<p><strong>ಸವಣೂರು</strong>: ‘ನಮ್ಮ ದೇಶದ ಶ್ರೇಷ್ಠ ಸಂವಿಧಾನ, ಸ್ವಾತಂತ್ರ್ಯ ಮತ್ತು ವೈವಿಧ್ಯತೆಯ ಹೆಮ್ಮೆಯನ್ನು ನೆನಪಿಸುವ ದಿನ ಗಣರಾಜ್ಯೋತ್ಸವ’ ಎಂದು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಂವಿಧಾನ ನೀಡಿರುವ ಹಕ್ಕು, ಕರ್ತವ್ಯ ಮತ್ತು ಸಮಾನತೆಯ ಮೌಲ್ಯಗಳನ್ನು ಗೌರವಿಸಿ, ಶಾಂತಿ, ಏಕತೆ ಮತ್ತು ಪ್ರಗತಿಯ ರಾಷ್ಟ್ರವನ್ನು ಕಟ್ಟೋಣ’ ಎಂದರು.</p>.<p>ನವದೆಹಲಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಸಮಾರಂಭದ ಪರೇಡ್ಗೆ ಸವಣೂರಿನ ತುಂಗಾ ಎ. ಶಿವಲಿಂಗಯ್ಯ ಆಯ್ಕೆಯಾದ ನಿಮಿತ್ತ ಅವರ ಪೋಷಕರಿಗೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ರಾಜಕುಮಾರ ಅರ್ಕಸಾಲಿ ಪಾಲಕರನ್ನು ಸನ್ಮಾನಿಸಲಾಯಿತು.</p>.<p>2025ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ತಾಲ್ಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತೃಪ್ತಿ ಪ್ರಕಾಶ ಘೋರ್ಪಡೆ, ಅಭಿಷೇಕ ಗಂಗಪ್ಪ ಮತ್ತೂರ, ಸ್ವಾತಿ ಶಿವಪ್ಪ ಅಂಗಡಿ ಅವರನ್ನು ಸನ್ಮಾನಿಸಲಾಯಿತು. ಸರ್ಕಾರದ ವತಿಯಿಂದ ತಲಾ ₹ 50 ಸಾವಿರ ಶೈಕ್ಷಣಿಕ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.</p>.<p>ಪಟ್ಟಣದ ಆರ್ಎಂಎಸ್ ಉರ್ದುಶಾಲೆಯ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ತಂಡ ಎಲ್ಲರ ಗಮನ ಸೆಳೆಯಿತು.<br /> ನಂತರ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶರಣರ, ದಾರ್ಶನಿಕರ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಪ್ರರ್ದಶನ (ಟ್ಯಾಬ್ಲೊ), ಕವಾಯತ್, ಗೌರವ ವಂದನೆ ಸಲ್ಲಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪೊಲೀಸ್ ಇಲಾಖೆ, ಗೃಹ ರಕ್ಷಕದಳ ಸಿಬ್ಬಂದಿ ಶಿಸ್ತುಬದ್ಧ ಪರೇಡ್ನೊಂದಿಗೆ ಗೌರವ ವಂದನೆ ಸಲ್ಲಿಸಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಸ ಮಜ್ಜಗಿ, ತಹಶೀಲ್ದಾರ್ ರವಿಕುಮಾರ ಕೊರವರ, ಗ್ರೇಡ್-2 ತಹಶೀಲ್ದಾರ್ ಗಣೇಶ ಸವಣೂರ, ಪಿಐ ತಿಮ್ಮಣ್ಣ ಚಾಮನೂರ, ತಾಲ್ಲೂಕು ಪಂಚಾಯಿತಿ ಇಒ ಬಿ.ಎಸ್.ಶಿಡೇನೂರ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಸಿಡಿಪಿಒ ಉಮಾ ಕೆ.ಎಸ್., ಬಿಆರ್ಸಿ ಅಡಿವೆಪ್ಪ ತಿಪ್ಪಕ್ಕನವರ, ಪ್ರಮುಖರಾದ ರವಿ ಕರಿಗಾರ, ರಾಮಣ್ಣ ಅಗಸರ, ಚನ್ನಪ್ಪ ಮರಡೂರ, ಹರೀಶಗೌಡ ಪಾಟೀಲ ಪಾಲ್ಗೊಂಡಿದ್ದರು. <br /> ಬಿಇಒ ಎಂ.ಎಫ್.ಬಾರ್ಕಿ, ಬಿಆರ್ಪಿ ಡಿ.