<p><strong>ಶಿಗ್ಗಾವಿ</strong>: ಪಟ್ಟಣ ಹಾಗೂ ತಾಲ್ಲೂಕಿನ ಗ್ರಾಮಗಳ ಹಲವು ರಸ್ತೆಗಳು ಗುಂಡಿಮಯವಾಗಿದ್ದು, ರಸ್ತೆಯಲ್ಲಿ ಸಂಚರಿಸಲು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳಲ್ಲಿ ತಗ್ಗು– ಗುಂಡಿಗಳು ಬಿದ್ದಿದ್ದು, ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ನಿತ್ಯ ಸಂಚರಿಸುವ ವಾಹನ ಸವಾರರು, ಪಾದಚಾರಿಗಳು ಪರದಾಡುತ್ತಿದ್ದಾರೆ. ಹದಗೆಟ್ಟ ರಸ್ತೆಗಳನ್ನು ನೋಡಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಪಟ್ಟಣದಿಂದ ಸವಣೂರಿಗೆ ಹೋಗುವ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದು ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗುತ್ತಿವೆ. ಬೈಕ್ ಸವಾರರು ಗಾಯಗೊಂಡು ಆಸ್ಪತ್ರೆ ಸೇರುತ್ತಿದ್ದಾರೆ.</p>.<p>‘ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಸಾಕಷ್ಟು ಸಮಸ್ಯೆಯಾಗಿದೆ. ಆದರೂ ಈವರೆಗೂ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ. ತಕ್ಷಣ ರಸ್ತೆ ಅಭಿವೃದ್ಧಿಗೆ ಕಾಮಗಾರಿ ಕೈಗೊಳ್ಳಬೇಕು’ ಎಂದು ಜನರು ಆಗ್ರಹಿಸುತ್ತಿದ್ದಾರೆ.</p>.<p>ಕೆಎಸ್ಆರ್ಪಿ ರಸ್ತೆಯೂ ಅಧೋಗತಿ: ಶಿಗ್ಗಾವಿಯಿಂದ ಗಂಗೆಭಾವಿಗೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಈ ಮಾರ್ಗದ ಹಳ್ಳದ ಬಳಿಯ ರಸ್ತೆಯಲ್ಲಿ ತಗ್ಗುಗುಂಡಿಗಳು ಬಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ.</p>.<p>ಗಂಗೆಭಾವಿ ಕೆ.ಎಸ್.ಆರ್.ಪಿ. 10ನೇ ಪಡೆ ಪೊಲೀಸ್ ಸಿಬ್ಬಂದಿ ನಿತ್ಯ ಓಡಾಡುವುದು ಸಹ ಕಷ್ಟಕರವಾಗಿದೆ. ಅಲ್ಲದೆ, ಈ ಮಾರ್ಗದಲ್ಲಿ ಬರುವ ಹೊಸೂರ, ಯತ್ನಹಳ್ಳಿ, ದುಂಡಸಿ, ಅರಟಾಳ ಸೇರಿದಂತೆ ಹಲವು ಗ್ರಾಮಗಳಿಗೆ ಹೋಗುವ ರಸ್ತೆಯೂ ಹದಗೆಟ್ಟಿದೆ.</p>.<p>‘ಶಿಗ್ಗಾವಿಯಿಂದ ಆಂಜನೇಯ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಸಂಚರಿಸುತ್ತಿದ್ದಾರೆ. ಹದಗೆಟ್ಟ ರಸ್ತೆಯಿಂದ ಭಕ್ತರು ಪರದಾಡುತ್ತಿದ್ದಾರೆ. ಆದರೆ, ಹದಗೆಟ್ಟ ರಸ್ತೆಯನ್ನು ಅಧಿಕಾರಿಗಳು ಸರಿಪಡಿಸುತ್ತಿಲ್ಲ’ ಎಂದು ಮುಖಂಡ ಸಣ್ಣಪ್ಪಗೌಡ ಪಾಟೀಲ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಿಗ್ಗಾವಿ ಪಟ್ಟಣದ ಪ್ರವಾಸಿ ಮಂದಿರದ ಎದುರಿಗಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯೂ ಹೆಗೆಟ್ಟಿದೆ. ಆಳವಾದ ತಗ್ಗು–ಗುಂಡಿಗಳು ಬಿದ್ದು, ಸಂಚಾರ ಪ್ರಯಾಸ ಎದುರಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ದೂರದಿಂದ ಬರುವ ಪ್ರಯಾಣಿಕರು, ಶಿಗ್ಗಾವಿ ಪ್ರವೇಶಿಸುತ್ತಿದ್ದಂತೆ ಗುಂಡಿ ರಸ್ತೆಯಲ್ಲಿ ಸಾಗಬೇಕಾಗಿದೆ. ಅಲ್ಲದೆ, ಅನೇಕ ದ್ವಿಚಕ್ರ ವಾಹನಗಳ ಸವಾರರು ಬಿದ್ದು ಗಾಯಗೊಂಡಿದ್ದಾರೆ.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ, ನ್ಯಾಯಾಲಯಕ್ಕೆ ಹೋಗುವ ರಸ್ತೆಗಳು ತೀವ್ರ ಹದಗೆಟ್ಟಿವೆ. ಈ ರಸ್ತೆ ದಾಟುವವರೆಗೆ ಜೀವ ಕೈಯಲ್ಲಿ ಹಿಡಿದುಕೊಂಡು ಜನರು ಸಾಗುವಂತಾಗಿದೆ ಎಂದು ನಿವಾಸಿ ಸಿದ್ದಪ್ಪ ಕಡೆಮನಿ ದೂಡಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಕ್ರಾಸ್ ಬಳಿ ಕನಕದಾಸರ ವೃತ್ತದಲ್ಲಿ ಮತ್ತು ದುರ್ಗಾದೇವಿ ದೇವಸ್ಥಾನದ ವೃತ್ತ ಮತ್ತು ಬಂಕಾಪುರದಿಂದ ಮಾಸನಕಟ್ಟಿ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯೂ ತಗ್ಗುಗುಂಡಿಗಳಿಂದ ಹದಗೆಟ್ಟಿದೆ. ಈ ರಸ್ತೆಗಳಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿವೆ.</p>.<p>‘ಬಂಕಾಪುರದಿಂದ ಸವಣೂರಿಗೆ ಹೋಗುವ ರಸ್ತೆಯೂ ಹಾಳಾಗಿದೆ. ಹೀಗಾಗಿ, ವಾಹನ ಸವಾರರು ಭಯದಲ್ಲಿ ಸಂಚರಿಸುತ್ತಿದ್ದಾರೆ. ಸಾಕಷ್ಟು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಬಂಕಾಪುರ ನಿವಾಸಿಗಳಾದ ರುದ್ರೇಶ ಪವಾಡಿ, ಚನ್ನಪ್ಪ ಹಳವಳ್ಳಿ ಅಳಲು ತೋಡಿಕೊಂಡರು.</p>.<p>ಮುಖಂಡ ಬಸವರಾಜ ಹಿರೇಬೆಂಡಿಗೇರಿ, ‘ಮುಖ್ಯ ರಸ್ತೆಗಳು ಮಾತ್ರವಲ್ಲದೇ, ಗ್ರಾಮೀಣ ಪ್ರದೇಶಗಳ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಅಧಿಕಾರಿಗಳು, ಜನಪ್ರತಿನಿಧಿಗಳು ರಸ್ತೆ ದುರಸ್ತಿ ಕಡೆ ಗಮನ ಹರಿಸಬೇಕು. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಪಘಾತ ತಗ್ಗಿಸಬೇಕು’ ಎಂದು ಆಗ್ರಹಿಸಿದರು.</p>.<div><blockquote>ರಸ್ತೆಗಳ ದುರಸ್ತಿಗಾಗಿ ಈಗಾಗಲೇ ಟೆಂಡರ್ ಪ್ರಕಟಣೆಯಾಗಿದೆ. ಸದ್ಯದಲ್ಲಿ ರಸ್ತೆ ದುರಸ್ತಿ ಕಾಮಗಾರಿಗಳನ್ನು ಆರಂಭಿಸಲಾಗುವುದು</blockquote><span class="attribution">ಬಸವರಾಜ ಡಿ.