ಬಿಜೆಪಿಯವರದ್ದು ಜನೋತ್ಸವ ಅಲ್ಲ ಭ್ರಷ್ಟೋತ್ಸವ ಎಂಬ ಕಾಂಗ್ರೆಸ್ ಟೀಕೆಗೆ ಪ್ರತಿಕ್ರಿಯಿಸಿ, ‘ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ದಿಂಬು, ಹಾಸಿಗೆ, ನೆಲ–ನೀರು ಯಾವುದನ್ನೂ ಕಾಂಗ್ರೆಸ್ನವರು ಬಿಟ್ಟಿಲ್ಲ. ಜನೋತ್ಸವದ ಬಗ್ಗೆ ಈಗಲೇ ಕಾಂಗ್ರೆಸ್ಗೆ ಭಯ ಶುರುವಾಗಿ ಟೀಕೆ ಮಾಡುತ್ತಿದ್ದಾರೆ. ಐದು ವರ್ಷಗಳ ಕಾಂಗ್ರೆಸ್ ಆಡಳಿತವನ್ನು ನೋಡಿಯೇ ಜನ ಅವರನ್ನು ತಿರಸ್ಕರಿಸಿದ್ದಾರೆ’ ಎಂದು ಕುಟುಕಿದರು.