<p><strong>ಹಾವೇರಿ: </strong>ತಾಲ್ಲೂಕಿನ ಸುಕ್ಷೇತ್ರ ನರಸೀಪುರದ ‘ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ’ದ ವತಿಯಿಂದ ಜ.14 ಮತ್ತು 15ರಂದು ಶರಣ ಸಂಸ್ಕೃತಿ ಉತ್ಸವ ಮತ್ತು ವಚನ ಗ್ರಂಥ ಮಹಾರಥೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಗುರುಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ತಿಳಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂಬಿಗರ ಚೌಡಯ್ಯನವರ 900ನೇ ಜಯಂತ್ಯುತ್ಸವ, ಮಠದಪ್ರಥಮ ಪೀಠಾಧಿಪತಿ ಶಾಂತಮುನಿ ಸ್ವಾಮೀಜಿ ಅವರ 4ನೇ ಸ್ಮರಣೋತ್ಸವ, ಶಾಂತಭೀಷ್ಮಚೌಡಯ್ಯ ಸ್ವಾಮೀಜಿಯವರ ತೃತೀಯ ಪೀಠಾರೋಹಣ ವಾರ್ಷಿಕ ಮಹೋತ್ಸವ ಹಾಗೂ ಸಾಮೂಹಿಕ ಸರಳ ವಿವಾಹ ಮಹೋತ್ಸವವನ್ನು ಆಯೋಜಿಸಿದ್ದೇವೆ ಎಂದು ಮಾಹಿತಿ ನೀಡಿದರು.</p>.<p>ಜ.14ರಂದು ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ. ನಂತರ ಗುರುಪೀಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ವಿವಿಧ ಕಲಾತಂಡಗಳಿಂದ ರಾತ್ರಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಆನಂತರ ಅಂಬಿಗರ ಚೌಡಯ್ಯನವರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.</p>.<p>ಜ.15ರಂದು ಬೆಳಿಗ್ಗೆ 8ಕ್ಕೆ ಧರ್ಮ ಧ್ವಜಾರೋಹಣ, ಬೆಳಿಗ್ಗೆ 8.30ಕ್ಕೆ ಸಾಮೂಹಿಕ ವಿವಾಹ, ಬೆಳಿಗ್ಗೆ 9.30ಕ್ಕೆ ಧರ್ಮಸಭೆ, ಬೆಳಿಗ್ಗೆ 11.30ಕ್ಕೆ ಅಂಬಿಗರ ಚೌಡಯ್ಯನವರ 900ನೇ ಜಯಂತ್ಯುತ್ಸವ ಹಾಗೂ ಸಂಜೆ 5ಕ್ಕೆ ಗೋಧೂಳಿ ಸಮಯದಲ್ಲಿ ವಚನ ಗ್ರಂಥ ಮಹಾರಥೋತ್ಸವ ಜರುಗುವುದು ಎಂದು ತಿಳಿಸಿದರು.</p>.<p>‘ರೊಟ್ಟಿ ಜಾತ್ರೆ’ ಎಂದು ವಿಶೇಷ ಹೆಸರು ಪಡೆಯುತ್ತಿರುವ ಈ ಜಾತ್ರೆಗೆ ರಾಜ್ಯದ ಮೂಲೆ–ಮೂಲೆಯಿಂದ ಹಾಗೂ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. 