<p><strong>ಸವಣೂರು (ಹಾವೇರಿ ಜಿಲ್ಲೆ):</strong> ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದನದ ಕೊಟ್ಟಿಗೆಯಲ್ಲಿದ್ದ ಮೇವು ಸಂಪೂರ್ಣ ಹಾನಿಯಾದ ಘಟನೆ ಸವಣೂರು ತಾಲೂಕಿನ ಕಾರಡಗಿ ಗ್ರಾಮದಲ್ಲಿ ಸಂಭವಿಸಿದೆ.</p><p>ಗ್ರಾಮದ ನಿವಾಸಿ ಮಂಜುನಾಥ ಅರಳಿಕಟ್ಟಿ ಎಂಬುವರಿಗೆ ಸೇರಿದ ಹಳೆಯ ಮನೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದನದ ಕೊಟ್ಟಿಗೆ ಮಾಡಿದ್ದ ಹಳೆಯ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂಬ ದೂರು ಸಾರ್ವಜನಿಕರದ್ದಾಗಿದೆ.</p><p>ಈ ವೇಳೆ ಹೊಗೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಆತಂಕಕ್ಕೆ ಒಳಗಾಗಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಗ್ರಾ.ಪಂ ಪಿಡಿಒ ನೀರು ಸರಬರಾಜುಗೊಳಿಸಿದ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದ ಹಾನಿ ತಪ್ಪಿದೆ.</p>.<p>ಸ್ಥಳಕ್ಕೆ ಧಾವಿಸಿದ ಸವಣೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ದನಗಳಿಗೆ ಸಂಗ್ರಹಿಸಿದ ಮೇವು ಸಂಪೂರ್ಣ ಹಾನಿಯಾಗಿದ್ದು ಮನೆಯ ಕಟ್ಟಿಗೆ ಕಂಬಗಳು ಸಹ ಹಾನಿಯಾಗಿವೆ. ಕೊಟ್ಟಿಗೆಯಲ್ಲಿ ದನಗಳಿಲ್ಲದ ಕಾರಣ ಪ್ರಾಣಿ ಹಾನಿ ತಪ್ಪಿದ್ದು ಸುಮಾರು ₹1 ಲಕ್ಷ ಹಾನಿ ಎಂದು ಅಂದಾಜಿಸಲಾಗಿದೆ.</p><p>ಈ ವೇಳೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಭೊವಿ, ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ ಮೇಟಿ, ಸಿಬ್ಬಂದಿಗಳಾದ ಮಂಜುನಾಥ ತವರಿ, ಸುರೇಶ್ ಗುಂಜಳ, ವಿನಯ ವಡೆರಟ್ಟಿ ಸೇರಿದಂತೆ ಗ್ರಾ.ಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು (ಹಾವೇರಿ ಜಿಲ್ಲೆ):</strong> ಆಕಸ್ಮಿಕವಾಗಿ ಮನೆಗೆ ಬೆಂಕಿ ಹೊತ್ತಿಕೊಂಡು ದನದ ಕೊಟ್ಟಿಗೆಯಲ್ಲಿದ್ದ ಮೇವು ಸಂಪೂರ್ಣ ಹಾನಿಯಾದ ಘಟನೆ ಸವಣೂರು ತಾಲೂಕಿನ ಕಾರಡಗಿ ಗ್ರಾಮದಲ್ಲಿ ಸಂಭವಿಸಿದೆ.</p><p>ಗ್ರಾಮದ ನಿವಾಸಿ ಮಂಜುನಾಥ ಅರಳಿಕಟ್ಟಿ ಎಂಬುವರಿಗೆ ಸೇರಿದ ಹಳೆಯ ಮನೆ ಎಂದು ತಿಳಿದು ಬಂದಿದೆ. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ದನದ ಕೊಟ್ಟಿಗೆ ಮಾಡಿದ್ದ ಹಳೆಯ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ ಎಂಬ ದೂರು ಸಾರ್ವಜನಿಕರದ್ದಾಗಿದೆ.</p><p>ಈ ವೇಳೆ ಹೊಗೆಯ ಪ್ರಮಾಣ ತೀವ್ರಗೊಂಡ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಆತಂಕಕ್ಕೆ ಒಳಗಾಗಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಗ್ರಾ.ಪಂ ಪಿಡಿಒ ನೀರು ಸರಬರಾಜುಗೊಳಿಸಿದ ಹಿನ್ನೆಲೆಯಲ್ಲಿ ಸಾಕಷ್ಟು ಪ್ರಮಾಣದ ಹಾನಿ ತಪ್ಪಿದೆ.</p>.<p>ಸ್ಥಳಕ್ಕೆ ಧಾವಿಸಿದ ಸವಣೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ದನಗಳಿಗೆ ಸಂಗ್ರಹಿಸಿದ ಮೇವು ಸಂಪೂರ್ಣ ಹಾನಿಯಾಗಿದ್ದು ಮನೆಯ ಕಟ್ಟಿಗೆ ಕಂಬಗಳು ಸಹ ಹಾನಿಯಾಗಿವೆ. ಕೊಟ್ಟಿಗೆಯಲ್ಲಿ ದನಗಳಿಲ್ಲದ ಕಾರಣ ಪ್ರಾಣಿ ಹಾನಿ ತಪ್ಪಿದ್ದು ಸುಮಾರು ₹1 ಲಕ್ಷ ಹಾನಿ ಎಂದು ಅಂದಾಜಿಸಲಾಗಿದೆ.</p><p>ಈ ವೇಳೆ ಗ್ರಾಮ ಪಂಚಾಯಿತಿ ಪಿಡಿಒ ಮಂಜುನಾಥ ಭೊವಿ, ಅಗ್ನಿಶಾಮಕ ಠಾಣಾಧಿಕಾರಿ ಮಂಜುನಾಥ ಮೇಟಿ, ಸಿಬ್ಬಂದಿಗಳಾದ ಮಂಜುನಾಥ ತವರಿ, ಸುರೇಶ್ ಗುಂಜಳ, ವಿನಯ ವಡೆರಟ್ಟಿ ಸೇರಿದಂತೆ ಗ್ರಾ.ಪಂ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>