<p><strong>ಶಿಗ್ಗಾವಿ</strong>: ಶಾಶ್ವತ ನೀರಾವರಿ ಯೋಜನೆ ಹಾಗೂ ರೈತರ ಆರ್ಥಿಕ ಮಟ್ಟ ಹೆಚ್ಚಿಸುವ ಉದ್ದೇಶದಿಂದ ವರದಾ-ಬೇಡ್ತಿ ನದಿಗಳ ಜೋಡಣೆ ಅವಶ್ಯಕವಾಗಿದೆ. ಅದರಿಂದ ಈ ಭಾಗದ ರೈತರ ಬವಣೆ ತಡೆಯಲು ಸಾಧ್ಯ ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರ್ಕಾರ ಈಗಾಗಲೆ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು, ಪುರಸಭೆ ಸದಸ್ಯರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಹೇಳಿದರು.</p>.<p>ತಹಶೀಲ್ದಾರ್ ಯಲ್ಲಪ್ಪ ಗೋಣಣ್ಣವರ ಧ್ವಜಾರೋಹಣ ನೆರವೇರಿಸಿದರು. ದೇಶ ಸರ್ವಾಂಗೀಣ ಅಭಿವೃದ್ಧಿಯಾಗಿದ್ದು, ವಿಶ್ವಗುರು ಸ್ಥಾನ ಪಡೆದಿದೆ ಎಂದರು.</p>.<p>ಸೈನಿಕರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ರಂಗದಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು. ಗಂಗೆಭಾವಿ 10ನೇ ಕೆ.ಎಸ್.ಆರ್.ಪಿ 10ನೇ ಪಡೆ ಪೊಲೀಸರು, ವಿವಿಧ ಶಾಲೆ ಕಾಲೇಜಿನ ವಿದ್ಯಾರ್ಥಿಳಿಂದ ಆಪರ್ಷಕ ಪಥ ಸಂಚಲನ ಜರುಗಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿದವು.</p>.<p>ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ ಸಾಳೊಂಕಿ, ಬಿಇಒ ಎಂ.ಬಿ. ಅಂಬಿಗೇರ ಪ್ರಗತಿಪರ ರೈತ ಫಕ್ಕಿರಪ್ಪ ಕುಂದೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ಶಾಶ್ವತ ನೀರಾವರಿ ಯೋಜನೆ ಹಾಗೂ ರೈತರ ಆರ್ಥಿಕ ಮಟ್ಟ ಹೆಚ್ಚಿಸುವ ಉದ್ದೇಶದಿಂದ ವರದಾ-ಬೇಡ್ತಿ ನದಿಗಳ ಜೋಡಣೆ ಅವಶ್ಯಕವಾಗಿದೆ. ಅದರಿಂದ ಈ ಭಾಗದ ರೈತರ ಬವಣೆ ತಡೆಯಲು ಸಾಧ್ಯ ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರ್ಕಾರ ಈಗಾಗಲೆ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು, ಪುರಸಭೆ ಸದಸ್ಯರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಹೇಳಿದರು.</p>.<p>ತಹಶೀಲ್ದಾರ್ ಯಲ್ಲಪ್ಪ ಗೋಣಣ್ಣವರ ಧ್ವಜಾರೋಹಣ ನೆರವೇರಿಸಿದರು. ದೇಶ ಸರ್ವಾಂಗೀಣ ಅಭಿವೃದ್ಧಿಯಾಗಿದ್ದು, ವಿಶ್ವಗುರು ಸ್ಥಾನ ಪಡೆದಿದೆ ಎಂದರು.</p>.<p>ಸೈನಿಕರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ರಂಗದಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು. ಗಂಗೆಭಾವಿ 10ನೇ ಕೆ.ಎಸ್.ಆರ್.ಪಿ 10ನೇ ಪಡೆ ಪೊಲೀಸರು, ವಿವಿಧ ಶಾಲೆ ಕಾಲೇಜಿನ ವಿದ್ಯಾರ್ಥಿಳಿಂದ ಆಪರ್ಷಕ ಪಥ ಸಂಚಲನ ಜರುಗಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿದವು.</p>.<p>ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ ಸಾಳೊಂಕಿ, ಬಿಇಒ ಎಂ.ಬಿ. ಅಂಬಿಗೇರ ಪ್ರಗತಿಪರ ರೈತ ಫಕ್ಕಿರಪ್ಪ ಕುಂದೂರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>