<p><strong>ಹಾವೇರಿ:</strong> ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಟಿಕೆಟ್ಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ. ಶಿಗ್ಗಾವಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆ ಆಯೋಜಿಸಲಾಗಿದ್ದು, ವೀಕ್ಷಕರ ಎದುರೇ ಬಣ ಪ್ರದರ್ಶನ ಮಾಡಲು ಆಕಾಂಕ್ಷಿಗಳು ಸಜ್ಜಾಗಿದ್ದಾರೆ.</p><p>ಪಟ್ಟಣದ ಹನುಂತಗೌಡ್ರ ಪಾಟೀಲ ಕಲ್ಯಾಣ ಭವನ ಒಳಗೆ ಪಕ್ಷದ ಪ್ರಮುಖ ವೇದಿಕೆ ಮಾಡಲಾಗಿದೆ. ಕಲ್ಯಾಣ ಭವನ ಮುಂಭಾಗದಲ್ಲಿ ಆಕಾಂಕ್ಷಿ ಅಜ್ಜಂಪೀರ ಖಾದ್ರಿ ಅವರ ಬೆಂಬಲಿಗರು ಪ್ರತ್ಯೇಕ ಪೆಂಡಾಲ್ ಹಾಕಿದ್ದಾರೆ.</p><p>ಕಾಂಗ್ರೆಸ್ ಸಚಿವರಾದ ಈಶ್ವರ ಖಂಡ್ರೆ, ವಿನಯ ಕುಲಕರ್ಣಿ, ಸಂತೋಷ್ ಲಾಡ ಹಾಗೂ ಇತರೆ ಮುಖಂಡರು ಸಭೆಗೆ ಬರುತ್ತಿದ್ದಾರೆ. ಇದಕ್ಕೂ ಮುನ್ನವೇ ಟಿಕೆಟ್ ಆಕಾಂಕ್ಷಿಗಳ ಪ್ರತ್ಯೇಕ ಪೆಂಡಾಲ್ ನಿರ್ಮಿಸಿಕೊಂಡು ಬಲ ಪ್ರದರ್ಶನ ಮಾಡುತ್ತಿದ್ದಾರೆ.</p><p>'ಪಕ್ಷದ ವೇದಿಕೆಯಲ್ಲಿ ಕುಳಿತರೆ ಖಾದ್ರಿ ಅವರ ಬೆಂಬಲಿಗರು ಎಷ್ಟಿದ್ದಾರೆ ಎಂಬುದು ಗೊತ್ತಾಗುವುದಿಲ್ಲ. ಅದಕ್ಕೆ ಪ್ರತ್ಯೇಕ ಪೆಂಡಾಲ್ ಮಾಡಿದ್ದೇವೆ' ಎಂದು ಬೆಂಬಲಿಗರು ತಿಳಿಸಿದರು.</p><p>ಇನ್ನೊಬ್ಬ ಆಕಾಂಕ್ಷಿ ಯಾಸೀರಖಾನ್ ಪಠಾಣ ಬೆಂಬಲಿಗರು ಪ್ರತ್ಯೇಕ ಜಾಗದಲ್ಲಿ ನಿಂತಿದ್ದಾರೆ. </p><p>ಪಕ್ಷದ ಮುಖಂಡರ ಆಗಮನಕ್ಕಾಗಿ ರಸ್ತೆಯುದ್ದಕ್ಕೂ ಬ್ಯಾನರ್ಗಳನ್ನು ಪ್ರದರ್ಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಶಿಗ್ಗಾವಿ- ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಗೂ ಮುನ್ನವೇ ಟಿಕೆಟ್ಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಪೈಪೋಟಿ ಶುರುವಾಗಿದೆ. ಶಿಗ್ಗಾವಿ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಸಭೆ ಆಯೋಜಿಸಲಾಗಿದ್ದು, ವೀಕ್ಷಕರ ಎದುರೇ ಬಣ ಪ್ರದರ್ಶನ ಮಾಡಲು ಆಕಾಂಕ್ಷಿಗಳು ಸಜ್ಜಾಗಿದ್ದಾರೆ.</p><p>ಪಟ್ಟಣದ ಹನುಂತಗೌಡ್ರ ಪಾಟೀಲ ಕಲ್ಯಾಣ ಭವನ ಒಳಗೆ ಪಕ್ಷದ ಪ್ರಮುಖ ವೇದಿಕೆ ಮಾಡಲಾಗಿದೆ. ಕಲ್ಯಾಣ ಭವನ ಮುಂಭಾಗದಲ್ಲಿ ಆಕಾಂಕ್ಷಿ ಅಜ್ಜಂಪೀರ ಖಾದ್ರಿ ಅವರ ಬೆಂಬಲಿಗರು ಪ್ರತ್ಯೇಕ ಪೆಂಡಾಲ್ ಹಾಕಿದ್ದಾರೆ.</p><p>ಕಾಂಗ್ರೆಸ್ ಸಚಿವರಾದ ಈಶ್ವರ ಖಂಡ್ರೆ, ವಿನಯ ಕುಲಕರ್ಣಿ, ಸಂತೋಷ್ ಲಾಡ ಹಾಗೂ ಇತರೆ ಮುಖಂಡರು ಸಭೆಗೆ ಬರುತ್ತಿದ್ದಾರೆ. ಇದಕ್ಕೂ ಮುನ್ನವೇ ಟಿಕೆಟ್ ಆಕಾಂಕ್ಷಿಗಳ ಪ್ರತ್ಯೇಕ ಪೆಂಡಾಲ್ ನಿರ್ಮಿಸಿಕೊಂಡು ಬಲ ಪ್ರದರ್ಶನ ಮಾಡುತ್ತಿದ್ದಾರೆ.</p><p>'ಪಕ್ಷದ ವೇದಿಕೆಯಲ್ಲಿ ಕುಳಿತರೆ ಖಾದ್ರಿ ಅವರ ಬೆಂಬಲಿಗರು ಎಷ್ಟಿದ್ದಾರೆ ಎಂಬುದು ಗೊತ್ತಾಗುವುದಿಲ್ಲ. ಅದಕ್ಕೆ ಪ್ರತ್ಯೇಕ ಪೆಂಡಾಲ್ ಮಾಡಿದ್ದೇವೆ' ಎಂದು ಬೆಂಬಲಿಗರು ತಿಳಿಸಿದರು.</p><p>ಇನ್ನೊಬ್ಬ ಆಕಾಂಕ್ಷಿ ಯಾಸೀರಖಾನ್ ಪಠಾಣ ಬೆಂಬಲಿಗರು ಪ್ರತ್ಯೇಕ ಜಾಗದಲ್ಲಿ ನಿಂತಿದ್ದಾರೆ. </p><p>ಪಕ್ಷದ ಮುಖಂಡರ ಆಗಮನಕ್ಕಾಗಿ ರಸ್ತೆಯುದ್ದಕ್ಕೂ ಬ್ಯಾನರ್ಗಳನ್ನು ಪ್ರದರ್ಶಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>