<p>ಶಿಗ್ಗಾವಿ: ದೇಹದ ಅವಶ್ಯಕತೆಗೆ ತಕ್ಕಂತೆ ಆಹಾರ ಸೇವನೆ ಮಾಡಿದರೆ ಆರೋಗ್ಯಯುತ ಸಮಾಜ ಕಟ್ಟಲು ಸಾಧ್ಯ. ಹೊರತು, ನಾಲಿಗೆಯ ರುಚಿಗೆ ಜೋತುಬಿದ್ದು ತಿಂದರೆ ಆರೋಗ್ಯ ಹದಗೆಡುತ್ತಿದೆ ಎಂಬುದನ್ನು ಮರೆಯಬಾರದು ಎಂದು ವೈದ್ಯೆ ಡಾ.ಲತಾ ನಿಡಗುಂದಿ ಹೇಳಿದರು.</p>.<p>ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ವಿಶ್ವ ಆರೋಗ್ಯ ದಿನಾಚರಣೆಯ ಆರೋಗ್ಯ ಸಪ್ತಾಹದ ಅಂಗವಾಗಿ ನಡೆದ ‘ಆರೋಗ್ಯಕರ ಜೀವನ ಶೈಲಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಾವು ವಾಸಿಸುವ ಪ್ರದೇಶಕ್ಕೆ ಅನುಸಾರವಾಗಿ ನಮ್ಮ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕು, ಇಂದಿನ ಯುವಕರು ಪಾಶ್ಮಿಮಾತ್ಯ ಫಾಸ್ಟ್ಫುಡ್ ಸಂಸ್ಕೃತಿಯ ಗೀಳನ್ನು ಮೈಗೂಡಿಸಿಕೊಂಡಿದ್ದರಿಂದಲೇ ಅವರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎ.ಸಿ.ವಾಲಿ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಪ್ರೊ. ಆನಂದ ಇಂದೂರ , ಯೂತ್ ರೆಡ್ಕ್ರಾಸ್ ಘಟಕದ ಸಂಚಾಲಕ ಆರ್.ಪಿ.ನದಾಫ್ , ವಿನಯ ಕುಲಕರ್ಣಿ ವಂದಿಸಿದರು. ಪ್ರೊ. ಶೈಲಜಾ ಹುದ್ದಾರ, ಮುತ್ತು ಸುಣಗಾರ, ಮೇಘ ಚಲವಾದಿ, ಲತಾ ಕೋಪರ್ಡೆ, ಪ್ರಬಲ ದೊಡ್ಡಣ್ಣನವರ, ಪ್ರೊ.ಇಮ್ತಿಯಾಜ್ ಖಾನ್, ಪ್ರೊ. ಚೇತನ್ ಬಿಂಗಾಪುರ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-428557763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿಗ್ಗಾವಿ: ದೇಹದ ಅವಶ್ಯಕತೆಗೆ ತಕ್ಕಂತೆ ಆಹಾರ ಸೇವನೆ ಮಾಡಿದರೆ ಆರೋಗ್ಯಯುತ ಸಮಾಜ ಕಟ್ಟಲು ಸಾಧ್ಯ. ಹೊರತು, ನಾಲಿಗೆಯ ರುಚಿಗೆ ಜೋತುಬಿದ್ದು ತಿಂದರೆ ಆರೋಗ್ಯ ಹದಗೆಡುತ್ತಿದೆ ಎಂಬುದನ್ನು ಮರೆಯಬಾರದು ಎಂದು ವೈದ್ಯೆ ಡಾ.ಲತಾ ನಿಡಗುಂದಿ ಹೇಳಿದರು.</p>.<p>ಪಟ್ಟಣದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ವಿಶ್ವ ಆರೋಗ್ಯ ದಿನಾಚರಣೆಯ ಆರೋಗ್ಯ ಸಪ್ತಾಹದ ಅಂಗವಾಗಿ ನಡೆದ ‘ಆರೋಗ್ಯಕರ ಜೀವನ ಶೈಲಿ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ನಾವು ವಾಸಿಸುವ ಪ್ರದೇಶಕ್ಕೆ ಅನುಸಾರವಾಗಿ ನಮ್ಮ ಆಹಾರ ಪದ್ಧತಿಯನ್ನು ಮೈಗೂಡಿಸಿಕೊಳ್ಳಬೇಕು, ಇಂದಿನ ಯುವಕರು ಪಾಶ್ಮಿಮಾತ್ಯ ಫಾಸ್ಟ್ಫುಡ್ ಸಂಸ್ಕೃತಿಯ ಗೀಳನ್ನು ಮೈಗೂಡಿಸಿಕೊಂಡಿದ್ದರಿಂದಲೇ ಅವರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಎ.ಸಿ.ವಾಲಿ ಮಾತನಾಡಿದರು.</p>.<p>ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಧಿಕಾರಿ ಪ್ರೊ. ಆನಂದ ಇಂದೂರ , ಯೂತ್ ರೆಡ್ಕ್ರಾಸ್ ಘಟಕದ ಸಂಚಾಲಕ ಆರ್.ಪಿ.ನದಾಫ್ , ವಿನಯ ಕುಲಕರ್ಣಿ ವಂದಿಸಿದರು. ಪ್ರೊ. ಶೈಲಜಾ ಹುದ್ದಾರ, ಮುತ್ತು ಸುಣಗಾರ, ಮೇಘ ಚಲವಾದಿ, ಲತಾ ಕೋಪರ್ಡೆ, ಪ್ರಬಲ ದೊಡ್ಡಣ್ಣನವರ, ಪ್ರೊ.ಇಮ್ತಿಯಾಜ್ ಖಾನ್, ಪ್ರೊ. ಚೇತನ್ ಬಿಂಗಾಪುರ ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರು, ಸಿಬ್ಬಂದಿ ಇದ್ದರು</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-22-428557763</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>