<p><strong>ಬ್ಯಾಡಗಿ:</strong> ಪಟ್ಟಣದ ಎಸ್ಜೆಜೆಎಂ ಕೆಪಿಎಸ್ ಶಾಲೆ ಶತಮಾನ ಪೂರೈಸಿದ್ದರೂ ಶೌಚಾಲಯ, ಶಿಥಿಲಗೊಂಡ ಕಟ್ಟಡ, ಅಪೂರ್ಣಗೊಂಡ ಕಾಮಗಾರಿ ಸೇರಿದಂತೆ ಅಲ್ಲಿಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ‘ಪ್ರಜಾವಾಣಿ‘ ಬುಧವಾರ ಶತಮಾನ ಪೂರೈಸಿದ ಶಾಲೆಯ ದುಸ್ಥಿತಿ ತಲೆ ಬರಹದಲ್ಲಿ ಮೂಲ ಸೌಲಭ್ಯಗಳ ಕುರಿತು ವರದಿ ಪ್ರಕಟಿಸಿತ್ತು.</p>.<p>ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತರ ಸೂಚನೆಯ ಹಿನ್ನೆಲೆಯಲ್ಲಿ ಬಿಇಒ ಎಸ್.ಜಿ.ಕೋಟಿ ಶಾಲೆಗೆ ಭೇಟಿ ನೀಡಿ ವರದಿ ಸಂಗ್ರಹಿಸಿದ್ದಾರೆ. ಶೌಚಾಲಯ, ಶಿಥಿಲಗೊಂಡ ಕಟ್ಟಡ, ಕೊಠಡಿಗಳ ಹಾಗೂ ಶಿಕ್ಷಕರ ಕೊರತೆಗಳ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.</p>.<p>₹50 ಲಕ್ಷ ಅನುದಾನದಲ್ಲಿ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿದ್ದ ಮೂರು ಕೊಠಡಿಗಳ ಕಟ್ಟಡ ಹಾಗೂ ಶೌಚಾಲಯಗಳ ಗೋಡೆಗಳ ಪ್ಲಾಸ್ಟರಿಂಗ್ ಕಾರ್ಯವನ್ನು ಗುತ್ತಿಗೆದಾರರು ಆರಂಭಿಸಿದ್ದಾರೆ ಎನ್ನಲಾಗಿದೆ.</p>.<p>ಇನ್ನೊಂದೆಡೆ ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಿಬ್ಬಂದಿ ಸಭೆ ನಡೆಸಿ ಮುಂದಿನ ಯೋಜನೆಗಳ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ:</strong> ಪಟ್ಟಣದ ಎಸ್ಜೆಜೆಎಂ ಕೆಪಿಎಸ್ ಶಾಲೆ ಶತಮಾನ ಪೂರೈಸಿದ್ದರೂ ಶೌಚಾಲಯ, ಶಿಥಿಲಗೊಂಡ ಕಟ್ಟಡ, ಅಪೂರ್ಣಗೊಂಡ ಕಾಮಗಾರಿ ಸೇರಿದಂತೆ ಅಲ್ಲಿಯ ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ‘ಪ್ರಜಾವಾಣಿ‘ ಬುಧವಾರ ಶತಮಾನ ಪೂರೈಸಿದ ಶಾಲೆಯ ದುಸ್ಥಿತಿ ತಲೆ ಬರಹದಲ್ಲಿ ಮೂಲ ಸೌಲಭ್ಯಗಳ ಕುರಿತು ವರದಿ ಪ್ರಕಟಿಸಿತ್ತು.</p>.<p>ಈ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಪರ ಆಯುಕ್ತರ ಸೂಚನೆಯ ಹಿನ್ನೆಲೆಯಲ್ಲಿ ಬಿಇಒ ಎಸ್.ಜಿ.ಕೋಟಿ ಶಾಲೆಗೆ ಭೇಟಿ ನೀಡಿ ವರದಿ ಸಂಗ್ರಹಿಸಿದ್ದಾರೆ. ಶೌಚಾಲಯ, ಶಿಥಿಲಗೊಂಡ ಕಟ್ಟಡ, ಕೊಠಡಿಗಳ ಹಾಗೂ ಶಿಕ್ಷಕರ ಕೊರತೆಗಳ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.</p>.<p>₹50 ಲಕ್ಷ ಅನುದಾನದಲ್ಲಿ ನಿರ್ಮಾಣ ಹಂತದಲ್ಲಿ ಸ್ಥಗಿತಗೊಂಡಿದ್ದ ಮೂರು ಕೊಠಡಿಗಳ ಕಟ್ಟಡ ಹಾಗೂ ಶೌಚಾಲಯಗಳ ಗೋಡೆಗಳ ಪ್ಲಾಸ್ಟರಿಂಗ್ ಕಾರ್ಯವನ್ನು ಗುತ್ತಿಗೆದಾರರು ಆರಂಭಿಸಿದ್ದಾರೆ ಎನ್ನಲಾಗಿದೆ.</p>.<p>ಇನ್ನೊಂದೆಡೆ ಶಾಲಾಭಿವೃದ್ದಿ ಸಮಿತಿಯ ಉಪಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಸಿಬ್ಬಂದಿ ಸಭೆ ನಡೆಸಿ ಮುಂದಿನ ಯೋಜನೆಗಳ ಕುರಿತು ಚರ್ಚೆಗಳನ್ನು ನಡೆಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>