2 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಬಸವರಾಜ ಕಳಸೂರ, ಸುಭಾಸ ಹೆಸರಿ, ಮಾರುತಿ ಕಬ್ಬೆರ, ಮಂಜುನಾಥ ಬೂವಿ, ಪರಶುರಾಮ ಸೊನ್ನದ, ಬರಮಣ್ಣ ಉಳಗಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ತಾಲ್ಲೂಕಿನ ಸುಕ್ಷೇತ್ರ ನರಸೀಪುರದ ‘ನಿಜಶರಣ ಅಂಬಿಗರ ಚೌಡಯ್ಯನವರ ಗುರುಪೀಠ’ದ ವತಿಯಿಂದ ಜ.14 ಮತ್ತು 15ರಂದು ಶರಣ ಸಂಸ್ಕೃತಿ ಉತ್ಸವ ಮತ್ತು ವಚನ ಗ್ರಂಥ ಮಹಾರಥೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಗುರುಪೀಠದ ಶಾಂತಭೀಷ್ಮಚೌಡಯ್ಯ ಸ್ವಾಮೀಜಿ ತಿಳಿಸಿದರು.</p>.<p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂಬಿಗರ ಚೌಡಯ್ಯನವರ 900ನೇ ಜಯಂತ್ಯುತ್ಸವ, ಮಠದಪ್ರಥಮ ಪೀಠಾಧಿಪತಿ ಶಾಂತಮುನಿ ಸ್ವಾಮೀಜಿ ಅವರ 4ನೇ ಸ್ಮರಣೋತ್ಸವ, ಶಾಂತಭೀಷ್ಮಚೌಡಯ್ಯ ಸ್ವಾಮೀಜಿಯವರ ತೃತೀಯ ಪೀಠಾರೋಹಣ ವಾರ್ಷಿಕ ಮಹೋತ್ಸವ ಹಾಗೂ ಸಾಮೂಹಿಕ ಸರಳ ವಿವಾಹ ಮಹೋತ್ಸವವನ್ನು ಆಯೋಜಿಸಿದ್ದೇವೆ ಎಂದು ಮಾಹಿತಿ ನೀಡಿದರು.</p>.<p>ಜ.14ರಂದು ಸಂಜೆ 5.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಲಿದೆ. ನಂತರ ಗುರುಪೀಠ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ವಿವಿಧ ಕಲಾತಂಡಗಳಿಂದ ರಾತ್ರಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಆನಂತರ ಅಂಬಿಗರ ಚೌಡಯ್ಯನವರ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.</p>.<p>ಜ.15ರಂದು ಬೆಳಿಗ್ಗೆ 8ಕ್ಕೆ ಧರ್ಮ ಧ್ವಜಾರೋಹಣ, ಬೆಳಿಗ್ಗೆ 8.30ಕ್ಕೆ ಸಾಮೂಹಿಕ ವಿವಾಹ, ಬೆಳಿಗ್ಗೆ 9.30ಕ್ಕೆ ಧರ್ಮಸಭೆ, ಬೆಳಿಗ್ಗೆ 11.30ಕ್ಕೆ ಅಂಬಿಗರ ಚೌಡಯ್ಯನವರ 900ನೇ ಜಯಂತ್ಯುತ್ಸವ ಹಾಗೂ ಸಂಜೆ 5ಕ್ಕೆ ಗೋಧೂಳಿ ಸಮಯದಲ್ಲಿ ವಚನ ಗ್ರಂಥ ಮಹಾರಥೋತ್ಸವ ಜರುಗುವುದು ಎಂದು ತಿಳಿಸಿದರು.</p>.<p>‘ರೊಟ್ಟಿ ಜಾತ್ರೆ’ ಎಂದು ವಿಶೇಷ ಹೆಸರು ಪಡೆಯುತ್ತಿರುವ ಈ ಜಾತ್ರೆಗೆ ರಾಜ್ಯದ ಮೂಲೆ–ಮೂಲೆಯಿಂದ ಹಾಗೂ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. 2 ಲಕ್ಷ ಭಕ್ತರು ಬರುವ ನಿರೀಕ್ಷೆ ಇದೆ ಎಂದು ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಬಸವರಾಜ ಕಳಸೂರ, ಸುಭಾಸ ಹೆಸರಿ, ಮಾರುತಿ ಕಬ್ಬೆರ, ಮಂಜುನಾಥ ಬೂವಿ, ಪರಶುರಾಮ ಸೊನ್ನದ, ಬರಮಣ್ಣ ಉಳಗಿ ಮುಂತಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>