<p><strong>ಹಾವೇರಿ: </strong>ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸೊರಬ ತಾಲ್ಲೂಕು ಉದ್ರಿ ಗ್ರಾಮದ ಚಂದ್ರಪ್ಪ ಈರಪ್ಪ ಗಂಗಳ್ಳೇರ (42) ಎಂಬಾತನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹1.60 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸೆಷನ್ಸ್ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಆದೇಶ ನೀಡಿದ್ದಾರೆ.</p>.<p>ಬಾಲಕಿಯನ್ನು ಫೋನಿನ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಜುಲೈ 2020ರಂದು ಅಪಹರಿಸಿಕೊಂಡು ಹೋಗಿದ್ದ. ಚಿಕ್ಕಮಗಳೂರು ಮತ್ತು ಸಕಲೇಶಪುರ ಸಮೀಪದ ಕಾಫಿ ಎಸ್ಟೇಟ್ನಲ್ಲಿರುವ ಮನೆಯಲ್ಲಿ ಬಾಲಕಿಯ ಇಚ್ಛೆಯ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದಾಗಿ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.</p>.<p>ಬ್ಯಾಡಗಿ ವೃತ್ತ ತನಿಖಾಧಿಕಾರಿ ಸಿಪಿಐ ಬಸವರಾಜ ಪಿ.ಎಸ್. ಅವರು ತನಿಖೆ ನಡೆಸಿ, ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ದಂಡದ ಹಣದಲ್ಲಿ ನೊಂದ ಬಾಲಕಿಗೆ ₹1.50 ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ₹4 ಲಕ್ಷ ಪರಿಹಾರ ನೀಡಲು ಆದೇಶ ಮಾಡಿ ತೀರ್ಪು ನೀಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸೊರಬ ತಾಲ್ಲೂಕು ಉದ್ರಿ ಗ್ರಾಮದ ಚಂದ್ರಪ್ಪ ಈರಪ್ಪ ಗಂಗಳ್ಳೇರ (42) ಎಂಬಾತನಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹1.60 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸೆಷನ್ಸ್ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಆದೇಶ ನೀಡಿದ್ದಾರೆ.</p>.<p>ಬಾಲಕಿಯನ್ನು ಫೋನಿನ ಮೂಲಕ ಪರಿಚಯ ಮಾಡಿಕೊಂಡು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ, ಜುಲೈ 2020ರಂದು ಅಪಹರಿಸಿಕೊಂಡು ಹೋಗಿದ್ದ. ಚಿಕ್ಕಮಗಳೂರು ಮತ್ತು ಸಕಲೇಶಪುರ ಸಮೀಪದ ಕಾಫಿ ಎಸ್ಟೇಟ್ನಲ್ಲಿರುವ ಮನೆಯಲ್ಲಿ ಬಾಲಕಿಯ ಇಚ್ಛೆಯ ವಿರುದ್ಧವಾಗಿ ಅತ್ಯಾಚಾರ ಎಸಗಿದ್ದಾಗಿ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.</p>.<p>ಬ್ಯಾಡಗಿ ವೃತ್ತ ತನಿಖಾಧಿಕಾರಿ ಸಿಪಿಐ ಬಸವರಾಜ ಪಿ.ಎಸ್. ಅವರು ತನಿಖೆ ನಡೆಸಿ, ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.</p>.<p>ದಂಡದ ಹಣದಲ್ಲಿ ನೊಂದ ಬಾಲಕಿಗೆ ₹1.50 ಲಕ್ಷ ಪರಿಹಾರ ಹಾಗೂ ಕರ್ನಾಟಕ ಸರ್ಕಾರದ ನೊಂದವರ ಪರಿಹಾರ ನಿಧಿ ಯೋಜನೆಯಡಿ ಇರುವ ಪರಿಹಾರ ನಿಧಿಯಿಂದ ₹4 ಲಕ್ಷ ಪರಿಹಾರ ನೀಡಲು ಆದೇಶ ಮಾಡಿ ತೀರ್ಪು ನೀಡಿದ್ದಾರೆ.</p>.<p>ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ವಿಜಯಕುಮಾರ ಶಂಕರಗೌಡ ಪಾಟೀಲ ವಾದ ಮಂಡಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>