ಬಿ. ಲೋಕೋಪಯೋಗಿ ಇಲಾಖೆ ಶಿಗ್ಗಾವಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಪಟ್ಟಣ ಹಾಗೂ ತಾಲ್ಲೂಕಿನ ಗ್ರಾಮಗಳ ಹಲವು ರಸ್ತೆಗಳು ಗುಂಡಿಮಯವಾಗಿದ್ದು, ರಸ್ತೆಯಲ್ಲಿ ಸಂಚರಿಸಲು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಗ್ರಾಮೀಣ ರಸ್ತೆಗಳಲ್ಲಿ ತಗ್ಗು– ಗುಂಡಿಗಳು ಬಿದ್ದಿದ್ದು, ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ನಿತ್ಯ ಸಂಚರಿಸುವ ವಾಹನ ಸವಾರರು, ಪಾದಚಾರಿಗಳು ಪರದಾಡುತ್ತಿದ್ದಾರೆ. ಹದಗೆಟ್ಟ ರಸ್ತೆಗಳನ್ನು ನೋಡಿ ಅಧಿಕಾರಿಗಳ ವಿರುದ್ಧ ಜನರು ಹಿಡಿಶಾಪ ಹಾಕುತ್ತಿದ್ದಾರೆ.</p>.<p>ಪಟ್ಟಣದಿಂದ ಸವಣೂರಿಗೆ ಹೋಗುವ ರಸ್ತೆಗಳಲ್ಲಿ ಆಳವಾದ ಗುಂಡಿಗಳು ಬಿದ್ದು ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚೆಗೆ ಈ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗುತ್ತಿವೆ. ಬೈಕ್ ಸವಾರರು ಗಾಯಗೊಂಡು ಆಸ್ಪತ್ರೆ ಸೇರುತ್ತಿದ್ದಾರೆ.</p>.<p>‘ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಸಾಕಷ್ಟು ಸಮಸ್ಯೆಯಾಗಿದೆ. ಆದರೂ ಈವರೆಗೂ ರಸ್ತೆ ಅಭಿವೃದ್ಧಿಗೆ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಗಮನ ಹರಿಸಿಲ್ಲ. ತಕ್ಷಣ ರಸ್ತೆ ಅಭಿವೃದ್ಧಿಗೆ ಕಾಮಗಾರಿ ಕೈಗೊಳ್ಳಬೇಕು’ ಎಂದು ಜನರು ಆಗ್ರಹಿಸುತ್ತಿದ್ದಾರೆ.</p>.<p>ಕೆಎಸ್ಆರ್ಪಿ ರಸ್ತೆಯೂ ಅಧೋಗತಿ: ಶಿಗ್ಗಾವಿಯಿಂದ ಗಂಗೆಭಾವಿಗೆ ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿವೆ. ಈ ಮಾರ್ಗದ ಹಳ್ಳದ ಬಳಿಯ ರಸ್ತೆಯಲ್ಲಿ ತಗ್ಗುಗುಂಡಿಗಳು ಬಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ.</p>.<p>ಗಂಗೆಭಾವಿ ಕೆ.ಎಸ್.ಆರ್.ಪಿ. 10ನೇ ಪಡೆ ಪೊಲೀಸ್ ಸಿಬ್ಬಂದಿ ನಿತ್ಯ ಓಡಾಡುವುದು ಸಹ ಕಷ್ಟಕರವಾಗಿದೆ. ಅಲ್ಲದೆ, ಈ ಮಾರ್ಗದಲ್ಲಿ ಬರುವ ಹೊಸೂರ, ಯತ್ನಹಳ್ಳಿ, ದುಂಡಸಿ, ಅರಟಾಳ ಸೇರಿದಂತೆ ಹಲವು ಗ್ರಾಮಗಳಿಗೆ ಹೋಗುವ ರಸ್ತೆಯೂ ಹದಗೆಟ್ಟಿದೆ.</p>.<p>‘ಶಿಗ್ಗಾವಿಯಿಂದ ಆಂಜನೇಯ ದೇವಸ್ಥಾನಕ್ಕೆ ಸಾಕಷ್ಟು ಭಕ್ತರು ಸಂಚರಿಸುತ್ತಿದ್ದಾರೆ. ಹದಗೆಟ್ಟ ರಸ್ತೆಯಿಂದ ಭಕ್ತರು ಪರದಾಡುತ್ತಿದ್ದಾರೆ. ಆದರೆ, ಹದಗೆಟ್ಟ ರಸ್ತೆಯನ್ನು ಅಧಿಕಾರಿಗಳು ಸರಿಪಡಿಸುತ್ತಿಲ್ಲ’ ಎಂದು ಮುಖಂಡ ಸಣ್ಣಪ್ಪಗೌಡ ಪಾಟೀಲ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಿಗ್ಗಾವಿ ಪಟ್ಟಣದ ಪ್ರವಾಸಿ ಮಂದಿರದ ಎದುರಿಗಿರುವ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯೂ ಹೆಗೆಟ್ಟಿದೆ. ಆಳವಾದ ತಗ್ಗು–ಗುಂಡಿಗಳು ಬಿದ್ದು, ಸಂಚಾರ ಪ್ರಯಾಸ ಎದುರಾಗಿದೆ.