<p><strong>ಶಿಗ್ಗಾವಿ</strong>: ತಾಲ್ಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಇತ್ತೀಚೆಗೆ ಸಂತೋಷ ಕುಮಾರಯ್ಯ ಪತ್ನಿ ಸುಪ್ರಿಯಾ ಸೀಮಂತ ಕಾರ್ಯಕ್ರಮದಲ್ಲಿ ಸಂಬಂಧಿಗಳಿಗೆ ಸಸಿ ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.</p>.<p>ಸಂತೋಷ ಕುಮಾರಯ್ಯ ಅವರ ಪತ್ನಿ ಸುಪ್ರಿಯಾ ಪರಿಸರ ಪ್ರೇಮಿಯಾಗಿದ್ದು, ಕಳೆದ ವರ್ಷದಲ್ಲಿ ನಡೆದ ಅವರ ವಿವಾಹ ಸಮಾರಂಭದಲ್ಲಿ ಸಂಬಂಧಿಗಳಿಗೆ ನೆನಪಿನ ಕಾಣಿಕೆಯಾಗಿ ಮಾವಿನ ಸಸಿಗಳನ್ನು ವಿತರಿಸಿದ್ದರು. ಈಗ ನಡೆದ ಅವರ ಸೀಮಂತ ಕಾರ್ಯಕ್ರಮದಲ್ಲಿ ವಿಶೇಷ ಕಾಳಜಿ ವಹಿಸಿ ಬಂಧು– ಬಾಂಧವರಿಗೆ ವಿವಿಧ ತಳಿಗಳ ಸಸಿಗಳನ್ನು ವಿತರಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.</p>.<p>ಸುಪ್ರಿಯಾ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಉತ್ತಮ ಪರಿಸರದಿಂದ ಆರೋಗ್ಯಯುತ ನಾಡು ನಿರ್ಮಾಣವಾಗಲು ಸಾಧ್ಯವಿದೆ. ಮಕ್ಕಳ ಪಾಲನೆ– ಪೋಷಣೆ ಮಾಡಿದಂತೆ ಪ್ರತಿ ಸಸಿಗಳನ್ನು ಬೆಳೆಸಬೇಕು. ಅದರಿಂದ ನಾಡಿಗೆ ಉತ್ತಮ ಸಂದೇಶ ನೀಡಬೇಕೆಂಬ ಉದ್ದೇಶದಿಂದ ಈ ಸಸಿಗಳು ವಿತರಿಸುವ ಜತೆಗೆ ನಾವು ಸಸಿಗಳನ್ನು ನೆಟ್ಟು ಅವುಗಳು ಬೆಳೆಯುವ ವರೆಗೆ ಕಾಳಜಿ ವಹಿಸುತ್ತೇವೆ ಎಂದರು.</p>.<p>ಶಿಗ್ಗಾವಿ ಎಪಿಎಂಸಿ ಸದಸ್ಯ ತಿಪ್ಪಣ್ಣ ಸಾತಣ್ಣವರ, ಗ್ರಾಮ ಪಂಚಾಯ್ತಿ ಸದಸ್ಯ ರಮೇಶ ಸಾತಣ್ಣವರ, ಜನಪದ ಕಲಾವಿದ ಗದಿಗಯ್ಯ ಹಿರೇಮಠ ಸೇರಿದಂತೆ ಸುತ್ತಲಿನ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ತಾಲ್ಲೂಕಿನ ಚಿಕ್ಕಬೆಂಡಿಗೇರಿ ಗ್ರಾಮದಲ್ಲಿ ಇತ್ತೀಚೆಗೆ ಸಂತೋಷ ಕುಮಾರಯ್ಯ ಪತ್ನಿ ಸುಪ್ರಿಯಾ ಸೀಮಂತ ಕಾರ್ಯಕ್ರಮದಲ್ಲಿ ಸಂಬಂಧಿಗಳಿಗೆ ಸಸಿ ವಿತರಿಸುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.</p>.<p>ಸಂತೋಷ ಕುಮಾರಯ್ಯ ಅವರ ಪತ್ನಿ ಸುಪ್ರಿಯಾ ಪರಿಸರ ಪ್ರೇಮಿಯಾಗಿದ್ದು, ಕಳೆದ ವರ್ಷದಲ್ಲಿ ನಡೆದ ಅವರ ವಿವಾಹ ಸಮಾರಂಭದಲ್ಲಿ ಸಂಬಂಧಿಗಳಿಗೆ ನೆನಪಿನ ಕಾಣಿಕೆಯಾಗಿ ಮಾವಿನ ಸಸಿಗಳನ್ನು ವಿತರಿಸಿದ್ದರು. ಈಗ ನಡೆದ ಅವರ ಸೀಮಂತ ಕಾರ್ಯಕ್ರಮದಲ್ಲಿ ವಿಶೇಷ ಕಾಳಜಿ ವಹಿಸಿ ಬಂಧು– ಬಾಂಧವರಿಗೆ ವಿವಿಧ ತಳಿಗಳ ಸಸಿಗಳನ್ನು ವಿತರಿಸಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು.</p>.<p>ಸುಪ್ರಿಯಾ ಮಾತನಾಡಿ, ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಉತ್ತಮ ಪರಿಸರದಿಂದ ಆರೋಗ್ಯಯುತ ನಾಡು ನಿರ್ಮಾಣವಾಗಲು ಸಾಧ್ಯವಿದೆ. ಮಕ್ಕಳ ಪಾಲನೆ– ಪೋಷಣೆ ಮಾಡಿದಂತೆ ಪ್ರತಿ ಸಸಿಗಳನ್ನು ಬೆಳೆಸಬೇಕು. ಅದರಿಂದ ನಾಡಿಗೆ ಉತ್ತಮ ಸಂದೇಶ ನೀಡಬೇಕೆಂಬ ಉದ್ದೇಶದಿಂದ ಈ ಸಸಿಗಳು ವಿತರಿಸುವ ಜತೆಗೆ ನಾವು ಸಸಿಗಳನ್ನು ನೆಟ್ಟು ಅವುಗಳು ಬೆಳೆಯುವ ವರೆಗೆ ಕಾಳಜಿ ವಹಿಸುತ್ತೇವೆ ಎಂದರು.</p>.<p>ಶಿಗ್ಗಾವಿ ಎಪಿಎಂಸಿ ಸದಸ್ಯ ತಿಪ್ಪಣ್ಣ ಸಾತಣ್ಣವರ, ಗ್ರಾಮ ಪಂಚಾಯ್ತಿ ಸದಸ್ಯ ರಮೇಶ ಸಾತಣ್ಣವರ, ಜನಪದ ಕಲಾವಿದ ಗದಿಗಯ್ಯ ಹಿರೇಮಠ ಸೇರಿದಂತೆ ಸುತ್ತಲಿನ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>