ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ.