ಮೂಡಬಿದರಿ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಮೋಹನ್ ಆಳ್ವಾಸ್ ಅವರಿಗೂ ‘ಶ್ರೇಷ್ಠ ಕನ್ನಡಿಗರು’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಾಜಿ ಸಚಿವ ಸಿ.ಸಿ.ಪಾಟೀಲ ಮಾತನಾಡಿದರು. ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ವಿರಕ್ತಮಠದ ಸಂಗನಬಸವ ಸ್ವಾಮೀಜಿ ಮಾತನಾಡಿದರು. ಮಾಜಿ ಶಾಸಕ ಅಜ್ಜಂಪೀರ್ ಎಸ್. ಖಾದ್ರಿ, ಶಿವರಾಜ ಸಜ್ಜನ, ಯುವ ಉದ್ಯಮಿ ಭರತ ಬೊಮ್ಮಾಯಿ, ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ನರಹರಿ ಕಟ್ಟಿ, ಬಸವರಾಜ ಅರಬಗೊಂಡ ಇದ್ದರು.
ನಂತರ ಮೂಡಬಿದರಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.