ಆರೋಪಿ ನಿಂಗರಾಜ ಶಿವಾನಂದ ಹರ್ಲಾಪುರ ಈತನು ಬಾಲಕಿಯನ್ನು ಮೋಟಾರ್ ಸೈಕಲ್ನಲ್ಲಿ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ಬಾಲಕಿಯರ ಇಚ್ಛೆಗೆ ವಿರುದ್ಧವಾಗಿ ಒತ್ತಾಯಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ ಅಪರಾಧಕ್ಕಾಗಿ ಸವಣೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸವಣೂರ ವೃತ್ತ ತನಿಖಾಧಿಕಾರಿ ಸಿಪಿಐ ನಾಗರಾಜ ಎಚ್.ಮೈಲಾರ ಅವರು ತನಿಖೆ ನಡೆಸಿ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.