<p><strong>ಹಾವೇರಿ:</strong> ‘₹5 ಲಕ್ಷ ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಸಚಿವರಿಗೆ ಘೇರಾವ್ ಹಾಕುತ್ತೇವೆ’ ಎಂದು ರೈತರು ಹಾವೇರಿ ನಗರದ ಪ್ರವಾಸಿ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. </p><p>ರೈತ ಸಂಘದಿಂದ ₹50 ಲಕ್ಷ ಕೊಡುತ್ತೇವೆ. ಸಚಿವರು ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ರೈತರು ಗುಡುಗಿದರು. ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಶಾಸಕರೊಂದಿಗೆ ಬಂದ ಸಚಿವ ಶಿವಾನಂದ ಪಾಟೀಲ ಅವರು ರೈತರ ಅಹವಾಲುಗಳನ್ನು ಆಲಿಸಿದರು. </p><p><strong>ಪುಟಗೋಸಿ ಪರಿಹಾರಕ್ಕಲ್ಲ:</strong></p><p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಅವರು ರೈತರ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಬೆಳೆನಷ್ಟ ಮತ್ತು ಸಾಲಬಾಧೆಯಿಂದ ರೈತ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ಸರ್ಕಾರದ ಪುಟಗೋಸಿ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭರವಸೆ ಇಟ್ಟು ನಿಮ್ಮ ಸರ್ಕಾರ ತಂದಿದ್ದೇವೆ ಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.</p><p>ಬಳಿಕ ಸಚಿವ ಮಾತನಾಡಿ, ‘ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ನಾನು ಹೇಳಿಲ್ಲ. ಅದನ್ನು ಕೆಲ ಮಾಧ್ಯಮದವರು ತಪ್ಪಾಗಿ ಬಿಂಬಿಸಿದ್ದಾರೆ. ಆದರೂ, ನಿಮ್ಮ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿ, ವಿವಾದಕ್ಕೆ ತೆರೆ ಎಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘₹5 ಲಕ್ಷ ಪರಿಹಾರಕ್ಕಾಗಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಹೇಳಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲರು ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಸಚಿವರಿಗೆ ಘೇರಾವ್ ಹಾಕುತ್ತೇವೆ’ ಎಂದು ರೈತರು ಹಾವೇರಿ ನಗರದ ಪ್ರವಾಸಿ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಸಿದರು. </p><p>ರೈತ ಸಂಘದಿಂದ ₹50 ಲಕ್ಷ ಕೊಡುತ್ತೇವೆ. ಸಚಿವರು ಆತ್ಮಹತ್ಯೆ ಮಾಡಿಕೊಳ್ಳಲಿ ಎಂದು ರೈತರು ಗುಡುಗಿದರು. ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಶಾಸಕರೊಂದಿಗೆ ಬಂದ ಸಚಿವ ಶಿವಾನಂದ ಪಾಟೀಲ ಅವರು ರೈತರ ಅಹವಾಲುಗಳನ್ನು ಆಲಿಸಿದರು. </p><p><strong>ಪುಟಗೋಸಿ ಪರಿಹಾರಕ್ಕಲ್ಲ:</strong></p><p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಅವರು ರೈತರ ಸಮಸ್ಯೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟರು. ಬೆಳೆನಷ್ಟ ಮತ್ತು ಸಾಲಬಾಧೆಯಿಂದ ರೈತ ಮಾನ ಮರ್ಯಾದೆಗೆ ಅಂಜಿ ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾನೆ. ಸರ್ಕಾರದ ಪುಟಗೋಸಿ ಪರಿಹಾರಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭರವಸೆ ಇಟ್ಟು ನಿಮ್ಮ ಸರ್ಕಾರ ತಂದಿದ್ದೇವೆ ಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.</p><p>ಬಳಿಕ ಸಚಿವ ಮಾತನಾಡಿ, ‘ಪರಿಹಾರಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆಂದು ನಾನು ಹೇಳಿಲ್ಲ. ಅದನ್ನು ಕೆಲ ಮಾಧ್ಯಮದವರು ತಪ್ಪಾಗಿ ಬಿಂಬಿಸಿದ್ದಾರೆ. ಆದರೂ, ನಿಮ್ಮ ಮನಸ್ಸಿಗೆ ನೋವಾಗಿದ್ದರೆ, ನಾನು ಕ್ಷಮೆ ಯಾಚಿಸುತ್ತೇನೆ’ ಎಂದು ಹೇಳಿ, ವಿವಾದಕ್ಕೆ ತೆರೆ ಎಳೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>