<p><strong>ಹಾವೇರಿ: </strong>‘ನಿಮ್ಮನ್ನು ಹೆತ್ತು–ಹೊತ್ತು ಸಾಕಿ ಸಲಹಿದ ತಂದೆ–ತಾಯಂದಿರ ಋಣವನ್ನು ಎಂದಿಗೂ ಮರೆಯಬೇಡಿ’ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ನಗರದ ಎಸ್ಜೆಎಂ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 2019–20ನೇ ಸಾಲಿನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ನೀವು ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದ್ಯೋಗ ಪಡೆದ ಹಿಂದೆ ನಿಮ್ಮ ಪೋಷಕರ ಪರಿಶ್ರಮ ಅಡಗಿರುತ್ತದೆ. ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರುತ್ತಾರೆ. ಆದರೆ, ನೀವು ಕಡೆಗಾಲದಲ್ಲಿ ಅವರನ್ನು ಕೈಬಿಡಬೇಡಿ’ ಎಂದು ತಿಳಿ ಹೇಳಿದರು.</p>.<p>ಪಿಯುಸಿ ಶೈಕ್ಷಣಿಕವಾಗಿಯಷ್ಟೇ ಅಲ್ಲ, ಜೀವನದಲ್ಲೂ ಪ್ರಮುಖ ಘಟ್ಟ. ಈ ಘಟ್ಟದಲ್ಲಿ ಗಟ್ಟಿತನದ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ವಿದ್ಯೆಯ ಜತೆಗೆ ವಿವೇಕ ಮೈಗೂಡಿಸಿಕೊಳ್ಳಬೇಕು. ಸಮಸ್ಯೆಗಳ ನಡುವೆಯೇ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದನ್ನು ಒಂದು ಚಿಕ್ಕ ಕತೆಯ ಮೂಲಕ ಮನದಟ್ಟು ಮಾಡಿಕೊಟ್ಟರು.</p>.<p>ಏಕಾಗ್ರತೆ ಕಸಿಯುವ ಮೊಬೈಲ್, ಟಿಕ್ಟಾಕ್ಗಳಂಥ ವ್ಯಸನಗಳಿಂದ ದೂರವಿರಿ. ನಿಮ್ಮ ಗುರಿಯ ಕಡೆಗೆ ಗಮನ ಕೊಡಿ. ಮುರುಘಾಶ್ರೀ ಬೆಳೆಸಿದ ಈ ಹೆಮ್ಮರ (ವಿದ್ಯಾಸಂಸ್ಥೆ)ದಲ್ಲಿ ಹಲವು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಪಡೆದಿದ್ದಾರೆ. ನಿಮ್ಮ ಬಾಳೂ ಬೆಳಗಲಿ ಎಂದು ಹಾರೈಸಿದರು.</p>.<p>ಡಯಟ್ ಪ್ರಾಚಾರ್ಯ ಜಿ.ಎಂ. ಬಸವಲಿಂಗಪ್ಪ, ಸ್ಥಳೀಯ ಆಡಳಿತ ಸಲಹಾ ಸಮಿತಿ ಸದಸ್ಯ ರಾಜೇಂದ್ರ ಸಜ್ಜನ, ಪ್ರಾಂಶುಪಾಲ ಪಿ.ಬಿ. ವಿಜಯಕುಮಾರ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>‘ನಿಮ್ಮನ್ನು ಹೆತ್ತು–ಹೊತ್ತು ಸಾಕಿ ಸಲಹಿದ ತಂದೆ–ತಾಯಂದಿರ ಋಣವನ್ನು ಎಂದಿಗೂ ಮರೆಯಬೇಡಿ’ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ನಗರದ ಎಸ್ಜೆಎಂ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 2019–20ನೇ ಸಾಲಿನ ವಾರ್ಷಿಕೋತ್ಸವ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮುಕ್ತಾಯ ಸಮಾರಂಭ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಸಾನ್ನಿಧ್ಯ ವಹಿಸಿ ಮಾತನಾಡಿದರು.</p>.<p>‘ನೀವು ಉನ್ನತ ಶಿಕ್ಷಣ ಪಡೆದು, ಒಳ್ಳೆಯ ಉದ್ಯೋಗ ಪಡೆದ ಹಿಂದೆ ನಿಮ್ಮ ಪೋಷಕರ ಪರಿಶ್ರಮ ಅಡಗಿರುತ್ತದೆ. ಆಸ್ತಿ ಮಾಡುವುದಕ್ಕಿಂತ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿರುತ್ತಾರೆ. ಆದರೆ, ನೀವು ಕಡೆಗಾಲದಲ್ಲಿ ಅವರನ್ನು ಕೈಬಿಡಬೇಡಿ’ ಎಂದು ತಿಳಿ ಹೇಳಿದರು.</p>.<p>ಪಿಯುಸಿ ಶೈಕ್ಷಣಿಕವಾಗಿಯಷ್ಟೇ ಅಲ್ಲ, ಜೀವನದಲ್ಲೂ ಪ್ರಮುಖ ಘಟ್ಟ. ಈ ಘಟ್ಟದಲ್ಲಿ ಗಟ್ಟಿತನದ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು. ವಿದ್ಯೆಯ ಜತೆಗೆ ವಿವೇಕ ಮೈಗೂಡಿಸಿಕೊಳ್ಳಬೇಕು. ಸಮಸ್ಯೆಗಳ ನಡುವೆಯೇ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದನ್ನು ಒಂದು ಚಿಕ್ಕ ಕತೆಯ ಮೂಲಕ ಮನದಟ್ಟು ಮಾಡಿಕೊಟ್ಟರು.</p>.<p>ಏಕಾಗ್ರತೆ ಕಸಿಯುವ ಮೊಬೈಲ್, ಟಿಕ್ಟಾಕ್ಗಳಂಥ ವ್ಯಸನಗಳಿಂದ ದೂರವಿರಿ. ನಿಮ್ಮ ಗುರಿಯ ಕಡೆಗೆ ಗಮನ ಕೊಡಿ. ಮುರುಘಾಶ್ರೀ ಬೆಳೆಸಿದ ಈ ಹೆಮ್ಮರ (ವಿದ್ಯಾಸಂಸ್ಥೆ)ದಲ್ಲಿ ಹಲವು ವಿದ್ಯಾರ್ಥಿಗಳು ಉಜ್ವಲ ಭವಿಷ್ಯ ಪಡೆದಿದ್ದಾರೆ. ನಿಮ್ಮ ಬಾಳೂ ಬೆಳಗಲಿ ಎಂದು ಹಾರೈಸಿದರು.</p>.<p>ಡಯಟ್ ಪ್ರಾಚಾರ್ಯ ಜಿ.ಎಂ. ಬಸವಲಿಂಗಪ್ಪ, ಸ್ಥಳೀಯ ಆಡಳಿತ ಸಲಹಾ ಸಮಿತಿ ಸದಸ್ಯ ರಾಜೇಂದ್ರ ಸಜ್ಜನ, ಪ್ರಾಂಶುಪಾಲ ಪಿ.ಬಿ. ವಿಜಯಕುಮಾರ ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>