ಹಾವೇರಿ: ಯುವತಿ ಮೇಲೆಲೈಂಗಿಕ ದೌರ್ಜನ್ಯ ಎಸಗಿದ ನೆಲೋಗಲ್ಲ ಗ್ರಾಮದ ಆರೋಪಿ ಮಹಾರುದ್ರಗೌಡ ಸಿದ್ಧನಗೌಡ್ರ ಎಂಬುವನಿಗೆ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಕಿರಣ ಕಿಣಿ ಅವರು ಜೀವಾವಧಿ ಶಿಕ್ಷೆ ಹಾಗೂ ₹ 25 ಸಾವಿರ ದಂಡ ವಿಧಿಸಿದ್ದಾರೆ.
ಕೃತ್ಯದ ಕುರಿತು ಯಾರಿಗಾದರೂ ಹೇಳಿದರೆ ಆರೋಪಿ ಪ್ರಾಣ ತೆಗೆಯುವುದಾಗಿ ಜೀವಬೆದರಿಕೆ ಹಾಕಿದ್ದ ಎಂದು ನೊಂದ ಯುವತಿ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ನಡೆಸಿದ ಪೊಲೀಸರು ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕದ ಸಿದ್ಧಾರೂಡ ಗೆಜ್ಜಿಹಳ್ಳಿ ವಾದ ಮಂಡಿಸಿದ್ದರು.