ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ಹೊಸ ಶಿಕ್ಷಣ ನೀತಿಯ ಶಿಫಾರಸುಗಳನ್ನು ರಾಜ್ಯ ಸರ್ಕಾರ ಈ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ತರಲು ಹೊರಟಿದೆ. ಅಲ್ಲದೆ, ಅದಕ್ಕಾಗಿ ಸಮಿತಿಯೊಂದನ್ನು ರಚಿಸಿ ಕೇವಲ ಹತ್ತು ದಿನದಲ್ಲಿಯೇ ವರದಿ ನೀಡಲೂ ಕೇಳಿತ್ತು. ಮಾತೃ ಭಾಷಾ ಕಲಿಕೆಯನ್ನೂ ಒಂದು ವರ್ಷಕ್ಕೆ ಸೀಮಿತಗೊಳಿಸುವ ಪ್ರಯತ್ನವೂ ನಡೆಯುತ್ತಿರುವ ಬೆಳವಣಿಗೆಗಳಿಗೆ ನಮ್ಮ ವಿರೋಧವಿದೆ ಎಂದು ಹೇಳಿದರು.