<p><strong>ಶಿಗ್ಗಾವಿ</strong>: ತಾಲ್ಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳು ಸೆಮಿಸ್ಟರ್ ಫಲಿತಾಂಶ ಹಾಗೂ ಅಂಕಪಟ್ಟಿ ಸೇರಿದಂತೆ ಮೂಲ ಸೌಕರ್ಯಗಳ ಪರಿಹಾರಕ್ಕಾಗಿ ಒತ್ತಾಯಿಸಿ ಎಸ್ಎಫ್ಐ ಘಟಕ ನೇತೃತ್ವದಲ್ಲಿ ಸಭೆ ನಡೆಸಿ ಅನಿರ್ದಿಷ್ಟಾವಧಿ ಧರಣಿ ಹೋರಾಟಕ್ಕೆ ತೀರ್ಮಾನಿಸಿದರು.</p>.<p>ಎಲ್ಲ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಅನೇಕ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರೂ ಕೆಲವು ಬೇಡಿಕೆ ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು</p>.<p>ಜ. 27 ರಂದು ಫಲಿತಾಂಶ ಬಿಡುಗಡೆಗಾಗಿ ಕುಲಪತಿಗಳು ಭರವಸೆ ನೀಡಿದ್ದರು ಅಲ್ಲಿಯವರೆಗೆ ಕಾಯುತ್ತೇವೆ. ಒಂದು ವೇಳೆ ಭರವಸೆ ಹುಸಿಯಾದರೆ ವಿವಿ ಎದುರು ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್, ಅರುಣ್ ಪಾಂಡೆ, ಸೌಭಾಗ್ಯ ಕೋಳಿವಾಡ ಎಚ್ಚರಿಕೆ ನೀಡಿದರು.</p>.<p>ಕಾವ್ಯ ಎಂ.ಕೆ, ಪ್ರತಿಭಾ.ಪಿ.ಬಿ, ಬಸವರಾಜ ಬಡಿಗೇರ, ಚನ್ನಪ್ಪ, ಸಹ ಕಾರ್ಯದರ್ಶಿ ಗೀತಾ.ಕೆ, ಶಿಲ್ಪಾ.ಎಸ್, ವಿನೋದಕುಮಾರ್. ಡಿ, ಉಮೇಶ್.ಟಿ, ಪ್ರಶಾಂತ, ಸಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಗ್ಗಾವಿ</strong>: ತಾಲ್ಲೂಕಿನ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಆವರಣದಲ್ಲಿ ಶನಿವಾರ ವಿದ್ಯಾರ್ಥಿಗಳು ಸೆಮಿಸ್ಟರ್ ಫಲಿತಾಂಶ ಹಾಗೂ ಅಂಕಪಟ್ಟಿ ಸೇರಿದಂತೆ ಮೂಲ ಸೌಕರ್ಯಗಳ ಪರಿಹಾರಕ್ಕಾಗಿ ಒತ್ತಾಯಿಸಿ ಎಸ್ಎಫ್ಐ ಘಟಕ ನೇತೃತ್ವದಲ್ಲಿ ಸಭೆ ನಡೆಸಿ ಅನಿರ್ದಿಷ್ಟಾವಧಿ ಧರಣಿ ಹೋರಾಟಕ್ಕೆ ತೀರ್ಮಾನಿಸಿದರು.</p>.<p>ಎಲ್ಲ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವೀತಿಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಅನೇಕ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮನವಿ ಸಲ್ಲಿಸಿದರೂ ಕೆಲವು ಬೇಡಿಕೆ ಈಡೇರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು</p>.<p>ಜ. 27 ರಂದು ಫಲಿತಾಂಶ ಬಿಡುಗಡೆಗಾಗಿ ಕುಲಪತಿಗಳು ಭರವಸೆ ನೀಡಿದ್ದರು ಅಲ್ಲಿಯವರೆಗೆ ಕಾಯುತ್ತೇವೆ. ಒಂದು ವೇಳೆ ಭರವಸೆ ಹುಸಿಯಾದರೆ ವಿವಿ ಎದುರು ಧರಣಿ ನಡೆಸಲಾಗುವುದು ಎಂದು ಸಂಘಟನೆಯ ಜಿಲ್ಲಾ ಅಧ್ಯಕ್ಷ ಬಸವರಾಜ ಎಸ್, ಅರುಣ್ ಪಾಂಡೆ, ಸೌಭಾಗ್ಯ ಕೋಳಿವಾಡ ಎಚ್ಚರಿಕೆ ನೀಡಿದರು.</p>.<p>ಕಾವ್ಯ ಎಂ.ಕೆ, ಪ್ರತಿಭಾ.ಪಿ.ಬಿ, ಬಸವರಾಜ ಬಡಿಗೇರ, ಚನ್ನಪ್ಪ, ಸಹ ಕಾರ್ಯದರ್ಶಿ ಗೀತಾ.ಕೆ, ಶಿಲ್ಪಾ.ಎಸ್, ವಿನೋದಕುಮಾರ್. ಡಿ, ಉಮೇಶ್.ಟಿ, ಪ್ರಶಾಂತ, ಸಂಜಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>