ. ಮಕ್ಕಳ ಪಾಲನೆ– ಪೋಷಣೆ ಮಾಡಿದಂತೆ ಪ್ರತಿ ಸಸಿಗಳನ್ನು ಬೆಳೆಸಬೇಕು. ಅದರಿಂದ ನಾಡಿಗೆ ಉತ್ತಮ ಸಂದೇಶ ನೀಡಬೇಕೆಂಬ ಉದ್ದೇಶದಿಂದ ಈ ಸಸಿಗಳು ವಿತರಿಸುವ ಜತೆಗೆ ನಾವು ಸಸಿಗಳನ್ನು ನೆಟ್ಟು ಅವುಗಳು ಬೆಳೆಯುವ ವರೆಗೆ ಕಾಳಜಿ ವಹಿಸುತ್ತೇವೆ ಎಂದರು.