ಹಾನಗಲ್ ಪಟ್ಟಣದಲ್ಲಿ ಭಾನುವಾರ ಬಿಜೆಪಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿ, ಹಾನಗಲ್ ಕ್ಷೇತ್ರದ ಜನರು ಜಾಣರಿದ್ದಾರೆ. ಅವರಿಗೆ ಯಾರನ್ನು ಮನೆಗೆ ಕಳುಹಿಸಬೇಕು, ಯಾರನ್ನು ವಿಧಾನಸೌಧಕ್ಕೆ ಕಳುಹಿಸಬೇಕು ಎಂದು ಚೆನ್ನಾಗಿ ಗೊತ್ತಿದೆ. ಕಡ್ಡಿನಾ ಗುಡ್ಡ ಮಾಡೋದೂ, ಸುಳ್ಳನ್ನು ಸತ್ಯ ಎಂದು ಕಾಂಗ್ರೆಸ್ ಪಕ್ಷದವರು ನಂಬಿಸುತ್ತಾರೆ. ಹಸಿಸುಳ್ಳು ಕಾಂಗ್ರೆಸ್ನವರ ಮನೆ ದೇವರು ಎಂದು ವಾಗ್ದಾಳಿ ನಡೆಸಿದರು.