<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಹರನಗಿರಿ ಗ್ರಾಮದ ನಿಂಗಪ್ಪ ಛತ್ರದ ಎಂಬುವರು ಸಾಕಿದ್ದ ₹ 50 ಸಾವಿರ ಕಿಮ್ಮತ್ತಿನ ಎರಡು ವರ್ಷದ 4 ಹಲ್ಲಿನ ಟಗರನ್ನು ಯಾರೋ ಕಿಡಿಗೇಡಿಗಳು ಕಳ್ಳತನ ಮಾಡಿಕೊಂಡು ಹೋದ ಬುಧವಾರ ಘಟನೆ ನಡೆದಿದೆ.</p>.<p>ಹರನಗಿರಿ ಗ್ರಾಮದ ನಿಂಗಪ್ಪ ಛತ್ರದ ಮಾತನಾಡಿ, ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಎರಡು ವರ್ಷದ 4 ಹಲ್ಲಿನ ಟಗರುಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ವಿವಿಧ ಕಡೆಗಳಲ್ಲಿ ನಡೆದ ಟಗರಿನ ಕಾಳಗದಲ್ಲಿ ಸೆಣಸಿದ್ದು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೆಸರು ಮಾಡಿ ಅನೇಕ ಬಹುಮಾನಗಳನ್ನು ಪಡೆದಿತ್ತು ಎಂದರು.</p>.<p>ಗ್ರಾಮದಲ್ಲಿ ಈಚೆಗೆ ಅಂಬೇಡ್ಕರ್ ಭಾವಚಿತ್ರವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದ ಘಟನಾ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ಮುಂದೆಯೇ ಟಗರು ಕಳ್ಳತನವಾಗಿದೆ. ಪೊಲೀಸರು ಕಳ್ಳರನ್ನು ಕೂಡಲೇ ಪತ್ತೆ ಮಾಡಬೇಕು. ಇಲ್ಲದಿದ್ದರೆ, ನ್ಯಾಯಕ್ಕಾಗಿ ಒತ್ತಾಯಿಸಿ ಹರನಗಿರಿ ಗ್ರಾಮದಿಂದ ದಾವಣಗೆರೆ ಐಜಿಪಿ ಕಚೇರಿಯವರೆಗೆ ಪಾದಯಾತ್ರೆ ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.</p>.<p>ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಣೆಬೆನ್ನೂರು:</strong> ತಾಲ್ಲೂಕಿನ ಹರನಗಿರಿ ಗ್ರಾಮದ ನಿಂಗಪ್ಪ ಛತ್ರದ ಎಂಬುವರು ಸಾಕಿದ್ದ ₹ 50 ಸಾವಿರ ಕಿಮ್ಮತ್ತಿನ ಎರಡು ವರ್ಷದ 4 ಹಲ್ಲಿನ ಟಗರನ್ನು ಯಾರೋ ಕಿಡಿಗೇಡಿಗಳು ಕಳ್ಳತನ ಮಾಡಿಕೊಂಡು ಹೋದ ಬುಧವಾರ ಘಟನೆ ನಡೆದಿದೆ.</p>.<p>ಹರನಗಿರಿ ಗ್ರಾಮದ ನಿಂಗಪ್ಪ ಛತ್ರದ ಮಾತನಾಡಿ, ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಎರಡು ವರ್ಷದ 4 ಹಲ್ಲಿನ ಟಗರುಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿದ್ದಾರೆ. ವಿವಿಧ ಕಡೆಗಳಲ್ಲಿ ನಡೆದ ಟಗರಿನ ಕಾಳಗದಲ್ಲಿ ಸೆಣಸಿದ್ದು, ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಹೆಸರು ಮಾಡಿ ಅನೇಕ ಬಹುಮಾನಗಳನ್ನು ಪಡೆದಿತ್ತು ಎಂದರು.</p>.<p>ಗ್ರಾಮದಲ್ಲಿ ಈಚೆಗೆ ಅಂಬೇಡ್ಕರ್ ಭಾವಚಿತ್ರವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದ ಘಟನಾ ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ಮುಂದೆಯೇ ಟಗರು ಕಳ್ಳತನವಾಗಿದೆ. ಪೊಲೀಸರು ಕಳ್ಳರನ್ನು ಕೂಡಲೇ ಪತ್ತೆ ಮಾಡಬೇಕು. ಇಲ್ಲದಿದ್ದರೆ, ನ್ಯಾಯಕ್ಕಾಗಿ ಒತ್ತಾಯಿಸಿ ಹರನಗಿರಿ ಗ್ರಾಮದಿಂದ ದಾವಣಗೆರೆ ಐಜಿಪಿ ಕಚೇರಿಯವರೆಗೆ ಪಾದಯಾತ್ರೆ ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.</p>.<p>ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>