<p><strong>ಹಾವೇರಿ:</strong> ಬೆಂಗಳೂರಿನಿಂದ ಬುಧವಾರ ಶಾಸಕ ಸಿ.ಎಂ. ಉದಾಸಿ ಅವರ ಪಾರ್ಥಿವ ಶರೀರವನ್ನು ಕುಮಾರಪಟ್ಟಣ, ರಾಣೆಬೆನ್ನೂರು ಮಾರ್ಗವಾಗಿ ಹಾವೇರಿ ನಗರಕ್ಕೆ ವಾಹನದ ಮೂಲಕ ತರಲಾಯಿತು.</p>.<p>ಪಾರ್ಥಿವ ಶರೀರವಿದ್ದ ವಾಹನದಲ್ಲೇ ಬೆಂಗಳೂರಿನಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉದಾಸಿ ಪುತ್ರರಾದ ಸಂಸದ ಶಿವಕುಮಾರ ಉದಾಸಿ ಬಂದರು.</p>.<p>ಕುಮಾರಪಟ್ಟಣದ ಟೋಲ್ ಗೇಟ್ ಹತ್ತಿರ ಅವರ ಅಭಿಮಾನಿಗಳು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಹಾವೇರಿ ನಗರದಲ್ಲಿ ಮಧ್ಯಾಹ್ನ ಶಾಸಕ ನೆಹರು ಓಲೇಕಾರ ಹಾಗೂ ಬಿಜೆಪಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು.</p>.<p>ಶಾಸಕ ಎಚ್.ಕೆ ಪಾಟೀಲ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ ಹಾಗೂ ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದರು.</p>.<p>ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ನೆರೆದಿದ್ದರು.</p>.<p>ಹಾವೇರಿ ನಗರದಿಂದ ಉದಾಸಿ ಅವರ ಸ್ವಕ್ಷೇತ್ರ ಹಾನಗಲ್ ಪಟ್ಟಣಕ್ಕೆ ಪಾರ್ಥಿವ ಶರೀರದ ವಾಹನ ತೆರಳಿತು.</p>.<p>ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಬೆಂಗಳೂರಿನಿಂದ ಬುಧವಾರ ಶಾಸಕ ಸಿ.ಎಂ. ಉದಾಸಿ ಅವರ ಪಾರ್ಥಿವ ಶರೀರವನ್ನು ಕುಮಾರಪಟ್ಟಣ, ರಾಣೆಬೆನ್ನೂರು ಮಾರ್ಗವಾಗಿ ಹಾವೇರಿ ನಗರಕ್ಕೆ ವಾಹನದ ಮೂಲಕ ತರಲಾಯಿತು.</p>.<p>ಪಾರ್ಥಿವ ಶರೀರವಿದ್ದ ವಾಹನದಲ್ಲೇ ಬೆಂಗಳೂರಿನಿಂದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಉದಾಸಿ ಪುತ್ರರಾದ ಸಂಸದ ಶಿವಕುಮಾರ ಉದಾಸಿ ಬಂದರು.</p>.<p>ಕುಮಾರಪಟ್ಟಣದ ಟೋಲ್ ಗೇಟ್ ಹತ್ತಿರ ಅವರ ಅಭಿಮಾನಿಗಳು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಹಾವೇರಿ ನಗರದಲ್ಲಿ ಮಧ್ಯಾಹ್ನ ಶಾಸಕ ನೆಹರು ಓಲೇಕಾರ ಹಾಗೂ ಬಿಜೆಪಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು.</p>.<p>ಶಾಸಕ ಎಚ್.ಕೆ ಪಾಟೀಲ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ ಹಾಗೂ ಕಾಂಗ್ರೆಸ್ ಮುಖಂಡರು ಅಂತಿಮ ದರ್ಶನ ಪಡೆದರು.</p>.<p>ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು, ಅಭಿಮಾನಿಗಳು ನೆರೆದಿದ್ದರು.</p>.<p>ಹಾವೇರಿ ನಗರದಿಂದ ಉದಾಸಿ ಅವರ ಸ್ವಕ್ಷೇತ್ರ ಹಾನಗಲ್ ಪಟ್ಟಣಕ್ಕೆ ಪಾರ್ಥಿವ ಶರೀರದ ವಾಹನ ತೆರಳಿತು.</p>.<p>ಸಂಜೆ 4 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>