<p><strong>ವಿಜಯಪುರ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹಾಗೂ ಅವರಿಗೆ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಜ.20 ರಂದು ಬೆಂಗಳೂರಿನಲ್ಲಿ ರೈತರ ಅಧಿಕಾರ ದಿನ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಅಧಿಕಾರ ದಿನದ ಅಂಗವಾಗಿ ಅಂದು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್ನಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.</p>.<p><strong>ನ್ಯಾಯಾಂಗ ತನಿಖೆಗೆ ಆಗ್ರಹ: </strong>ಯಡಿಯೂರಪ್ಪನವರಿಗೆ ಸಂಬಂಧಿಸಿದ ಸಿ.ಡಿ. ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಾಗೂ ಹಣ ನೀಡಿ ಕೆಲವರು ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.</p>.<p>ಇಂತಹ ಆರೋಪಗಳನ್ನು ಕೇಳುವ ಬದಲು ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕರಾಳ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ಹಾಗೂ ಅವರಿಗೆ ಆತ್ಮ ಸ್ಥೈರ್ಯ ತುಂಬುವ ಉದ್ದೇಶದಿಂದ ಕೆಪಿಸಿಸಿ ವತಿಯಿಂದ ಜ.20 ರಂದು ಬೆಂಗಳೂರಿನಲ್ಲಿ ರೈತರ ಅಧಿಕಾರ ದಿನ ಆಯೋಜಿಸಲಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಅಧಿಕಾರ ದಿನದ ಅಂಗವಾಗಿ ಅಂದು ಬೆಳಿಗ್ಗೆ 10.30ಕ್ಕೆ ಫ್ರೀಡಂ ಪಾರ್ಕ್ನಿಂದ ಬೃಹತ್ ಪಾದಯಾತ್ರೆ ಮೂಲಕ ತೆರಳಿ ರಾಜ್ಯಪಾಲರ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಹೇಳಿದರು.</p>.<p><strong>ನ್ಯಾಯಾಂಗ ತನಿಖೆಗೆ ಆಗ್ರಹ: </strong>ಯಡಿಯೂರಪ್ಪನವರಿಗೆ ಸಂಬಂಧಿಸಿದ ಸಿ.ಡಿ. ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿ ಹಾಗೂ ಹಣ ನೀಡಿ ಕೆಲವರು ಸಚಿವರಾಗಿದ್ದಾರೆ ಎಂದು ಬಿಜೆಪಿ ಶಾಸಕರು ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಹೈಕೋರ್ಟ್ನ ಹಾಲಿ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.</p>.<p>ಇಂತಹ ಆರೋಪಗಳನ್ನು ಕೇಳುವ ಬದಲು ಮುಖ್ಯಮಂತ್ರಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರಬರಬೇಕು ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>