ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಕಂಡ ವಿಶಿಷ್ಟ ಮುತ್ಸದ್ದಿ’

ಶಾಸಕ ನೆಹರು ಓಲೇಕಾರ ಹೇಳಿಕೆ
Last Updated 10 ಜೂನ್ 2021, 17:49 IST
ಅಕ್ಷರ ಗಾತ್ರ

ಹಾವೇರಿ: ‘ಸಿ.ಎಂ. ಉದಾಸಿ ಅವರು ರಾಜ್ಯ ಕಂಡ ವಿಶಿಷ್ಟ ಮುತ್ಸದ್ದಿ ರಾಜಕಾರಣಿ. ಆರು ಬಾರಿ ಶಾಸಕರಾಗಿ, ಸಚಿವರಾದರೂ ಯಾವುದೇ ಗರ್ವವಿಲ್ಲದೆ ಸಾಮಾನ್ಯ ಕಾರ್ಯಕರ್ತರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದರು’ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆದ ಶಾಸಕ ಸಿ.ಎಂ. ಉದಾಸಿ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.

‘ಪ್ರತಿಯೊಬ್ಬ ಕಾರ್ಯಕರ್ತರನ್ನು ಹೆಸರಿಡಿದು ಮಾತನಾಡುವಷ್ಟು ಜ್ಞಾಪಕ ಶಕ್ತಿ ಅವರಿಗಿತ್ತು. ಯುವ ರಾಜಕಾರಣಿಗಳಿಗೆ ಮಾರ್ಗದರ್ಶನ ಮಾಡುತ್ತಿದ್ದರು. ಅವರ ಅನುಪಸ್ಥಿತಿ ನಮ್ಮೆಲ್ಲರನ್ನೂ ಕಾಡುತ್ತಿದೆ’ ಎಂದರು.

ಮಾಜಿ ಶಾಸಕ ಶಿವರಾಜ ಸಜ್ಜನರ ಮಾತನಾಡಿ, ‘ಸಿ.ಎಂ. ಉದಾಸಿಯವರು ನನಗೆ ಹಿರಿಯಣ್ಣನ ಹಾಗೆ ರಾಜಕೀಯದಲ್ಲಿ ಮಾರ್ಗದರ್ಶನ ಮಾಡಿದರು. ಅವರು ನಮ್ಮನ್ನು ಅಗಲಿರುವುದು ತುಂಬಲಾರದ ನಷ್ಟವನ್ನು ಉಂಟು ಮಾಡಿದೆ’ ಎಂದರು.

ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ‘ನಮ್ಮ ಜಿಲ್ಲೆ ಇಂದು ಅನಾಥವಾಗಿದೆ. ಮನೆಯ ಹಿರಿಯಣ್ಣನನ್ನು ಕಳೆದುಕೊಂಡಂತೆ ನೋವಾಗುತ್ತಿದೆ’ ಎಂದು ಭಾವುಕರಾಗಿ ನುಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಶಶಿಧರ ಹೊಸಳ್ಳಿ, ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT