<p><strong>ಹಾವೇರಿ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಾದ ಫಕ್ಕೀರೇಶನಿಗೆ 10 ವರ್ಷಗಳ ಜೈಲುಶಿಕ್ಷೆ ಹಾಗೂ ಬಸವರಾಜ ರಾಮಪ್ಪ ಸಣ್ಣಪ್ಪನವರಗೆ ಏಳು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ.</p>.<p>ಬಾಲಕಿಯನ್ನು ನಿತ್ಯ ಶಾಲೆಗೆ ವಾಹನದಲ್ಲಿ ಬಿಡುವುದು ಹಾಗೂ ಕರೆತರುವ ಮೂಲಕ ಪರಿಚಯ ಮಾಡಿಕೊಂಡ ಫಕ್ಕೀರೇಶ ಈರಪ್ಪ ಕಾಮನಹಳ್ಳಿ ಹಾಗೂ ಬಸವರಾಜ ರಾಮಪ್ಪ ಸಣ್ಣಪ್ಪನವರ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೀರು ಕೇಳುವ ನೆಪದಲ್ಲಿ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು.ಶಿಗ್ಗಾವಿ ವೃತ್ತ ನಿರೀಕ್ಷಕರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ಪೋಕ್ಸೊ ಕಾಯ್ದೆಯಡಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದ್ದು,ಸಂತ್ರಸ್ತೆಗೆ ಪರಿಹಾರವಾಗಿ ₹ 15 ಸಾವಿರ ನೀಡಲು ಆದೇಶಿಸಲಾಗಿದೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿಗಳಾದ ಫಕ್ಕೀರೇಶನಿಗೆ 10 ವರ್ಷಗಳ ಜೈಲುಶಿಕ್ಷೆ ಹಾಗೂ ಬಸವರಾಜ ರಾಮಪ್ಪ ಸಣ್ಣಪ್ಪನವರಗೆ ಏಳು ವರ್ಷಗಳ ಶಿಕ್ಷೆ ಹಾಗೂ ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ (ಪೋಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ.</p>.<p>ಬಾಲಕಿಯನ್ನು ನಿತ್ಯ ಶಾಲೆಗೆ ವಾಹನದಲ್ಲಿ ಬಿಡುವುದು ಹಾಗೂ ಕರೆತರುವ ಮೂಲಕ ಪರಿಚಯ ಮಾಡಿಕೊಂಡ ಫಕ್ಕೀರೇಶ ಈರಪ್ಪ ಕಾಮನಹಳ್ಳಿ ಹಾಗೂ ಬಸವರಾಜ ರಾಮಪ್ಪ ಸಣ್ಣಪ್ಪನವರ ಎಂಬುವವರು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೀರು ಕೇಳುವ ನೆಪದಲ್ಲಿ ಹೋಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಬಗ್ಗೆ ಠಾಣೆಯಲ್ಲಿ ದೂರು ದಾಖಲಾಗಿತ್ತು.ಶಿಗ್ಗಾವಿ ವೃತ್ತ ನಿರೀಕ್ಷಕರು ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ಪೋಕ್ಸೊ ಕಾಯ್ದೆಯಡಿ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದ್ದು,ಸಂತ್ರಸ್ತೆಗೆ ಪರಿಹಾರವಾಗಿ ₹ 15 ಸಾವಿರ ನೀಡಲು ಆದೇಶಿಸಲಾಗಿದೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>