</p>.<p>ರಾಷ್ಟ್ರೀಯ ಹೆದ್ದಾರಿಯಲ್ಲಿ ದೂರದಿಂದ ಬರುವ ಪ್ರಯಾಣಿಕರು, ಶಿಗ್ಗಾವಿ ಪ್ರವೇಶಿಸುತ್ತಿದ್ದಂತೆ ಗುಂಡಿ ರಸ್ತೆಯಲ್ಲಿ ಸಾಗಬೇಕಾಗಿದೆ. ಅಲ್ಲದೆ, ಅನೇಕ ದ್ವಿಚಕ್ರ ವಾಹನಗಳ ಸವಾರರು ಬಿದ್ದು ಗಾಯಗೊಂಡಿದ್ದಾರೆ.</p>.<p>ಪಟ್ಟಣದ ತಹಶೀಲ್ದಾರ್ ಕಚೇರಿಗೆ, ನ್ಯಾಯಾಲಯಕ್ಕೆ ಹೋಗುವ ರಸ್ತೆಗಳು ತೀವ್ರ ಹದಗೆಟ್ಟಿವೆ. ಈ ರಸ್ತೆ ದಾಟುವವರೆಗೆ ಜೀವ ಕೈಯಲ್ಲಿ ಹಿಡಿದುಕೊಂಡು ಜನರು ಸಾಗುವಂತಾಗಿದೆ ಎಂದು ನಿವಾಸಿ ಸಿದ್ದಪ್ಪ ಕಡೆಮನಿ ದೂಡಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದ ಕ್ರಾಸ್ ಬಳಿ ಕನಕದಾಸರ ವೃತ್ತದಲ್ಲಿ ಮತ್ತು ದುರ್ಗಾದೇವಿ ದೇವಸ್ಥಾನದ ವೃತ್ತ ಮತ್ತು ಬಂಕಾಪುರದಿಂದ ಮಾಸನಕಟ್ಟಿ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯೂ ತಗ್ಗುಗುಂಡಿಗಳಿಂದ ಹದಗೆಟ್ಟಿದೆ. ಈ ರಸ್ತೆಗಳಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿವೆ.</p>.<p>‘ಬಂಕಾಪುರದಿಂದ ಸವಣೂರಿಗೆ ಹೋಗುವ ರಸ್ತೆಯೂ ಹಾಳಾಗಿದೆ. ಹೀಗಾಗಿ, ವಾಹನ ಸವಾರರು ಭಯದಲ್ಲಿ ಸಂಚರಿಸುತ್ತಿದ್ದಾರೆ. ಸಾಕಷ್ಟು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ’ ಎಂದು ಬಂಕಾಪುರ ನಿವಾಸಿಗಳಾದ ರುದ್ರೇಶ ಪವಾಡಿ, ಚನ್ನಪ್ಪ ಹಳವಳ್ಳಿ ಅಳಲು ತೋಡಿಕೊಂಡರು.</p>.<p>ಮುಖಂಡ ಬಸವರಾಜ ಹಿರೇಬೆಂಡಿಗೇರಿ, ‘ಮುಖ್ಯ ರಸ್ತೆಗಳು ಮಾತ್ರವಲ್ಲದೇ, ಗ್ರಾಮೀಣ ಪ್ರದೇಶಗಳ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಅಧಿಕಾರಿಗಳು, ಜನಪ್ರತಿನಿಧಿಗಳು ರಸ್ತೆ ದುರಸ್ತಿ ಕಡೆ ಗಮನ ಹರಿಸಬೇಕು. ರಸ್ತೆಗಳ ಅಭಿವೃದ್ಧಿಗೆ ಆದ್ಯತೆ ನೀಡಿ, ಅಪಘಾತ ತಗ್ಗಿಸಬೇಕು’ ಎಂದು ಆಗ್ರಹಿಸಿದರು.</p>.<div><blockquote>ರಸ್ತೆಗಳ ದುರಸ್ತಿಗಾಗಿ ಈಗಾಗಲೇ ಟೆಂಡರ್ ಪ್ರಕಟಣೆಯಾಗಿದೆ. ಸದ್ಯದಲ್ಲಿ ರಸ್ತೆ ದುರಸ್ತಿ ಕಾಮಗಾರಿಗಳನ್ನು ಆರಂಭಿಸಲಾಗುವುದು</blockquote><span class="attribution">ಬಸವರಾಜ ಡಿ.ಬಿ. ಲೋಕೋಪಯೋಗಿ ಇಲಾಖೆ ಶಿಗ್ಗಾವಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>