<p><strong>ಶಿಗ್ಗಾವಿ:</strong> ವೈದ್ಯರು ನಿತ್ಯದ ಜನ ಸೇವೆ ಮಾಡುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಅದರಿಂದ ಆರೋಗ್ಯಯುತ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು ಮೃತ್ಯುಂಜಯ ಆಸ್ಪತ್ರೆ ಮುಖ್ಯ ವೈದ್ಯ ಡಾ.ಎಂ.ಎಂ.ತಿರ್ಲಾಪುರ ಹೇಳಿದರು.</p>.<p>ಪಟ್ಟಣದ ಫಿನಿಕ್ಸ್ ಇಂಟರನ್ಯಾಷನಲ್ ಸ್ಕೂಲ್ ಆವರಣದಲ್ಲಿ ಮಂಗಳವಾರ ನಡೆದ ವಿಶ್ವ ವೈದ್ಯರ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಯಕದ ಮೌಲ್ಯ ಹೆಚ್ಚಳವಾಗಲು ಅದರಲ್ಲಿ ಸೇವಾ ಮನೋಭಾವನೆ ಮುಖ್ಯವಾಗಿದೆ. ಕಾಯಕದ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಕಾರ್ಯ ನಿರ್ವಹಿಸಿದಾಗ ಯಶಸ್ವಿ ಬೆನ್ನಟ್ಟಿ ಬರಲು ಸಾಧ್ಯವಿದೆ. ಅಂತಹ ಕಾಯಕ ನಿಷ್ಠೆ ನಮ್ಮದಾಗಬೇಕು. ಸಮಾಜಕ್ಕೆ ಉತ್ತಮ ಸಂದೇಶ ನೀಡುವುದು ಅವಶ್ಯವಾಗಿದೆ. ಅದಕ್ಕೆ ಸಮಾಜವು ಸಹ ಬೆಂಬಲವಾಗಿ ನಿಲ್ಲಬೇಕು ಎಂದರು.</p>.<p>ಮಕ್ಕಳ ತಜ್ಞ ಡಾ.ಅವಿನಾಶ ರಾಜಮಾನೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಫಿನಿಕ್ಸ್ ಇಂಟರನ್ಯಾಷನಲ್ ಸ್ಕೂಲ್ ಉಪಾಧ್ಯಕ್ಷ ನರಹರಿ ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೃತ್ಯುಂಜಯ ಆಸ್ಪತ್ರೆ ವೈದ್ಯೆ ಡಾ.ರಾಣಿ ತಿರ್ಲಾಪುರ, ಪ್ರಾಚಾರ್ಯ ಗಂಗಾಧರ, ಶಶಾಂಕ ದೇಶಪಾಂಡೆ ಸೇರಿದಂತೆ ಸ್ಕೂಲ ಶಿಕ್ಷಕರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ:</strong> ವೈದ್ಯರು ನಿತ್ಯದ ಜನ ಸೇವೆ ಮಾಡುವ ಮೂಲಕ ಸಮಾಜಮುಖಿ ಕಾರ್ಯ ಮಾಡುತ್ತಿದ್ದಾರೆ. ಅದರಿಂದ ಆರೋಗ್ಯಯುತ ಸಮಾಜ ನಿರ್ಮಾಣವಾಗಲು ಸಾಧ್ಯವಾಗಿದೆ ಎಂದು ಮೃತ್ಯುಂಜಯ ಆಸ್ಪತ್ರೆ ಮುಖ್ಯ ವೈದ್ಯ ಡಾ.ಎಂ.ಎಂ.ತಿರ್ಲಾಪುರ ಹೇಳಿದರು.</p>.<p>ಪಟ್ಟಣದ ಫಿನಿಕ್ಸ್ ಇಂಟರನ್ಯಾಷನಲ್ ಸ್ಕೂಲ್ ಆವರಣದಲ್ಲಿ ಮಂಗಳವಾರ ನಡೆದ ವಿಶ್ವ ವೈದ್ಯರ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>ಕಾಯಕದ ಮೌಲ್ಯ ಹೆಚ್ಚಳವಾಗಲು ಅದರಲ್ಲಿ ಸೇವಾ ಮನೋಭಾವನೆ ಮುಖ್ಯವಾಗಿದೆ. ಕಾಯಕದ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಕಾರ್ಯ ನಿರ್ವಹಿಸಿದಾಗ ಯಶಸ್ವಿ ಬೆನ್ನಟ್ಟಿ ಬರಲು ಸಾಧ್ಯವಿದೆ. ಅಂತಹ ಕಾಯಕ ನಿಷ್ಠೆ ನಮ್ಮದಾಗಬೇಕು. ಸಮಾಜಕ್ಕೆ ಉತ್ತಮ ಸಂದೇಶ ನೀಡುವುದು ಅವಶ್ಯವಾಗಿದೆ. ಅದಕ್ಕೆ ಸಮಾಜವು ಸಹ ಬೆಂಬಲವಾಗಿ ನಿಲ್ಲಬೇಕು ಎಂದರು.</p>.<p>ಮಕ್ಕಳ ತಜ್ಞ ಡಾ.ಅವಿನಾಶ ರಾಜಮಾನೆ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.</p>.<p>ಫಿನಿಕ್ಸ್ ಇಂಟರನ್ಯಾಷನಲ್ ಸ್ಕೂಲ್ ಉಪಾಧ್ಯಕ್ಷ ನರಹರಿ ಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮೃತ್ಯುಂಜಯ ಆಸ್ಪತ್ರೆ ವೈದ್ಯೆ ಡಾ.ರಾಣಿ ತಿರ್ಲಾಪುರ, ಪ್ರಾಚಾರ್ಯ ಗಂಗಾಧರ, ಶಶಾಂಕ ದೇಶಪಾಂಡೆ ಸೇರಿದಂತೆ ಸ್ಕೂಲ ಶಿಕ್ಷಕರು, ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>