ಆರ್. ತೋಟಗೇರ, ಸಿಆರ್ಪಿ ನಾಗರಾಜ ಬಂಡಿವಡ್ಡರ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸವಣೂರು</strong>: ‘ನಮ್ಮ ದೇಶದ ಶ್ರೇಷ್ಠ ಸಂವಿಧಾನ, ಸ್ವಾತಂತ್ರ್ಯ ಮತ್ತು ವೈವಿಧ್ಯತೆಯ ಹೆಮ್ಮೆಯನ್ನು ನೆನಪಿಸುವ ದಿನ ಗಣರಾಜ್ಯೋತ್ಸವ’ ಎಂದು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ತಿಳಿಸಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>‘ಸಂವಿಧಾನ ನೀಡಿರುವ ಹಕ್ಕು, ಕರ್ತವ್ಯ ಮತ್ತು ಸಮಾನತೆಯ ಮೌಲ್ಯಗಳನ್ನು ಗೌರವಿಸಿ, ಶಾಂತಿ, ಏಕತೆ ಮತ್ತು ಪ್ರಗತಿಯ ರಾಷ್ಟ್ರವನ್ನು ಕಟ್ಟೋಣ’ ಎಂದರು.</p>.<p>ನವದೆಹಲಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಸಮಾರಂಭದ ಪರೇಡ್ಗೆ ಸವಣೂರಿನ ತುಂಗಾ ಎ. ಶಿವಲಿಂಗಯ್ಯ ಆಯ್ಕೆಯಾದ ನಿಮಿತ್ತ ಅವರ ಪೋಷಕರಿಗೆ ಹಾಗೂ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ರಾಜಕುಮಾರ ಅರ್ಕಸಾಲಿ ಪಾಲಕರನ್ನು ಸನ್ಮಾನಿಸಲಾಯಿತು.</p>.<p>2025ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ತಾಲ್ಲೂಕಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತೃಪ್ತಿ ಪ್ರಕಾಶ ಘೋರ್ಪಡೆ, ಅಭಿಷೇಕ ಗಂಗಪ್ಪ ಮತ್ತೂರ, ಸ್ವಾತಿ ಶಿವಪ್ಪ ಅಂಗಡಿ ಅವರನ್ನು ಸನ್ಮಾನಿಸಲಾಯಿತು. ಸರ್ಕಾರದ ವತಿಯಿಂದ ತಲಾ ₹ 50 ಸಾವಿರ ಶೈಕ್ಷಣಿಕ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.</p>.<p>ಪಟ್ಟಣದ ಆರ್ಎಂಎಸ್ ಉರ್ದುಶಾಲೆಯ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ತಂಡ ಎಲ್ಲರ ಗಮನ ಸೆಳೆಯಿತು.<br /> ನಂತರ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಶರಣರ, ದಾರ್ಶನಿಕರ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ವೇಷಭೂಷಣ ಪ್ರರ್ದಶನ (ಟ್ಯಾಬ್ಲೊ), ಕವಾಯತ್, ಗೌರವ ವಂದನೆ ಸಲ್ಲಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪೊಲೀಸ್ ಇಲಾಖೆ, ಗೃಹ ರಕ್ಷಕದಳ ಸಿಬ್ಬಂದಿ ಶಿಸ್ತುಬದ್ಧ ಪರೇಡ್ನೊಂದಿಗೆ ಗೌರವ ವಂದನೆ ಸಲ್ಲಿಸಿದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಸ ಮಜ್ಜಗಿ, ತಹಶೀಲ್ದಾರ್ ರವಿಕುಮಾರ ಕೊರವರ, ಗ್ರೇಡ್-2 ತಹಶೀಲ್ದಾರ್ ಗಣೇಶ ಸವಣೂರ, ಪಿಐ ತಿಮ್ಮಣ್ಣ ಚಾಮನೂರ, ತಾಲ್ಲೂಕು ಪಂಚಾಯಿತಿ ಇಒ ಬಿ.ಎಸ್.ಶಿಡೇನೂರ, ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ, ಸಿಡಿಪಿಒ ಉಮಾ ಕೆ.ಎಸ್., ಬಿಆರ್ಸಿ ಅಡಿವೆಪ್ಪ ತಿಪ್ಪಕ್ಕನವರ, ಪ್ರಮುಖರಾದ ರವಿ ಕರಿಗಾರ, ರಾಮಣ್ಣ ಅಗಸರ, ಚನ್ನಪ್ಪ ಮರಡೂರ, ಹರೀಶಗೌಡ ಪಾಟೀಲ ಪಾಲ್ಗೊಂಡಿದ್ದರು. <br /> ಬಿಇಒ ಎಂ.ಎಫ್.ಬಾರ್ಕಿ, ಬಿಆರ್ಪಿ ಡಿ.ಆರ್. ತೋಟಗೇರ, ಸಿಆರ್ಪಿ ನಾಗರಾಜ ಬಂಡಿವಡ್ಡರ ಕಾರ್ಯಕ್ರಮ ನಿರ್ವಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>