<p><strong>ಹಾವೇರಿ</strong>: ‘ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲ ಪುರುಷರು. ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ’ ಎಂದು ಸವಿತಾನಂದನಾಥ ಸ್ವಾಮೀಜಿ ಅವರು ಹೇಳಿದರು.</p>.<p>ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಜರುಗಿದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ರಾಷ್ಟ್ರಕೂಟ, ವಿಜಯನಗರ ಕಲ್ಯಾಣ ಚಾಲುಕ್ಯರ ಶಾಸನಗಳಲ್ಲಿ ಸವಿತಾ ಸಮಾಜದ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳಲ್ಲಿ ಸವಿತಾ ಸಮಾಜದ ಸಾಧನಗಳಾದ ಕತ್ತಿ, ಕನ್ನಡಿ ಹಾಗೂ ಕತ್ತರಿಗಳನ್ನು ಕೆತ್ತಲಾಗಿದೆ. ಎರಡು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸವಿತಾ ಸಮಾಜ ಸೇವಾ ಕಾರ್ಯದಿಂದಲೇ ಹೆಸರುವಾಸಿಯಾಗಿದೆ’ ಎಂದರು.</p>.<p>‘ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಕರೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ಚಿ.ಚಿನ್ನಿಕಟ್ಟಿ, ಸವಿತಾ ಮಹರ್ಷಿ ಸಂಘದ ಅಧ್ಯಕ್ಷ ಕೆ.ನಾಗರಾಜ, ಕೆ.ಇ.ಕಾಂತೇಶ ಹಾಗೂ ಸಮಾಜದ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಸವಿತಾ ಮಹರ್ಷಿ ಕ್ಷೌರಿಕ ಸಮಾಜದ ಮೂಲ ಪುರುಷರು. ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಸವಿತಾ ಸಮಾಜ ತನ್ನದೇ ಆದ ಪರಂಪರೆ ಹೊಂದಿದೆ’ ಎಂದು ಸವಿತಾನಂದನಾಥ ಸ್ವಾಮೀಜಿ ಅವರು ಹೇಳಿದರು.</p>.<p>ಹಾವೇರಿ ನಗರದ ಜಿಲ್ಲಾ ಗುರುಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಸವಿತಾ ಸಮಾಜ ಸಹಯೋಗದಲ್ಲಿ ಜರುಗಿದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>‘ರಾಷ್ಟ್ರಕೂಟ, ವಿಜಯನಗರ ಕಲ್ಯಾಣ ಚಾಲುಕ್ಯರ ಶಾಸನಗಳಲ್ಲಿ ಸವಿತಾ ಸಮಾಜದ ಬಗ್ಗೆ ಉಲ್ಲೇಖವಿದೆ. ಅನೇಕ ಶಾಸನಗಳಲ್ಲಿ ಸವಿತಾ ಸಮಾಜದ ಸಾಧನಗಳಾದ ಕತ್ತಿ, ಕನ್ನಡಿ ಹಾಗೂ ಕತ್ತರಿಗಳನ್ನು ಕೆತ್ತಲಾಗಿದೆ. ಎರಡು ಸಾವಿರ ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಸವಿತಾ ಸಮಾಜ ಸೇವಾ ಕಾರ್ಯದಿಂದಲೇ ಹೆಸರುವಾಸಿಯಾಗಿದೆ’ ಎಂದರು.</p>.<p>‘ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುವ ಸವಿತಾ ಸಮಾಜದವರು ಸಂಘಟಿತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಕರೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ಚಿ.ಚಿನ್ನಿಕಟ್ಟಿ, ಸವಿತಾ ಮಹರ್ಷಿ ಸಂಘದ ಅಧ್ಯಕ್ಷ ಕೆ.ನಾಗರಾಜ, ಕೆ.ಇ.ಕಾಂತೇಶ ಹಾಗೂ ಸಮಾಜದ ಮುಖಂಡರು ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>