<p><strong>ಸವಣೂರು:</strong> ಶ್ರೀ ದೇವಿ ಗಂಗಮಾಳವ್ವ ಮೂರ್ತಿಯ ಪುರ ಪ್ರವೇಶದ ನಂತರ ಭವ್ಯ ಮೆರವಣಿಗೆ ಶನಿವಾರ ಸಂಜೆ ಪಟ್ಟಣದಲ್ಲಿ ಸಂಭ್ರಮದಿಂದ ನಡೆಯಿತು.</p>.<p>ಪಟ್ಟಣದ ಸಿಂಪಿಗಲ್ಲಿ ಗಣೇಶ ದೇವಸ್ಥಾನದಿಂದ ಹೊರಟ ದೇವಿ ಮೂರ್ತಿ ಮೆರವಣಿಗೆ ವಿಶೇಷ ದಿವಟಗಿ ಸೇವೆ, ಕುದರಿಕಾರರ ಸೇವೆ, ಪೂರ್ಣ ಕುಂಭ ಮೇಳ, ಡೊಳ್ಳು, ಭಜನೆ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮೈಲಾರಲಿಂಗೇಶ್ವರ ದೇವಸ್ಥಾನ ತಲುಪಿತು.</p>.<p>ಮೆರವಣಿಗೆಯುದ್ದಕ್ಕೂ ಪಟಾಕಿ ಸದ್ದು, ಕುದರಿಕಾರರ ಕುಣಿತ, ದಿವಟಗಿ ಸೇವೆ ವಿಶೇಷವಾಗಿತ್ತು. ನಂತರ ರಾತ್ರಿ ಜಲಾಧಿವಾಸ, ಧಾನ್ಯಾಧಿವಾಸ, ದೀಪಾಧಿವಾಸ, ಪುಷ್ಪಧಿವಾಸ ಹಾಗೂ ಶಯನಾಧಿವಾಸ ಕಾರ್ಯಕ್ರಮಗಳು ನಡೆದವು.</p>.<p>ಭಾನುವಾರ ಶ್ರೀಶೈಲ ಶಾಖಾಮಠದ ಹಾವೇರಿ ಹರಸೂರ ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಪುಟ್ಟಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಶ್ರೀದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಹೋಮ ಹಾಗೂ ವಿಶೇಷ ಪೂಜೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ ವೈಧಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.</p>.<p>ಇದೇ ಸಂದರ್ಭದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಮೈಲಾರಲಿಂಗೇಶ್ವರ ಹಾಗೂ ಗಂಗಮಾಳವ್ವ ದೇವರ ಕಲ್ಯಾಣೋತ್ಸವ ಶಾಸ್ತ್ರೋಕ್ತವಾಗಿ ನೆರವೇರಿತು. ನಂತರ, ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು.</p>.<p>ಮೈಲಾರಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿಯ ಎಲ್ಲ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ವರ್ತಕರು, ಯುವಕರು ಸೇರಿದಂತೆ ಪಟ್ಟಣದ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು:</strong> ಶ್ರೀ ದೇವಿ ಗಂಗಮಾಳವ್ವ ಮೂರ್ತಿಯ ಪುರ ಪ್ರವೇಶದ ನಂತರ ಭವ್ಯ ಮೆರವಣಿಗೆ ಶನಿವಾರ ಸಂಜೆ ಪಟ್ಟಣದಲ್ಲಿ ಸಂಭ್ರಮದಿಂದ ನಡೆಯಿತು.</p>.<p>ಪಟ್ಟಣದ ಸಿಂಪಿಗಲ್ಲಿ ಗಣೇಶ ದೇವಸ್ಥಾನದಿಂದ ಹೊರಟ ದೇವಿ ಮೂರ್ತಿ ಮೆರವಣಿಗೆ ವಿಶೇಷ ದಿವಟಗಿ ಸೇವೆ, ಕುದರಿಕಾರರ ಸೇವೆ, ಪೂರ್ಣ ಕುಂಭ ಮೇಳ, ಡೊಳ್ಳು, ಭಜನೆ ಸೇರಿದಂತೆ ವಿವಿಧ ವಾದ್ಯಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಂಚರಿಸಿ ಮೈಲಾರಲಿಂಗೇಶ್ವರ ದೇವಸ್ಥಾನ ತಲುಪಿತು.</p>.<p>ಮೆರವಣಿಗೆಯುದ್ದಕ್ಕೂ ಪಟಾಕಿ ಸದ್ದು, ಕುದರಿಕಾರರ ಕುಣಿತ, ದಿವಟಗಿ ಸೇವೆ ವಿಶೇಷವಾಗಿತ್ತು. ನಂತರ ರಾತ್ರಿ ಜಲಾಧಿವಾಸ, ಧಾನ್ಯಾಧಿವಾಸ, ದೀಪಾಧಿವಾಸ, ಪುಷ್ಪಧಿವಾಸ ಹಾಗೂ ಶಯನಾಧಿವಾಸ ಕಾರ್ಯಕ್ರಮಗಳು ನಡೆದವು.</p>.<p>ಭಾನುವಾರ ಶ್ರೀಶೈಲ ಶಾಖಾಮಠದ ಹಾವೇರಿ ಹರಸೂರ ಬಣ್ಣದಮಠದ ಅಭಿನವ ರುದ್ರಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಪುಟ್ಟಯ್ಯ ಹಿರೇಮಠ ಅವರ ನೇತೃತ್ವದಲ್ಲಿ ಶ್ರೀದೇವಿಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ, ಹೋಮ ಹಾಗೂ ವಿಶೇಷ ಪೂಜೆ, ಪುಷ್ಪಾಲಂಕಾರ ಸೇರಿದಂತೆ ವಿವಿಧ ವೈಧಿಕ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.</p>.<p>ಇದೇ ಸಂದರ್ಭದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ಮೈಲಾರಲಿಂಗೇಶ್ವರ ಹಾಗೂ ಗಂಗಮಾಳವ್ವ ದೇವರ ಕಲ್ಯಾಣೋತ್ಸವ ಶಾಸ್ತ್ರೋಕ್ತವಾಗಿ ನೆರವೇರಿತು. ನಂತರ, ಭಕ್ತರಿಗೆ ಅನ್ನಸಂತರ್ಪಣೆ ಕಾರ್ಯ ನಡೆಯಿತು.</p>.<p>ಮೈಲಾರಲಿಂಗೇಶ್ವರ ದೇವಸ್ಥಾನದ ಸೇವಾ ಸಮಿತಿಯ ಎಲ್ಲ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ವರ್ತಕರು, ಯುವಕರು ಸೇರಿದಂತೆ ಪಟ್ಟಣದ ಭಕ್ತರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>