ಸ್ಥಳಕ್ಕೆ ಧಾವಿಸಿದ ಸವಣೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ದನಗಳಿಗೆ ಸಂಗ್ರಹಿಸಿದ ಮೇವು ಸಂಪೂರ್ಣ ಹಾನಿಯಾಗಿದ್ದು ಮನೆಯ ಕಟ್ಟಿಗೆ ಕಂಬಗಳು ಸಹ ಹಾನಿಯಾಗಿವೆ. ಕೊಟ್ಟಿಗೆಯಲ್ಲಿ ದನಗಳಿಲ್ಲದ ಕಾರಣ ಪ್ರಾಣಿ ಹಾನಿ ತಪ್ಪಿದ್ದು ಸುಮಾರು ₹1 ಲಕ್ಷ ಹಾನಿ ಎಂದು ಅಂದಾಜಿಸಲಾಗಿದೆ.
ಈ ವೇಳೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಭೊವಿ, ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ ಮೇಟಿ, ಸಿಬ್ಬಂದಿಗಳಾದ ಮಂಜುನಾಥ ತವರಿ, ಸುರೇಶ್ ಗುಂಜಳ, ವಿನಯ ವಡೆರಟ್ಟಿ ಸೇರಿದಂತೆ ಗ್ರಾ.ಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.