<p><strong>ಶಿಗ್ಗಾವಿ</strong>: ‘ಮೊಬೈಲ್ ಬಳಕೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಾರಕ. ಮೊಬೈಲ್ ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಸ್ವಯಂ ಜ್ಞಾನ ಜಾಗೃತಿ ಅವಶ್ಯ’ ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ ಕುರಿ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಫಕ್ಕೀರೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜು ಹಾಗೂ ಕೀರ್ತಿ ವಿದ್ಯಾ ಸಂಸ್ಥೆ ವತಿಯಿಂದ ಶುಕ್ರವಾರ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಪುರಸಭೆ ಉಪಾಧ್ಯಕ್ಷ ಆಂಜನೇಯ ಗುಡಿಗೇರಿ ಮಾತನಾಡಿ, ‘ಗುರುವಿನ ಸ್ಥಾನ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ’ ಎಂದರು.</p>.<p>ರಂಭಾಪುರಿ ಕಾಲೇಜು ಉಪನ್ಯಾಸಕ ಶಿವಪ್ರಕಾಶ ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜನವರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಮಮತಾ ಮಾಗಿ ಉದ್ಘಾಟಿಸಿದರು. ಕೀರ್ತಿ ವಿದ್ಯಾ ಸಂಸ್ಥೆ ಅಧ್ಯಕ್ಷ ಜಗದೀಶ ಕುರಂದವಾಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಸ್.ಆರ್.ಕಾರಗಿ, ಪ್ರಾಸ್ತಾವಿಕ ಮಾತನಾಡಿದರು.</p>.<p>ಸಂಸ್ಥೆ ಕಾರ್ಯದರ್ಶಿ ಎಸ್.ಮುತ್ತುರಾಜ, ಸಂಸ್ಥೆ ಆಡಳಿತಾಧಿಕಾರಿ ಕೆ.ಎಸ್. ಗಾಣಿಗೇರ, ನಿವೃತ್ತ ಪ್ರಾಚಾರ್ಯ ಎಂ.ಎನ್. ಮಲ್ಲಾಡದ, ಮುಖ್ಯ ಶಿಕ್ಷಕರಾದ ಎಂ.ಬಿ. ಉಂಕಿ, ವೀರಣ್ಣ ಕುಲಕರ್ಣಿ, ಶ್ರೀನಿವಾಸ ನಾಯಕ, ಪಿ.ಎಂ. ಸತ್ಯಪ್ಪನವರ, ಸದಾಶಿವಸ್ವಾಮಿ ಹಿರೇಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ‘ಮೊಬೈಲ್ ಬಳಕೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಾರಕ. ಮೊಬೈಲ್ ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಸ್ವಯಂ ಜ್ಞಾನ ಜಾಗೃತಿ ಅವಶ್ಯ’ ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್ಐ ಮಂಜುನಾಥ ಕುರಿ ಹೇಳಿದರು.</p>.<p>ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಫಕ್ಕೀರೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜು ಹಾಗೂ ಕೀರ್ತಿ ವಿದ್ಯಾ ಸಂಸ್ಥೆ ವತಿಯಿಂದ ಶುಕ್ರವಾರ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.</p>.<p>ಪುರಸಭೆ ಉಪಾಧ್ಯಕ್ಷ ಆಂಜನೇಯ ಗುಡಿಗೇರಿ ಮಾತನಾಡಿ, ‘ಗುರುವಿನ ಸ್ಥಾನ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ’ ಎಂದರು.</p>.<p>ರಂಭಾಪುರಿ ಕಾಲೇಜು ಉಪನ್ಯಾಸಕ ಶಿವಪ್ರಕಾಶ ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜನವರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಮಮತಾ ಮಾಗಿ ಉದ್ಘಾಟಿಸಿದರು. ಕೀರ್ತಿ ವಿದ್ಯಾ ಸಂಸ್ಥೆ ಅಧ್ಯಕ್ಷ ಜಗದೀಶ ಕುರಂದವಾಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಸ್.ಆರ್.ಕಾರಗಿ, ಪ್ರಾಸ್ತಾವಿಕ ಮಾತನಾಡಿದರು.</p>.<p>ಸಂಸ್ಥೆ ಕಾರ್ಯದರ್ಶಿ ಎಸ್.ಮುತ್ತುರಾಜ, ಸಂಸ್ಥೆ ಆಡಳಿತಾಧಿಕಾರಿ ಕೆ.ಎಸ್. ಗಾಣಿಗೇರ, ನಿವೃತ್ತ ಪ್ರಾಚಾರ್ಯ ಎಂ.ಎನ್. ಮಲ್ಲಾಡದ, ಮುಖ್ಯ ಶಿಕ್ಷಕರಾದ ಎಂ.ಬಿ. ಉಂಕಿ, ವೀರಣ್ಣ ಕುಲಕರ್ಣಿ, ಶ್ರೀನಿವಾಸ ನಾಯಕ, ಪಿ.ಎಂ. ಸತ್ಯಪ್ಪನವರ, ಸದಾಶಿವಸ್ವಾಮಿ ಹಿರೇಮಠ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>